ದಾವಣಗೆರೆ: ಲಾಕ್ ಡೌನ್ ನಿಯಮ ಸಡಿಲಿಕೆ, ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ
Team Udayavani, Jun 21, 2021, 1:04 PM IST
ದಾವಣಗೆರೆ: ಮಹಾಮಾರಿ ಕೋವಿಡ್ ಹಾವಳಿ, ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳ ಕಾಲ ಮನೆ ವಾಸ ಅನುಭವಿಸಿದ್ದ ಜನರು ಸೋಮವಾರ ಮುಕ್ತ ಸಂಚಾರ ನಡೆಸಿದರು.
ಕೋವಿಡ್ ಪಾಸಿಟಿವಿಟಿ 6.37% ನಡುವೆಯೂ ಜಿಲ್ಲಾಡಳಿತ ಪ್ರತಿ ದಿನ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರ ವರೆಗೆ ಅಂಗಡಿ ಮುಂಗಟ್ಟು ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಿದೆ. ಬಹು ದಿನಗಳ ನಂತರ ವಾಣಿಜ್ಯ ಚಟುವಟಿಕೆ ಗರಿಗೆದರಿತ್ತು. ಪ್ರತಿ ರಸ್ತೆಯಲ್ಲಿ ಜನಸಂದಣಿ, ವಾಹನ ಸಂಚಾರ ಹೆಚ್ಚಾಗಿತ್ತು. ಕೆಲ ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಂಡು ಬಂದಿತು.
ಇದನ್ನೂ ಓದಿ:ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು
ಕೋವಿಡ್ ಮಾರ್ಗಸೂಚಿ ಷರತ್ತಿಗೆ ಒಳಪಟ್ಟು ಬಹಳ ದಿನಗಳ ನಂತರ ಸಾರಿಗೆ ಸಂಸ್ಥೆಯ ಬಸ್ ಸಂಚರಿಸಿದವು. ನಗರ ಸಾರಿಗೆ ಬಸ್ ಸಹ ರಸ್ತೆಗೆ ಇಳಿದವು. ಆದರೆ, ಖಾಸಗಿ ಬಸ್ ಸಂಚಾರ ಕಂಡು ಬರಲಿಲ್ಲ. ಜನರು ಸ್ವಾತಂತ್ರ್ಯ ಸಿಕ್ಕವರಂತೆ ಓಡಾಡಿದರು. ರಸ್ತೆಯಲ್ಲಿ ಬ್ಯಾರಿಕೇಡ್ ಇರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಾಹನ ಸವಾರರು ಪರದಾಡಬೇಕಾಯಿತು.
ಕೆಲ ಅಂಗಡಿಗಳಿಗೆ ಅನುಮತಿ ಇರದಿದ್ದರೂ ತೆರೆದಿದ್ದವು. ಬಟ್ಟೆ, ಬಂಗಾರದ ಅಂಗಡಿಗಳಿಗೆ ಅನುಮತಿ ಇಲ್ಲದ ಕಾರಣ ಮಂಡಿಪೇಟೆ ಇತರೆ ಭಾಗದಲ್ಲಿ ಕೆಲ ಅಂಗಡಿ ಮಾತ್ರ ತೆರೆದಿದ್ದವು. ಕೃಷಿ ಪರಿಕರ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಮಧ್ಯಾಹ್ನ ಎರಡರ ನಂತರ ಎಲ್ಲ ಚಟುವಟಿಕೆ ಬಂದ್ ಆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ