ದೇಶದ ಕಾನೂನು ಅರಿತು-ಪಾಲಿಸಿ


Team Udayavani, Jun 27, 2018, 10:02 AM IST

davanagere-1.jpg

ಹರಪನಹಳ್ಳಿ: ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎನ್ನಿಸಿಕೊಂಡಿರುವ ಭಾರತದ ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ತಿಳಿದು, ಕಾನೂನು ಗೌರವಿಸಿ, ಪರಿಪಾಲಿಸುವಂತೆ ಇಲ್ಲಿಯ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ಕರೆ ನೀಡಿದರು.

ಪಟ್ಟಣದ ಎಸ್‌.ಯು.ಜೆ.ಎಂ. ಕಾಲೇಜು ಆವರಣದಲ್ಲಿ ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ತಾಲೂಕು ಆಡಳಿತ, ಪುರಸಭೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರಕ್ಷಕ ಠಾಣೆ, ಸಮಾಜ ಕಲ್ಯಾಣ ಹಾಗೂ ತಾಪಂ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಕಾನೂನು ಸಾಕ್ಷರತಾ ರಥ ಸಂಚಾರ ಮತ್ತು ಜನತಾ ನ್ಯಾಯಾಲಯ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನ ದತ್ತ ಹಕ್ಕುಗಳನ್ನು ಪ್ರತಿಯೊಬ್ಬರೂ ಚಲಾಯಿಸಬೇಕು. ಹಾಗೆಯೇ ಕರ್ತವ್ಯಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಕಾನೂನು ತಿಳಿದರೆ ಅಪರಾಧ ಮನೋಭಾವ ಬರುವುದಿಲ್ಲ ಎಂದರು. ಕಾಲೇಜು ವ್ಯಾಸಂಗದ ಸಮಯದಲ್ಲಿ ವಿದ್ಯಾರ್ಥಿಗಳು ಮೂಲಭೂತ ಹಕ್ಕು ಅರಿತುಕೊಳ್ಳುತ್ತಾರೆ. ಆದರೆ ಕರ್ತವ್ಯಗಳನ್ನು ಮರೆತು ಬಿಡುತ್ತಾರೆ. ಕಾನೂನಿನ ಬಲದಿಂದ ಅನ್ಯಾಯ ತಡೆಯುವ ಶಕ್ತಿ ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿವೈಎಸ್‌ಪಿ ನಾಗೇಶ್‌ ಐತಾಳ, ಜಮೀನು ವ್ಯಾಜ್ಯಗಳನ್ನು ಕಾನೂನು ಮೂಲಕವೇ ಬಗೆಹರಿಸಿಕೊಳ್ಳಬೇಕು. ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಿಲು ಏರಿದರೆ ಮಕ್ಕಳು ಆದಿಯಾಗಿ ಎಲ್ಲರ ಮೇಲೂ ಕ್ರಿಮಿನಲ್‌ ದೂರು ದಾಖಲಾಗುತ್ತದೆ. ಮುಂದೆ ವಿದ್ಯಾರ್ಥಿಗಳಿಗೆ ನೌಕರಿ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಕಾನೂನು ಬಗ್ಗೆ ಪಾಲಕರಲ್ಲಿ ನೀವು ತಿಳಿವಳಿಕೆ ಮೂಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ವಕೀಲರಾದ ಎಂ. ಮೃತ್ಯುಂಜಯ, ಮೋಟಾರ್‌ ವಾಹನ ಕಾಯ್ದೆ ಕುರಿತು ಗೋಣಿಬಸಪ್ಪ ಉಪನ್ಯಾಸ ನೀಡಿದರು.

ತಹಶೀಲ್ದಾರ ಕೆ. ಗುರುಬಸವರಾಜ, ಉಪನ್ಯಾಸಕ ಎಚ್‌. ಮಲ್ಲಿಕಾರ್ಜುನ, ಕಿರಿಯ ನ್ಯಾಯಾಧೀಶರಾದ ಬಿ.ಜಿ. ಶೋಭಾ, ವಕೀಲರ ಸಂಘದ ಅಧ್ಯಕ್ಷ ಎ.ಕೆ. ಅಜ್ಜಪ್ಪ, ಕಾರ್ಯದರ್ಶಿ ಇದ್ಲಿ ರಾಮಪ್ಪ ಮಾತನಾಡಿದರು. ಇಒ ಆರ್‌.ತಿಪ್ಪೇಸ್ವಾಮಿ, ಬಿಇಒ ಎಲ್‌.ರವಿ, ಮುಖ್ಯಾಧಿಕಾರಿ ಐ.ಬಸವರಾಜ, ಸಹಾಯಕ ಸರ್ಕಾರಿ ಅಭಿಯೋಜಕಿ ಟಿ.ಎಸ್‌. ಗೋಪಿಕಾ, ಅಪರ ಸರ್ಕಾರಿ ವಕೀಲ ಕಣಿವಿಹಳ್ಳಿ ಮಂಜುನಾಥ, ಪ್ರಾ| ಎಲ್‌. ಕೃಷ್ಣಸಿಂಗ್‌, ಹಿರಿಯ ವಕೀಲರಾದ ಗಂಗಾಧರ ಗುರುಮಠ, ಜೆ. ಸೀಮಾ, ಎಸ್‌.ಮಂಜುನಾಥ, ಎಂ. ಮಲ್ಲಪ್ಪ, ಕೆ. ಕೊಟ್ರೇಶ, ಎಂ. ನಳಿನಾ, ಡಿ.ವಿ. ಜ್ಯೋತಿ ಇತರರಿದ್ದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.