ಡಿಸೆಂಬರ್‌ ಬಳಿಕ ಅಭಿವೃದ್ಧಿಗೆ ಅನುದಾನ ತರಲು ಯತ್ನ


Team Udayavani, Aug 29, 2020, 8:17 PM IST

ಡಿಸೆಂಬರ್‌ ಬಳಿಕ ಅಭಿವೃದ್ಧಿಗೆ ಅನುದಾನ ತರಲು ಯತ್ನ

ದಾವಣಗೆರೆ: ಜಿಲ್ಲೆ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ತರುವ ವಿಶ್ವಾಸವಿತ್ತು. ಕೋವಿಡ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಆದರೂ ಡಿಸೆಂಬರ್‌ ಬಳಿಕ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಭರವಸೆ ನೀಡಿದರು.

ಮಹಾನಗರ ಪಾಲಿಕೆ ವತಿಯಿಂದ ಮ್ಯಾನ್ಯು ಯಲ್‌ ಸ್ಕ್ಯಾವೆಂಜರ್ ಹಾಗೂ ವಿಶೇಷಚೇತನ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಶುಕ್ರವಾರ ಪಾಲಿಕೆಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರ ಪಾಲಿಕೆ ಸ್ವಚ್ಛತೆಯಲ್ಲಿ ಹಿಂದಿದೆ ಎಂಬ ವರದಿ ಮಾಧ್ಯಮಗಳಲ್ಲಿ ಬಂದಿದೆ. ಈ ಬಗ್ಗೆ ಮಹಾಪೌರರ ಬಳಿ ವಿಚಾರಿಸಿದಾಗ ಅದು ಡಿಸೆಂಬರ್‌ ವೇಳೆಯ ವರದಿ ಎಂಬುದು ಗೊತ್ತಾಯಿತು. ಮಹಾನಗರದ ಎಲ್ಲ ಸದಸ್ಯರು ಪಕ್ಷಾತೀತವಾಗಿ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು. ಪಾಲಿಕೆ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಸ್ವಚ್ಛತೆಗೆ ಒತ್ತು ನೀಡಬೇಕು ಎಂದರು.

ಕೇಂದ್ರ ಸರ್ಕಾರದ ಆತ್ಮ ನಿರ್ಭರ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ನಿಯಮಾನುಸಾರ ಸಾಲ ಕೊಡುವ ವ್ಯವಸ್ಥೆಯನ್ನು ಪಾಲಿಕೆಯ ಅಧಿಕಾರಿಗಳು ಮಾಡಬೇಕು. ಬೀದಿ ಬದಿ ವ್ಯಾಪಾರಿಗಳ ಸಾಲಕ್ಕಾಗಿ ಇದುವರೆಗೆ 1200 ಅರ್ಜಿಗಳನ್ನು ಬ್ಯಾಂಕ್‌ಗೆ ಕಳುಹಿಸಲಾಗಿದೆ. ಆದರೆ, 115 ಮಂದಿಗೆ ಮಾತ್ರ ಸಾಲ ಮಂಜೂರಾಗಿದೆ. ಇದು ಸರಿಯಲ್ಲ. ಬಾಕಿ ಉಳಿದ ಎಲ್ಲರಿಗೂ ಸಾಲ ಮಂಜೂರು ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮ್ಯಾನ್ಯುಯಲ್‌ ಸ್ಕಾ ವೆಂಜರ್ಗೆ ಸ್ವಯಂ ಉದ್ಯೋಗ ಕೈಗೊಳ್ಳಲು 20 ಲಕ್ಷ ರೂ. ವೆಚ್ಚದಲ್ಲಿ 55 ಹೊಲಿಗೆ ಯಂತ್ರ, 46 ಜೆರಾಕ್ಸ್‌ ಯಂತ್ರ ಮತ್ತು 20 ತಳ್ಳುವ ಗಾಡಿ ಸಾಮಗ್ರಿವಿತರಿಸಲಾಗುತ್ತಿದ್ದು, ಫಲಾನುಭವಿಗಳು ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಪಾಲಿಕೆ ಮಹಾಪೌರ ಬಿ.ಜಿ. ಅಜಯ್‌ ಕುಮಾರ್‌ ಮಾತನಾಡಿ, ಕಳೆದ ಜುಲೈತಿಂಗಳಲ್ಲಿ 12 ಕೋಟಿ ರೂ. ತೆರಿಗೆ ವಸೂಲಿಯಾಗಿತ್ತು. ಕೋವಿಡ್ ಸಂದರ್ಭದಲ್ಲೂ ಜುಲೈ ಅಂತ್ಯಕ್ಕೆ 15 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ. ಇನ್ನೂ ಹೆಚ್ಚಿನ ಹಣ ಬರುವ ನಿರೀಕ್ಷೆ ಇದೆ. ಇದನ್ನು ವಿಶೇಷವಾಗಿ ವಿದ್ಯುತ್‌, ಚರಂಡಿ ,ರಸ್ತೆ ದುರಸ್ತಿಗೆ ಬಳಸಲಾಗುವುದು ಎಂದರು.

ಉಪ ಮೇಯರ್‌ ಸೌಮ್ಯ ನರೇಂದ್ರ ಕುಮಾರ್‌, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಯಮ್ಮ ಗೋಪಿನಾಯ್ಕ, ವೀರೇಶ್‌, ಪ್ರಸನ್ನ ಕುಮಾರ್‌, ಗೌರಮ್ಮ ಗಿರಿರಾಜ್‌, ಆಯುಕ್ತ ವಿಶ್ವನಾಥ್‌ ಮುದಜ್ಜಿ, ಪಾಲಿಕೆ ಸದಸ್ಯರು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.