ಸಂಬಂಧ ಬೆಸೆಯುವ ಮೂಲಕ ಭೇದ-ಭಾವ ದೂರ ಮಾಡಿ


Team Udayavani, Sep 24, 2018, 4:46 PM IST

dvg-4.jpg

ದಾವಣಗೆರೆ: ವೀರಶೈವ ಸಮಾಜದ ಎಲ್ಲಾ ಪಂಗಡದವರು ಪರಸ್ಪರ ಸಂಬಂಧ ಬೆಳೆಸುವ ಮೂಲಕ ಉಪಪಂಗಡದ ಭೇದಭಾವ ಹೋಗಲಾಡಿಸಲು ಪ್ರಯತ್ನಿಸಬೇಕು ಎಂದು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ಶ್ರೀಶೈಲ ಜಗದ್ಗುರು ಲಿಂ. ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರ 32ನೇ ಸ್ಮರಣೋತ್ಸವ, ಲಿಂ. ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರ 7ನೇ ವರ್ಷದ ಸ್ಮರಣೋತ್ಸವ ಹಾಗೂ ಜನ ಜಾಗೃತಿ ಧರ್ಮ ಸಮ್ಮೇಳನದ 2ನೇ ದಿನದ ಸಮಾರಂಭದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು.

ಎಲ್ಲರೂ ಧರಿಸುವ ಲಿಂಗ ಒಂದೇ, ಲಿಂಗಪೂಜೆ, ಧರ್ಮಾಚರಣೆಗಳು ಒಂದೇ ಆಗಿದ್ದು, ಒಳಪಂಗಡಗಳಲ್ಲಿ ಯಾರು ಕೂಡ ಶ್ರೇಷ್ಠ, ಕನಿಷ್ಠ ಎಂಬ ಭೇದಭಾವ ಮಾಡಬಾರದು. ಪರಸ್ಪರ ಸಂಬಂಧವನ್ನು ಬೆಳೆಸುವ ಮೂಲಕ ಸಮಾಜದ ಏಳ್ಗೆಗೆ ಶ್ರಮಿಸಬೇಕು ಎಂದರು.

ಇತೀಚೆಗೆ ಕೆಲ ರಾಜಕಾರಣಿಗಳು ತಮ್ಮ ಸ್ವಾರ್ಥ ಸಾಧನೆಗಾಗಿ ಸರ್ಕಾರಿ ಸೌಲಭ್ಯಗಳ ಆಮಿಷ ತೋರಿಸಿ ಸಮಾಜದ ಒಗ್ಗಟ್ಟನ್ನು ಶಿಥಿಲಗೊಳಿಸಲು ಪ್ರಯತ್ನಿಸಿ ಮುಖಭಂಗಕ್ಕೊಳಗಾಗಿದ್ದಾರೆ. ವೀರಶೈವ ಸಮಾಜವನ್ನು ಯಾವುದೇ ಆಮಿಷದಿಂದ ಒಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ವೀರಶೈವ ಸಮಾಜದಲ್ಲಿ ವೃತ್ತಿಯನ್ನು ಅವಲಂಬಿಸಿ ಮಾತ್ರ ಹುಟ್ಟಿಕೊಂಡಿರುವ ಎಲ್ಲಾ ಒಳಪಂಗಡಗಳು ತಮ್ಮ ಎಲ್ಲಾ ಭೇದಭಾವಗಳನ್ನು ಮರೆತು ಒಂದಾಗದಿದ್ದರೆ ಭವಿಷ್ಯವಿಲ್ಲ. ಹಾಗಾಗಿ ಸಮಾಜದವರು ಒಗ್ಗಟ್ಟು ಪ್ರದರ್ಶಿಸಬೇಕು ಎಂದು
ತಿಳಿಸಿದರು. ಪಂಚಪೀಠದ ಜಗದ್ಗುರುಗಳು, ಬಸವಾದಿ ಶರಣರು ನಿರಂತರವಾಗಿ ಸಮಾಜವನ್ನು ಸರಿಪಡಿಸುವ ಕೆಲಸ ಮಾಡಿದ್ದಾರೆ. ಅವರೆಂದಿಗೂ ವಿಭಜನೆಗೆ ಅವಕಾಶ ನೀಡಿಲ್ಲ. ಆದರೆ ಕೆಲವು ಮಠಾಧೀಶರು ಶಿವಶರಣರ ಹೆಸರನ್ನು ಮುಂದೆ ಮಾಡಿ ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿದ್ದು. ಅಂಥವರಿಂದ ಸಮಾಜದ ಜನತೆ ಸದಾ ಜಾಗೃತರಾಗಿರಬೇಕು ಎಂದು ತಿಳಿಸಿದರು.

ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌ .ಎ. ರವೀಂದ್ರನಾಥ್‌ ಸಮಾರಂಭ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ನಮಗೆ ಲಿಂ. ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಒಡನಾಟವಿತ್ತು. ಅವರು ಸದಾ ಮೃದು ಭಾಷೆಯ ಮೂಲಕ ಸಮಾಜದ ಜನರಿಗೆ ಒಳ್ಳೆ ಚಿಂತನೆ, ರೀತಿ-ನೀತಿ ಹಾಗೂ ಉತ್ತಮ ಕಾರ್ಯಗಳನ್ನು ಮಾಡಲು ಸದಾ ಪ್ರೇರಣೆ ನೀಡುತ್ತಿದ್ದರು ಎಂದು ಸ್ಮರಿಸಿಕೊಂಡರು. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯದಲ್ಲಿ ಅವರು ತೊಡಗಿದ ಕೆಲಸ ನಿಜಕ್ಕೂ ಸ್ಮರಣೀಯ.

ಬಡವರ ಬಗ್ಗೆ ಅನುಕಂಪ, ಸಾಮಾಜಿಕ ಕಳಕಳಿಯನ್ನು ಉಮಾಪತಿ ಪಂಡಿತಾರಾಧ್ಯ ಸ್ವಾಮೀಜಿ ಹೊಂದಿದ್ದರು ಎಂದು ನುಡಿದರು. ಉಪನ್ಯಾಸಕ ನಂದೀಶ ಹಂಚೆ ಉಪನ್ಯಾಸ ನೀಡಿದರು. ಹುಣಸಘಟ್ಟ ಗುರುಹಾಲಸ್ವಾಮಿ ಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ ಉಪದೇಶಾಮೃತ, ಆವರಗೊಳ್ಳ ಪುರವರ್ಗಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಕೋಣಂದೂರು ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಅಂಬಿಕಾನಗರದ ಶ್ರೀ ಈಶ್ವರ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. 

ಬಿಜೆಪಿ ಮುಖಂಡ ನಾಗರಾಜ್‌ ಲೋಕಿಕೆರೆ, ಬಡಾವಣೆ ಪೊಲೀಸ್‌ ಠಾಣಾಧಿಕಾರಿ ವೀರಬಸಪ್ಪ ಕುಸಲಾಪುರ ಇತರರು ಉಪಸ್ಥಿತರಿದ್ದರು. ಕಸ್ತೂರಿ ಬಾ ಸಮಾಜದ ಸದಸ್ಯೆಯರು ಹಾಗೂ ಕಾಂತರಾಜ್‌ ಸಂಗಡಿಗರು ಸಂಗೀತ ನಡೆಸಿಕೊಟ್ಟರು.
ಡಿ.ಎಂ. ಹಾಲಸ್ವಾಮಿ ಸ್ವಾಗತಿಸಿದರು. ಕೆ.ಎಂ. ರುದ್ರಮುನಿಸ್ವಾಮಿ ನಿರೂಪಿಸಿದರು. ಎನ್‌.ಎಂ. ತಿಪ್ಪೇಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.