ದೇಶದ್ರೋಹ-ಭಯೋತ್ಪಾದಕತೆ ದೇಶ ಬಿಟ್ಟು ತೊಲಗಲಿ


Team Udayavani, Aug 14, 2017, 3:20 PM IST

14-DV-3.jpg

ದಾವಣಗೆರೆ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡದೆ ಅಧಿಕಾರದಲ್ಲಿ ಇರುವರು ದೇಶಪ್ರೇಮದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಿಪಿಐ(ಎಂ)
ರಾಜ್ಯ ಸಮಿತಿ ಸದಸ್ಯ ಕೆ. ಮಹಾಂತೇಶ್‌ ಲೇವಡಿ ಮಾಡಿದ್ದಾರೆ.

ಕ್ವಿಟ್‌ ಇಂಡಿಯಾ ಚಳವಳಿಯ 75, ಸ್ವಾತಂತ್ರ್ಯ ದಿನದ 70ನೇ ವರ್ಷದ ಅಂಗವಾಗಿ ಭಾರತ ಕಮ್ಯುನಿಸ್ಟ್‌ ಪಕ್ಷ(ಮಾರ್ಕ್ಸ್ವಾದಿ) ಭಾನುವಾರ ಏರ್ಪಡಿಸಿದ್ದ ಜಿ.ಎನ್‌. ನಾಗರಾಜ್‌ರವರ ತೊಲಗು ತೊಲಗಾಚೆ ಪರದೇಶಿ ಸುಲಿಗೆಗಾರ… ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡದೇ ಇದ್ದವರು ಇಂದು ಒಂದೇ ಉಡುಪು, ಭಾಷೆ, ಆಹಾರದ ಹೆಸರಲ್ಲಿ ದೇಶಪ್ರೇಮದ ಬಗ್ಗೆ
ಮಾತನಾಡುತ್ತಾರೆ. ಒಂದು ದೇಶ ಒಂದೇ ತೆರಿಗೆ ಎನ್ನುವರು ರೈತರ ಬೆಳೆಗಳಿಗೆ ಒಂದೇ ಬೆಲೆ, ಎಲ್ಲಾ ಕಾರ್ಮಿಕರಿಗೆ ಒಂದೇ ವೇತನ ಯಾಕೆ ಜಾರಿ ಮಾಡಲಿಕ್ಕಾಗದು ಎಂದು ಪ್ರಶ್ನಿಸಿದರು.

500, 1 ಸಾವಿರ ರೂಪಾಯಿ ನೋಟು ಅಮಾನ್ಯ ಮಾಡಿರುವುದೇ ದೇಶಪ್ರೇಮ ಎಂದುಕೊಂಡಿರುವರು ಅದೇ ನೋಟು ಅಮಾನ್ಯದಿಂದ ಮದುವೆ ನಿಂತಿರುವ, ಮನೆ ಕಟ್ಟಲಿಕ್ಕಾಗದೇ ಇರುವುದು, ರೈತರು, ಕಾರ್ಮಿಕರು ಅನುಭವಿಸಿದ ಸಂಕಷ್ಟದ ಬಗ್ಗೆ ಯೋಚಿಸುವುದೇ ಇಲ್ಲ. ಎಂದಿಗೂ ದನ ಕಾಯದೇ ಇರುವರು ಜಾನುವಾರು ಮಾರಾಟ ಮತ್ತು ನಿಷೇಧ ಕಾಯ್ದೆ ಮೂಲಕ ದೇಶಪ್ರೇಮದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ದೂರಿದರು.

ದೇಶದ ಪ್ರತಿಯೊಬ್ಬರು ಒಳ್ಳೆಯ ಶಿಕ್ಷಣ, ಉದ್ಯೋಗ ಪಡೆಯುವ ಮೂಲಕ ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎಂಬ ಮಹತ್ತರ ಕನಸಿಗಾಗಿ ಜಾತಿ, ವರ್ಗ, ಧರ್ಮ ಯಾವುದೇ ಭೇದ ಇಲ್ಲದೆ ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದರು. ಆದರೆ, ಈ ಕ್ಷಣಕ್ಕೂ ಆ ಮಹಾನೀಯರ ಕನಸು ಈಡೇರಿಲ್ಲ. ಈಚೆಗೆ ಸರ್ಕಾರಗಳು ಜಾರಿಗೊಳಿಸಿರುವ ಕಾರ್ಪೋರೇಟ್‌ ಪರ ನೀತಿಯಿಂದ ಈವರೆಗೆ 2.50 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದ ಶೇ. 58 ರಷ್ಟು ಆಸ್ತಿಯು ಶೇ. 1 ರಷ್ಟು ಜನರ ಕೈಯಲ್ಲಿ ಇದೆ ಎಂದು ತಿಳಿಸಿದರು. 

ಯಾವ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿ ಎಂದು 75 ವರ್ಷಗಳ ಹಿಂದೆ ಚಳವಳಿ ನಡೆಸಲಾಗಿತ್ತು. ಈಗ ಕ್ವಿಟ್‌ ಇಂಡಿಯಾ ಬದಲಿಗೆ ವೆಲ್‌ಕಂ ಇಂಡಿಯಾ… ಎಂದು ವಿದೇಶಿ ಬಂಡವಾಳಗಾರರನ್ನು ಆಹ್ವಾನಿಸಲಾಗುತ್ತಿದೆ. ಇದೇ ಸ್ಥಿತಿ ಮುಂದುವರೆದರೆ ಮುಂದಿನ ದಿನಗಳು ಗಂಭೀರವಾಗಲಿವೆ ಎಂದು ಎಚ್ಚರಿಸಿದರು.

ಕೋಮುವಾದದ ಮೂಲಕ ಜನರನ್ನು ವಿಭಜನೆ ಮಾಡುವ ದೇಶದ್ರೋಹ, ಭಯೋತ್ಪಾದಕತೆ, ಹಣ ಸುಲಿಗೆ ಮಾಡುವ  ಖಾಸಗಿ ಶಿಕ್ಷಣ ಸಂಸ್ಥೆಗಳು ಈ ದೇಶ ಬಿಟ್ಟು ತೊಲಗಬೇಕು. ಜಾತಿ, ವರ್ಗದ ಹೆಸರಲ್ಲಿ ದೇಶದ ವಿಘಟನೆಯನ್ನು ಬಲವಾಗಿ ವಿರೋಧಿಸುವ ಮೂಲಕ ಐಕ್ಯ ಭಾರತ…ನಿರ್ಮಾಣ
ಮಾಡಬೇಕು. ಅದು ಈಗಿನ ಅನಿವಾರ್ಯತೆ ಮತ್ತು ಅವಶ್ಯಕತೆ ಎಂದು ತಿಳಿಸಿದರು. ಕೃತಿ ಬಿಡುಗಡೆಗೊಳಿಸಿದ ವಿರಕ್ತ ಮಠದ
ಶ್ರೀ ಬಸವಪ್ರಭು ಸ್ವಾಮೀಜಿ ಮಾತನಾಡಿ, ದೇಶದ ಸ್ವಾತಂತ್ರ್ಯ ನಂತರ ಭ್ರಷ್ಟಾಚಾರ ಅಸಮಾನತೆ, ಮೌಡ್ಯತೆ ಎಂಬ ಗಂಭೀರ ಸಮಸ್ಯೆ ದೇಶವನ್ನು ಕಾಡುತ್ತಿವೆ. ಎಲ್ಲೇ ಹೋದರೂ ಹಣ ಪೀಕಲಾಗುತ್ತದೆ. ಕೋಟ್ಯಾಂತರ ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಮೋಸ ಮಾಡದೇ ಇರುವುದು ಸಹ ನಿಜವಾದ ದೇಶ ಮತ್ತು ದೇವರ ಸೇವೆ. ಹಾಗಾಗಿ ಯಾರೂ ಕೂಡಾ ಮೋಸ ಮಾಡಬಾರದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಸದಸ್ಯ ತೇಜಸ್ವಿ ಪಟೇಲ್‌ ಮಾತನಾಡಿ, ಅಹಿಂಸಾ ಮಾರ್ಗದಲ್ಲಿ ದೇಶದ ಸ್ವಾತಂತ್ರ್ಯ ಪಡೆದ ನಂತರ ದೇಶದ ವಿಘಟನೆ, ಗಾಂಧೀಜಿಯವರ ಹತ್ಯೆಯಂತಹ ಹಿಂಸಾಚಾರಗಳು ನಡೆದವು. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣಾರ್ಪಣೆ ಮಾಡಿದಂತಹವ ಒಂದು ಕನಸು ಈಡೇರಿಲ್ಲ. ಮೋದಿ ನೇತೃತ್ವದ ಸರ್ಕಾರ ವಿದೇಶಿ ಬಂಡವಾಳಶಾಹಿಗಳನ್ನ ಸ್ವಾಗತಿಸುತ್ತಿದೆ. ಕಾರ್ಪೋರೇಟ್‌ ಸಂಸ್ಥೆಗಳು ತಮ್ಮವರ ಮೂಲಕ ಸರ್ಕಾರ ನಡೆಸುತ್ತಿವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ನಮ್ಮವರ ಕಡಿಮೆ ಆಗುತ್ತಿದೆ ಎಂದರು.

ಸಿಐಟಿಯು ಜಿಲ್ಲಾ ಗೌರವ ಅಧ್ಯಕ್ಷ ಕೆ.ಎಲ್‌. ಭಟ್‌ ಅಧ್ಯಕ್ಷತೆ ವಹಿಸಿದ್ದರು. ಟಿ.ವಿ. ರೇಣುಕಮ, ಬಿ. ವೀರಣ್ಣ ಇತರರು ಇದ್ದರು. ಇ. ಶ್ರೀನಿವಾಸ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.