ಈ ಬಾರಿ ಗಾಂಧಿ ಜಯಂತಿ ವಿನೂತನ ಆಚರಣೆ
ಅ. 2ರಿಂದ 31ರ ವರೆಗೆ ಗ್ರಾಪಂ ಮಟ್ಟದಲ್ಲೂ ಸ್ವತ್ಛತಾ ಕಾರ್ಯಕ್ರಮ: ಜಿಲ್ಲಾಧಿಕಾರಿ
Team Udayavani, Sep 24, 2019, 9:19 AM IST
ದಾವಣಗೆರೆ: ನಗರದ 45 ವಾರ್ಡ್ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಕ್ಟೋಬರ್ 2 ರಿಂದ 31ರ ವರೆಗೆ ಪ್ರತಿದಿನ ಬೆಳಿಗ್ಗೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳುವ ಮೂಲಕ ಈ ಬಾರಿ ಗಾಂಧಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ತಿಳಿಸಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ ಶಾಸ್ತ್ರಿ ಅವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸ್ವಚ್ಛ ಮೇವ ಜಯತೇ ಹಾಗೂಸ್ವಚ್ಛತಾ ಸೇವಾ ಕಾರ್ಯಕ್ರಮಗಳಿಗೆ ಅರ್ಥ ಬರಬೇಕೆಂದರೆ ಸ್ವತ್ಛತಾ ಕಾರ್ಯ ನಮ್ಮಿಂದಲೇಆರಂಭವಾಗಬೇಕು.
ಬೇರೆಯವರಲ್ಲಿ ಬದಲಾವಣೆ ಬಯಸುವ ಮೊದಲು ನಾವು ಬದಲಾಗಬೇಕು. ಈ ಹಿನ್ನೆಲೆಯಲ್ಲಿ ಈ ಬಾರಿ ಆಚರಿಸುವ ಗಾಂಧಿ ಜಯಂತಿ ಅರ್ಥಪೂರ್ಣವಾಗಿರಬೇಕು. ಈ ಸ್ವಚ್ಛತಾ ಕಾರ್ಯಕ್ಕೆ ತಂಡ ರಚಿಸಿ, ಜಿಲ್ಲಾಮಟ್ಟದ ಅಧಿಕಾರಿಗಳನ್ನು ಒಂದೊಂದು ತಂಡದ ಮೇಲ್ವಿಚಾರಕರನ್ನಾಗಿ ನೇಮಿಸಲಾಗುವುದು ಎಂದರು.
ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಗಳಲ್ಲಿಯೂ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯುವಂತೆ ನೋಡಿಕೊಳ್ಳಬೇಕು. ಹಾಗೆ ಮಾಡುವುದರಿಂದ ಗಾಂಧಿ ಕಂಡ ಕನಸು ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿಯವರ ಆಶಯ ಈಡೇರಿಸಿದಂತಾಗುತ್ತದೆ. ಸ್ವಚ್ಛತಾ ಕಾರ್ಯಕ್ಕೆ ನೆಹರು ಯುವ ಕೇಂದ್ರ, ಎನ್.ಜಿ.ಓ ಗಳು, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೆ„ಡ್ಸ್ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಖಾದಿ ಗ್ರಾಮೋದ್ಯೋಗ ಮಂಡಳಿ ಅಧಿಕಾರಿ ಮಾತನಾಡಿ, ಅಂದು ಎಲ್ಲರೂ ಖಾದಿ ವಸ್ತ್ರಗಳನ್ನು ಧರಿಸಿದರೆ ಜಯಂತಿಗೆ ಅರ್ಥ ಬರಲಿದೆ. ಖಾದಿ ವಸ್ತ್ರ ನೇಯುವವರನ್ನು ಪ್ರೋತ್ಸಾಹಿಸಿದಂತೆ ಆಗುತ್ತದೆ ಎಂದಾಗ ಹೌದು ಒಳ್ಳೆಯ ಸಲಹೆ ಇದು. ಅಂದು ಎಲ್ಲರೂ ಖಾದಿ ವಸ್ತ್ರಧರಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರಲ್ಲದೆ, ಕಾರ್ಯಕ್ರಮದಲ್ಲಿ ಹೂಗುತ್ಛ (ಬೊಕೆ) ನೀಡುವುದು ಬೇಡ. ಹೂಗಳನ್ನು ನೀಡಿದರೆಸಾಕು. ಅದರೊಂದಿಗೆ ಒಂದು ಪುಸ್ತಕ ನೀಡಿ ಎಂದು ಸೂಚಿಸಿದರು.
ಪ್ರಭಾರ ಅಪರ ಜಿಲ್ಲಾ ಧಿಕಾರಿ ನಜ್ಮಾ.ಜಿ ಮಾತನಾಡಿ, ಅಕ್ಟೋಬರ್ 2ರಂದು ಬೆಳಿಗ್ಗೆ 9 ಗಂಟೆಗೆ ಮಹಾನಗರ ಪಾಲಿಕೆ ಆವರಣದಲ್ಲಿ ಆರಂಭವಾಗಲಿರುವ ವೇದಿಕೆ ಕಾರ್ಯಕ್ರಮದ ಉಸ್ತುವಾರಿಯನ್ನು ಮಹಾನಗರ ಪಾಲಿಕೆ ಮತ್ತು ವಾರ್ತಾ ಇಲಾಖೆಯವರಿಗೆ ವಹಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಜಯಂತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಲಾಗುವುದು. ಶಾಮಿಯಾನ, ಕುರ್ಚಿ, ವಿದ್ಯುದೀಪಾಲಂಕಾರ, ಮಹನೀಯರ ಭಾವಚಿತ್ರಗಳಿಗೆ ಹೂವು ಅಲಂಕಾರದ ಜವಾಬ್ದಾರಿಯನ್ನು ಮಹಾನಗರ ಪಾಲಿಕೆಯವರಿಗೆ ವಹಿಸಿಕೊಡಲಾಗಿದೆ. ನಿರೂಪಣೆ, ಭಜನಾ ಗೀತೆ, ಸರ್ವ ಧರ್ಮ ಪ್ರಾರ್ಥನೆ ಮತ್ತು ಗಾಂಧೀಜಿ ಪ್ರಿಯ ಗೀತೆಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು.
ಜಿಪಂ ಸಿಇಓ ಪದ್ಮಾ ಬಸವಂತಪ್ಪ, ಉಪ ವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶಿವಾನಂದ ಕುಂಬಾರ್, ಡಿ.ಡಿ.ಪಿ.ಐ ಪರಮೇಶ್ವರಪ್ಪ, ಡಿ.ಎಚ್ .ಓ. ಡಾ| ರಾಘವೇಂದ್ರಸ್ವಾಮಿ, ಇತರರು ಸಭೆಯಲ್ಲಿದ್ದರು.
ಪ್ಲಾಸ್ಟಿಕ್ ಫ್ಲೆಕ್ಸ್ ಹಾಕಿದಲ್ಲಿ ನಿರ್ದಾಕ್ಷಿಣ್ಯ ಕ್ರಮ: ಪ್ಲಾಸ್ಟಿಕ್ ಸಂಪೂರ್ಣ ನಿಷೇಧವಿದ್ದು ನಗರದ ತುಂಬೆಲ್ಲಾ ಫ್ಲೆಕ್ಸ್ ಜಾಹೀರಾತುಗಳು ಗೋಚರಿಸುತ್ತಿವೆ. ನಗರಪಾಲಿಕೆಯವರು ಈ ಕುರಿತು ತಕ್ಷಣ ಕಾರ್ಯಪ್ರವೃತ್ತರಾಗಬೇಕು. ಬ್ಯಾನರ್ಗಳನ್ನು ಬಟ್ಟೆಯಲ್ಲಿಯೇ ಮುದ್ರಿಸಬೇಕು. ಮುಂದಿನ ದಿನಗಳಲ್ಲಿ ಈ ಪ್ಲೆಕ್ ಗಳು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಪ್ಲಾಸ್ಟಿಕ್ ಬಳಕೆಗೆ ಅನುವು ಮಾಡಿಕೊಟ್ಟಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾ ಧೀಕರಣದ ಆದೇಶ ಉಲ್ಲಂಘಿ ಸಿದಂತಾಗಲಿದೆ. ಹಾಗಾಗಿ ಪ್ಲಾಸ್ಟಿಕ್ನಿಂದ ಮುದ್ರಿಸಿರುವ ಫ್ಲೆಕ್ಸ್ ಹಾಕುವುದು ಬೇಡ. -ಮಹಾಂತೇಶ ಜಿ. ಬೀಳಗಿ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ
ಇಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’