ಅವನನ್ನು ನಂಬಿ ಮೋಸ ಹೋದೆ, ಆತನಿಗೆ ಗಲ್ಲು ಶಿಕ್ಷೆ ಕೊಡಿಸಿ.. ನೊಂದ ಪ್ರಿಯತಮೆಯ ಕೊನೇ ಮನವಿ.!
Team Udayavani, Jun 6, 2021, 5:59 PM IST
ದಾವಣಗೆರೆ: ಪ್ರಿಯಕರನ ವಂಚನೆಯಿಂದ ಬೇಸತ್ತ ಪ್ರೇಮಿ ನೇಣು ಹಾಕಿಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಭಾನುವಾರ ದಾವಣಗೆರೆಯ ಭಾರತ್ ಕಾಲೋನಿಯಲ್ಲಿ ನಡೆದಿದೆ.
ಭಾರತ್ ಕಾಲೋನಿಯ ಆಶಾ(22) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಆಶಾ ಕೆ.ಬಿ. ಈರಣ್ಣ ಎಂಬಾತತನ್ನು ಪ್ರೀತಿಸುತ್ತಿದ್ದರು. ಈಚೆಗೆ ಆತನಿಂದ ವಂಚನೆಗೊಳಗಾಗಿದ್ದರು ಎನ್ನಲಾಗುತ್ತಿದೆ.
ಕೆ.ಬಿ. ಈರಣ್ಣ ಮೂಲತಃ ಬೆಳಗಾವಿ ಜಿಲ್ಲೆಯವ. ದಾವಣಗೆರೆಯಲ್ಲಿ ಬೆಸ್ಕಾಂನಲ್ಲಿ ಬಿಲ್ ಕಲೆಕ್ಟರ್ ಆಗಿ ಮಾಡುತ್ತಿದ್ದು, ಬಂಬೂಬಜಾರ್ನಲ್ಲಿ ವಾಸವಾಗಿದ್ದನು. ಬಿಲ್ ಕಲೆಕ್ಟಿಂಗ್ಗೆಂದು ಹೋಗುತ್ತಿದ್ದ ಸಂದರ್ಭದಲ್ಲಿ ಆಶಾ ಮತ್ತು ಆತನ ನಡುವೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಆಶಾ ಎಸ್ಸೆಸ್ಸೆಲ್ಸಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಬ್ಯೂಟಿಪಾರ್ಲರ್ ಕೆಲಸ ಮಾಡುತ್ತಿದ್ದರು.
ಆಶಾಳಿಂದ ಈರಣ್ಣ 2 ಲಕ್ಷ ರೂಪಾಯಿ ಜೊತೆಗೆ ಚಿನ್ನಾಭರಣ ಪಡೆದುಕೊಂಡಿದ್ದನು. ಮದುವೆಯಾಗುವುದಾಗಿ ನಂಬಿಸಿದ್ದನು. ಈ ಮೊದಲೇ ಈರಣ್ಣನಿಗೆ ಮದುವೆಯಾಗಿರುವುದು ಈಚೆಗೆ ಗೊತ್ತಾಗಿದೆ. ತಾನು ಪ್ರೀತಿ ಮಾಡಿದವನೇ ಮೋಸ ಮಾಡಿದ್ದಾನೆ. ತಂದೆ-ತಾಯಿ ಹೇಳಿದರೂ ಕೇಳದೆ ಎಲ್ಲವನ್ನೂ ಕಳೆದುಕೊಂಡಿರುವ ನಾನು ಬದುಕಲು ಅರ್ಹತೆ ಇಲ್ಲ ಎಂದು ನಿರ್ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ: ಉದಯ್ ಗಾಣಿಗ ಕೊಲೆ ಪ್ರಕರಣ : ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕೆಂದು ಗಾಣಿಗ ಸಮುದಾಯದ ಆಗ್ರಹ
ಆತ್ಮಹತ್ಯೆಗೆ ಮುನ್ನ ತನ್ನ ಪ್ರಿಯಕರ ಮಾಡಿರುವ ವಂಚನೆಯ ಬಗ್ಗೆ ವೀಡಿಯೋ ಮಾಡಿದ್ದಾರೆ. ತನಗೆ ಮೋಸ ಮಾಡಿರುವ ಪ್ರಿಯಕರನಿಗೆ ಗಲ್ಲು ಕೊಡಿಸಬೇಕು… ಎಂದು ಮನವಿ ಮಾಡಿಕೊಂಡಿದ್ದಾರೆ.
ನನ್ನ ಸಾವಿಗೆ ಈರಣ್ಣ ಕಾರಣ. ನನ್ನ ಸಾವು ಮತ್ತೊಬ್ಬರಿಗೆ ಬರಬಾರದು. ನನ್ನನ್ನು ನಂಬಿಸಿ, ಮೋಸ ಮಾಡಿದ್ದಾನೆ. ಆತನಿಗೆ ಗಲ್ಲು ಶಿಕ್ಷೆ ಕೊಡಿಸಿ. ನನ್ನಂತೆ ಇನ್ನೊಂದು ಹುಡುಗಿ ಜೀವನದಲ್ಲಿ ಆಟವಾಡುತ್ತಿದ್ದಾನೆ. ಆ ಹುಡುಗಿಯ ಜೀವನವಾದರೂ ಚೆನ್ನಾಗಿರಲಿ. ನಮ್ಮ ತಂದೆ, ತಾಯಿ ಅವನು ವಂಚಕ ಎಂದು ಹೇಳಿದರೂ ನಾನು ಕೇಳಲಿಲ್ಲ… ಎಂದು ವೀಡಿಯೋದಲ್ಲಿ ಹೇಳಿದ್ದಾರೆ.
ಆಶಾ ತಂದೆ ಮಂಜಾನಾಯ್ಕ, ತಾಯಿ ಗಿರಿಜಾಬಾಯಿ ತರಕಾರಿ ಮಾರಾಟಕ್ಕೆ ಹೊರಗೆ ಹೋಗಿದ್ದ ಸಂದರ್ಭದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ತಲೆ ಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು