ಮೂವರ ಬಂಧನ: 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ


Team Udayavani, Mar 18, 2017, 1:26 PM IST

dvg4.jpg

ದಾವಣಗೆರೆ: ಮೂವರು ಅಂತರ ಜಿಲ್ಲಾ ಮನೆಗಳ್ಳರನ್ನು ಬಂಧಿಸಿರುವ ಕೆಟಿಜೆ ನಗರ ಪೊಲೀಸರು, ಅವರಿಂದ 7.5 ಲಕ್ಷ ಮೌಲ್ಯದ ಬಂಗಾರದ ಆಭರಣ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 

ಚನ್ನಗಿರಿ ತಾಲೂಕು ಸಂತೇಬೆನ್ನೂರು ಸಮೀಪದ ಚಿಕ್ಕಬ್ಬಿಗೆರೆ ಗ್ರಾಮದ ತಿಪ್ಪೇಶ ಅಲಿಯಾಸ್‌ ಕೆಪ್ಪ ತಿಪ್ಪ ಅಲಿಯಾಸ್‌ ಯುವರಾಜ್‌ ಅಲಿಯಾಸ್‌ ಕುಲ್ಡ ತಿಪ್ಪಣ್ಣ (40), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದ ರಂಗಪ್ಪ (40), ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಪನಹಳ್ಳಿ ಗ್ರಾಮದ ಸೈಯದ್‌ ಬಾಷಾ ಅಲಿಯಾಸ್‌ ಬಾಷಾ ಹಾಗೂ ಕದ್ದ ಮಾಲು ಖರೀದಿಸುತ್ತಿದ್ದ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಗಂಗಾಧರ ಅಲಿಯಾಸ್‌ ಮುಕ್ಕಣ್ಣೇಶ್ವರ ಬಂಧಿತ ಆರೋಪಿಗಳು. 

ಕಳೆದ ಮಂಗಳವಾರ (ಮಾ.7) ಜಯದೇವ ಸರ್ಕಲ್‌ನಲ್ಲಿ ವ್ಯಕ್ತಿಯೊಬ್ಬ ಕಡಿಮೆ ಬೆಲೆಗೆ ಬಂಗಾರ ಮತ್ತು ಬೆಳ್ಳಿಯ ಆಭರಣ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ಕೆಟಿಜೆ ನಗರ ಪಿಎಸ್‌ಐ ರಾಜು ಸಿಬ್ಬಂದಿಯೊಂದಿಗೆತೆರಳಿ, ತಿಪ್ಪೇಶ ಅಲಿಯಾಸ್‌ ಕೆಪ್ಪ ತಿಪ್ಪ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಮನೆಗಳ್ಳತನ ಬಯಲಿಗೆ ಬಂದಿವೆ.

ಆತ ನೀಡಿದ ಮಾಹಿತಿ ಮೇರೆಗೆ ಇನ್ನುಳಿದವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎಲ್ಲಾ ಬಂಧಿತರು ಕಳೆದ ಮೂರು ವರ್ಷದಲ್ಲಿ ದಾವಣಗೆರೆ ನಗರದ ಕೆಟಿಜೆ ನಗರ, ವಿದ್ಯಾನಗರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ರಾತ್ರಿ ವೇಳೆ ಮನೆ ಬೀಗ ಮುರಿದು ಬಂಗಾರದ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದು ವಿಚಾರಣೆ ವೇಳೆ ಗೊತ್ತಾಗಿದೆ.

ಕೆಟಿಜೆ ನಗರ ಠಾಣೆಯ 6, ವಿದ್ಯಾನಗರದ 1 ಮನೆಗಳ್ಳತನಕ್ಕೆ ಸಂಬಂಧಿಸಿದಂತೆ 236 ಗ್ರಾಂ ಬಂಗಾರದ ಆಭರಣ, 2.680 ಕೆಜಿ ಬೆಳ್ಳಿ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ತಿಪ್ಪೇಶ ಅಲಿಯಾಸ್‌ ಕೆಪ್ಪ ತಿಪ್ಪ ವಿರುದ್ಧ ಕೆಟಿಜೆ ನಗರ, ಚನ್ನಗಿರಿ, ಸಂತೇಬೆನ್ನೂರು, ಜಮಖಂಡಿ, ಬನವಾಸಿ, ಅಜ್ಜಂಪುರ ಮತ್ತು ಹೊಳಲ್ಕೆರೆ ಪೊಲೀಸ್‌ ಠಾಣೆಗಳಲ್ಲಿ ತಲಾ 1, ಗುಬ್ಬಿ ಪೊಲೀಸ್‌ ಠಾಣೆಯಲ್ಲಿ 2, ಹಿರೇಕೆರೂರು ಪೊಲೀಸ್‌ ಠಾಣೆಗಳಲ್ಲಿ 4 ಒಳಗೊಂಡಂತೆ ಒಟ್ಟು 13 ಪ್ರಕರಣ ದಾಖಲಾಗಿವೆ. 

2014ನೇ ಸಾಲಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಒಳಗಾಗಿದ್ದಾನೆ. ಎಲ್ಲಾ ಕೆಲವು ಠಾಣೆಗಳಲ್ಲಿ ಬಂಧನದ ವಾರೆಂಟ್‌ ಇದೆ ಎಂದು ತಿಳಿಸಿದರು. ನಗರ ಉಪ ವಿಭಾಗದ ಉಪಾಧೀಕ್ಷಕ ಕೆ. ಅಶೋಕ್‌ಕುಮಾರ್‌ ಮಾರ್ಗದರ್ಶನ, ಕೇಂದ್ರ ವೃತ್ತ ನಿರೀಕ್ಷಕ ಜಿ.ಆರ್‌. ಸಂಗನಾಥ್‌  ನೇತೃತ್ವದಲ್ಲಿ ಮನೆಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಕೆಟಿಜೆ ನಗರ ಪಿಎಸ್‌ ಐಗಳಾದ ಟಿ. ರಾಜು, ಎಸ್‌. ಪುಷ್ಪಲತಾ,

ಸಿಬ್ಬಂದಿ ಸುರೇಶ್‌ಬಾಬು, ನೂರುಲ್ಲಾಖಾನ್‌, ಜೆ.ಎಂ. ಮಂಜುನಾಥ, ಅಂಜಿನಪ್ಪ ಪೂಜಾರ್‌, ರವಿನಾಯ್ಕ, ಪರಶುರಾಮಪ್ಪ, ರಾಘವೇಂದ್ರ, ಎನ್‌.ಸಿ. ರಾಜು, ದಾದಾಪೀರ್‌, ಆನಂದ್‌ ಅವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ನಗರ ಉಪ ವಿಭಾಗದ ಉಪಾಧೀಕ್ಷಕ ಕೆ. ಅಶೋಕ್‌ಕುಮಾರ್‌, ಕೇಂದ್ರ ವೃತ್ತ ನಿರೀಕ್ಷಕ ಜಿ.ಆರ್‌. ಸಂಗನಾಥ್‌, ಪಿಎಸ್‌ಐಗಳಾದ ಟಿ. ರಾಜು, ಎಸ್‌. ಪುಷ್ಪಲತಾ ಇತರರು ಸುದ್ದಿಗೋಷ್ಠಿಯಲ್ಲಿದ್ದರು.   

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.