ಯುವಕನ ಕೊಲೆ; ಇಬ್ಬರು ಆರೋಪಿಗಳ ಬಂಧನ


Team Udayavani, Apr 10, 2022, 2:15 PM IST

betting

ಹರಿಹರ: ಕಳೆದ ಮಾ. 16 ರಂದು ನಗರದ ಗಾಂಧಿ ಮೈದಾನದ ವಾಣಿಜ್ಯ ಸಂಕೀರ್ಣದ ಅಂಬೇಮಾ ವೈನ್ಸ್‌ ಅಂಗಡಿ ಮುಂಭಾಗ ಶವವಾಗಿ ಪತ್ತೆಯಾಗಿದ್ದ ಗಂಗನರಸಿ ಗ್ರಾಮದ ಗಿರೀಶ್‌ ಎಂಬ ಯುವಕ ಕೊಲೆಗೀಡಾಗಿರುವುದು ಖಚಿತವಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ಎ.ಕೆ. ಕಾಲೋನಿ ಒಂದನೇ ಕ್ರಾಸ್‌ ನ ನಿವಾಸಿಗಳಾದ ಮಂಜ (31) ಮತ್ತು ಶಿವು (22) ಬಂಧಿತ ಆರೋಪಿಗಳು.

ರಕ್ತದ ಮಡುವಿನಲ್ಲಿದ್ದ ಶವದ ತಲೆ ಪಕ್ಕದಲ್ಲಿ ದೊಡ್ಡ ಸೆ„ಜಗಲ್ಲು ಇದ್ದುದರಿಂದ, ತಲೆಯಲ್ಲಿ ಒಂದು ಕಡೆ ಮಾತ್ರ ಗಾಯವಾಗಿದ್ದು, ತಲೆ ಹಾಗೂ ಮುಖ ಜಜ್ಜಿರದ ಕಾರಣ ಯುವಕನೇ‌ ಕಲ್ಲಿಗೆ ಬಿದ್ದು ಗಾಯ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಕೊಲೆ ಪ್ರಕರಣವೆಂದು ಗಿರೀಶ್‌ ಕುಟುಂಬದವರು ದೂರು ದಾಖಲಿಸಿದ ನಂತರ ಪೊಲೀಸರು ಪ್ರಕರಣದ ಬೆನ್ನು ಹತ್ತಿದ್ದರು. ಆರೋಪಿಗಳು ಅತಿಯಾದ ಮದ್ಯ ಸೇವನೆ ಮಾಡುವವರಾಗಿದ್ದು, ಅಂಗಡಿ, ಮುಂಗಟ್ಟುಗಳ ಮುಂದೆ ಮಲಗಿದವರ ಮೇಲೆ ಹಲ್ಲೆ ನಡೆಸಿ ಮೊಬೈಲ್‌, ಹಣ ಕಿತ್ತುಕೊಳ್ಳುತ್ತಿದ್ದರು.

ಇತ್ತೀಚಿಗೆ ನಗರದ ತಾಪಂ ಕಚೇರಿ ಎದುರು ಮಲಗಿದ್ದ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಸೇರಿದಂತೆ ಆರೋಪಿಗಳು ಈಗಾಗಲೆ ಇಂಥದ್ದೇ ನಾಲ್ಕು ಪ್ರಕರಣ ಎಸಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ವಿಕೃತ ಮನೋಭಾವದವರಿದ್ದು, ಇಂತಹವರ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಅಂಗಡಿ, ಮುಂಗಟ್ಟುಗಳ ಮುಂದೆ, ಮನೆ ಕಟ್ಟೆ ಮೇಲೆ ಯಾರೂ ಮಲಗಬಾರದೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಡಿವೈಎಸ್‌ಪಿ ಬಸವರಾಜ್‌ ಬಿ.ಎಸ್‌., ಸಿಪಿಐ ಸತೀಶ್‌ಕುಮಾರ್‌ ಯು., ಪಿಎಸ್‌ಐ ಸುನೀಲ್‌ಕುಮಾರ್‌ ತೇಲಿ, ಎಎಸ್‌ಐ ಯಾಸೀನ್‌ ಉಲ್ಲಾ, ಸಿಬ್ಬಂದಿಗಳಾದ ಸುಣಗಾರ ನಾಗರಾಜ್‌, ಶಾಂತಕುಮಾರ್‌, ಸೈಯದ್‌ ಗಫಾರ್‌, ರಾಜಶೇಖರ್‌, ಶಿವರಾಜ್‌, ನಾಗರಾಜ್‌, ಸಿದ್ದೇಶ್‌, ಸಿಸಿಟಿವಿ ಮಂಜುನಾಥ್‌ ಪ್ರಕರಣ ಪತ್ತೆ ತಂಡದಲ್ಲಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.