ಉಷಾ ದಾತಾರ್‌-ನೀಲಾ ರಾಮಗೋಪಾಲ್‌ಗೆ ಪ್ರಶಸ್ತಿ


Team Udayavani, Jan 16, 2017, 12:33 PM IST

dvg1.jpg

ದಾವಣಗೆರೆ: ರೇಣುಕಾ ಮಂದಿರದಲ್ಲಿ ಭಾನುವಾರ ನಡೆದ ನಾಟ್ಯಭಾರತಿ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಕಲಾಕೇಂದ್ರದ 58ನೇ ವಾರ್ಷಿಕೋತ್ಸವದಲ್ಲಿ ದೇವಾಲಯ ನೃತ್ಯವನ್ನು ಜಗದ್ವಿಖ್ಯಾತಗೊಳಿಸಿರುವ 72 ವರ್ಷ ಹರೆಯದ ಉಷಾ ದಾತಾರ್‌ಗೆ ನಾಟ್ಯಾಚಾರ್ಯ ಶ್ರೀನಿವಾಸ ಕುಲಕರ್ಣಿ, ಕರ್ನಾಟಕ ಶಾಸ್ತ್ರಿಯ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಸಾಧಕಿ ನೀಲಾ ರಾಮಗೋಪಾಲ್‌ಗೆ ವಿದುಷಿ ಲಕ್ಷ್ಮಿದೇವಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಪ್ರಶಸ್ತಿ ಸೀಕರಿಸಿದ ಉಷಾ ದಾತಾರ್‌ ಮಾತನಾಡಿ, ತಾವು ನೃತ್ಯ ಕ್ಷೇತ್ರಕ್ಕೆ ಬಂದು ಸಾಧನೆ ಮಾಡಲು ಮೂಲ ಪ್ರೇರಣೆಯಾಗಿರುವಂತಹ ನಾಟ್ಯಾಚಾರ್ಯ ಶ್ರೀನಿವಾಸ ಕುಲಕರ್ಣಿ ಅವರ ಹೆಸರಿನ ಪ್ರಶಸ್ತಿ ಪಡೆಯುತ್ತಿರುವುದು ಜೀವನದ ಅಮೂಲ್ಯ ದಿನ ಹಾಗೂ ಇದಕ್ಕಿಂತಲೂ ಪುಣ್ಯ ಮತ್ತೂಂದು ಇರಲಾರದು. ಹಲವಾರು ಪ್ರಶಸ್ತಿ, ಸನ್ಮಾನ ಪಡೆದಿದ್ದೇನೆ.

ಕನಸು ಮನಸಿಲ್ಲೂ ಎಣಿಸಿರದ ನಾಟ್ಯಾಚಾರ್ಯ ಶ್ರೀನಿವಾಸ ಕುಲಕರ್ಣಿ ಹೆಸರಿನ ಪ್ರಶಸ್ತಿ ಪಡೆದ ನಂತರ ಇನ್ನು ಯಾವುದೇ ಪ್ರಶಸ್ತಿ, ಸನ್ಮಾನ ಬೇಕಾಗಿಯೂ ಇಲ್ಲ. ಈ ಪ್ರಶಸ್ತಿಗೆ ಅಷ್ಟೊಂದು ಮಹತ್ವ ಇದೆ. ಈ ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಿರುವ ನಾಟ್ಯಭಾರತಿ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಕಲಾಕೇಂದ್ರಕ್ಕೆ ತಾವು ಸದಾ ಋಣಿ ಎಂದು ತಿಳಿಸಿದರು. ನಾಟ್ಯಾಚಾರ್ಯ ಶ್ರೀನಿವಾಸ ಕುಲಕರ್ಣಿ ಅತ್ಯದ್ಭುತ ವ್ಯಕ್ತಿತ್ವ ಹೊಂದಿದವರು.

ನೃತ್ಯ ಕ್ಷೇತ್ರದಲ್ಲಿ ಉತ್ತಮ ಸ್ಥಾನದಲ್ಲಿದ್ದರೂ ಅವರು ಎಂದಿಂಗೂ ತಾವು ನಾಟ್ಯಾಚಾರ್ಯ ಎಂದು ತೋರಿಸಿಕೊಂಡವರಲ್ಲ. ಸರಳ, ಸಜ್ಜನಿಕೆಯ ಪ್ರತೀಕವಾಗಿದ್ದರು. ಮಕ್ಕಳನ್ನು ಇಂಜಿನಿಯರ್‌, ಡಾಕ್ಟರ್‌ ಏನೇ ಓದಿಸಿ, ನೃತ್ಯಗಾರರನ್ನು ಬೆಳೆಸಿ. ನೃತ್ಯ, ಸಂಗೀತದಲ್ಲಿ ತೊಡಗುವುದರಿಂದ ಯಾವುದೇ ದೈಹಿಕ ಸಮಸ್ಯೆ  ಕಾಣಿಸಿಕೊಳ್ಳುವುದೇ ಇಲ್ಲ ಎಂದು ತಿಳಿಸಿದರು. 

ನನಗೆ ಹೆಸರನ್ನು ತಂದುಕೊಟ್ಟಿರುವ ದೇವಾಲಯ ನೃತ್ಯವನ್ನು ದಾವಣಗೆರೆ, ಹರಿಹರದಲ್ಲಿ ನಡೆಸಿಕೊಡಲುಯ ಸದಾ ಸಿದ್ಧ. ಒಂದು ವಾರದಲ್ಲೇ ದೇವಾಲಯ ನೃತ್ಯ ಕಾರ್ಯಕ್ರಮ ಆಯೋಜಿಸಿದರೆ ಖಂಡಿತವಾಗಿ ಪ್ರದರ್ಶನ ನಡೆಸಿಕೊಡುವುದಾಗಿ ತಿಳಿಸಿದರು.  ಗಾಯಕಿ ನೀಲಾ ರಾಮಗೋಪಾಲ್‌ ಮಾತನಾಡಿ, ವಯಸ್ಸಿಗೂ ಮತ್ತು ಸಂಗೀತಕ್ಕೆ ಸಂಬಂಧವೇ ಇಲ್ಲ. 

ನನ್ನಂತೆ 82 ವರ್ಷ ವಯಸ್ಸಿನವರೂ, 14 ವರ್ಷದವರೂ ಹಾಡಬಹುದು. ಸಂಗೀತ, ನೃತ್ಯದ ಆಸಕ್ತಿ ಇದ್ದಲ್ಲಿ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಸತತ ಅಭ್ಯಾಸದ ಮೂಲಕ ಸಂಗೀತ, ನೃತ್ಯವನ್ನು ಒಲಿಸಿಕೊಳ್ಳಬಹುದು. ಶಿಕ್ಷಣ, ಕೈಗಾರಿಕೆಯಲ್ಲಿ ಉತ್ತಮ ಹೆಸರುಗಳಿಸಿರುವ ದಾವಣಗೆರೆ ನೃತ್ಯ, ಸಂಗೀತ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುವಂತಾಗಲಿ ಎಂದು ಹಾರೈಸಿದರು. 

ಕಾರ್ಯಕ್ರಮ ಉದ್ಘಾಟಿಸಿದ ಜಾನಪದ ತಜ್ಞ ಡಾ| ಎಂ.ಜಿ. ಈಶ್ವರಪ್ಪ ಮಾತನಾಡಿ, ಸಂಗೀತ, ನೃತ್ಯದಿಂದ ಆತ್ಮವಿಶ್ವಾಸ, ಆತ್ಮಸೌಂದರ್ಯ ವೃದ್ಧಿಸುತ್ತದೆ. ಸಂಗೀತ ಹಾಗೂ ನೃತ್ಯವನ್ನು ಕಲಿಯುವುದು ಅಷ್ಟೊಂದು ಸುಲಭ ಅಲ್ಲ, ಹಾಗಾಗಿ ಶಾಲಾ-ಕಾಲೇಜುಗಳ ಪಠ್ಯಕ್ರಮವಾಗಿ ಕಲಿಸುವುದು ಸುಲಭ ಅಲ್ಲ.

ಭಾರತೀಯ ಆತ್ಮಸೌಂದರ್ಯವನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚಿಸಿದಂತಹ ಇಬ್ಬರು ಅತ್ಯಮೂಲ್ಯ ಕಲಾವಿದರಿಗೆ ಪ್ರಶಸ್ತಿ ನೀಡಿ, ಗೌರವಿಸುತ್ತಿರುವುದು ದಾವಣಗೆರೆಯನ್ನೇ ಸನ್ಮಾನಿಸಿದಂತೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಾಟ್ಯಭಾರತಿ ಶಾಸ್ತ್ರೀಯ ನೃತ್ಯಮತ್ತು ಸಂಗೀತ ಕಲಾಕೇಂದ್ರದ ಗೌರವ ಅಧ್ಯಕ್ಷ ಎಚ್‌.ಬಿ.  ಮಂಜುನಾಥ್‌, ಗೀತ, ನೃತ್ಯ ಮತ್ತು ಯೋಗವನ್ನು ಕಡ್ಡಾಯವಾಗಿ ಪಠ್ಯಕ್ರಮದಲ್ಲಿ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವೀರಶೈವ ಸದೊದನಾ ಸಂಸ್ಥೆ ಅಧ್ಯಕ್ಷ ದೇವರಮನಿ ಶಿವಕುಮಾರ್‌, ರಜನಿ ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ, ಕೆ.ಜಿ. ಕುಲಕರ್ಣಿ ಇತರರು ಇದ್ದರು. ಬಿ.ವಿ. ರಾಜಶೇಖರ್‌ ಸ್ವಾಗತಿಸಿದರು. ಪಿ. ನಾಗಭೂಷಣ್‌ ತೌಡೂರ್‌ ನಿರೂಪಿಸಿದರು. ಕೇಂದ್ರದ ವಿದ್ಯಾರ್ಥಿಗಳು ಮನಮೋಹಕವಾಗಿ ಹರಿದಾಸರು ಕಂಡ ಕೃಷ್ಣನ ಲೀಲೆಗಳು, ಗಿರಿಜಾ ಕಲ್ಯಾಣ ನೃತ್ಯ ಪ್ರದರ್ಶನ ನೀಡಿದರು.    

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.