ಸುರಕ್ಷತೆ ಖಚಿತಪಡಿಸಿಕೊಂಡೇ ಲಸಿಕೆ ವಿತರಣೆ: ಸಂಸದ ಸಿದ್ದೇಶ್ವರ
Team Udayavani, Jan 17, 2021, 1:19 PM IST
ದಾವಣಗೆರೆ: ಕೋವಿಡ್ ಲಸಿಕೆಯನ್ನು ಸಾಕಷ್ಟು ಪರೀಕ್ಷೆಗೊಳಪಡಿಸಿ ಸುರಕ್ಷಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಂಡೇ ನೀಡಲಾಗುತ್ತಿದೆ. ಆದ್ದರಿಂದ ಯಾರೂ ಯಾವುದೇ ಭಯಕ್ಕೆ ಒಳಗಾಗದೇ ನಿರಾತಂಕವಾಗಿ ಲಸಿಕೆ ಪಡೆಯಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ನಗರದ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಕೊವಿಡ್ ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಗೆ 13,500 ಲಸಿಕೆಗಳು ಬಂದಿದ್ದು ಜಿಲ್ಲೆಯಾದ್ಯಂತ ಲಸಿಕೆ ನೀಡಲಾಗುವುದು. ಮೊದಲು ಆರೋಗ್ಯ ಕಾರ್ಯಕರ್ತರಿಗೆ ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ಲಸಿಕಾ ಕಾರ್ಯಕ್ರಮ ಸಂಪೂರ್ಣ ಯಶಸ್ಸು ಕಾಣಲಿದೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಿಲ್ಲೆಯ ಏಳು ಕೇಂದ್ರಗಳಲ್ಲಿ ಲಸಿಕಾಕರಣಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟ, ಯಾವುದೇ ಇತರೆ ಕಾಯಿಲೆಗಳ ಗಂಭೀರತೆ ಇಲ್ಲದ ತಲಾ ನೂರು ಆರೋಗ್ಯ ಕಾರ್ಯಕರ್ತ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿದ ಪ್ರಕಾರ ಇಂದು ಲಸಿಕಾಕರಣ ಮಾಡಲಾಗುತ್ತಿದೆ. ಮೊದಲನೇ ಹಂತದಲ್ಲಿ 6876 ಸರ್ಕಾರಿ, 12194 ಖಾಸಗಿ ಸೇರಿದಂತೆ ಒಟ್ಟು 19,070 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಪಟ್ಟಿ ತಯಾರಿಸಿಡಲಾಗಿದೆ. ಯಾವುದೇ ರೀತಿಯ ಭಯವಿಲ್ಲದೆ ನಿರಾತಂಕವಾಗಿ ಲಸಿಕೆ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ಯಾರೂ ಲಸಿಕಾಕರಣ ಕುರಿತು ಅನಗತ್ಯ ಗೊಂದಲ ಸೃಷ್ಟಿಸಬಾರದು ಮತ್ತು ಸುಳ್ಳು ಸುದ್ದಿ, ವದಂತಿಗಳಿಗೆ ಕಿವಿಗೊಡಕೂಡದು. ಸುಳ್ಳು ಸುದ್ದಿ, ವದಂತಿಗೆ ಎಡೆ ಮಾಡಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಯಾದಗಿರಿಯಲ್ಲಿ ಮೊದಲ ದಿನ ಶೇ.50 ಲಸಿಕೆ ನೀಡಿಕೆ
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ರಾಘವನ್ ಮಾತನಾಡಿ, ಕೋವಿಡ್ನಿಂದ ಆಗಬಹುದಾದ ಸಾವು-ನೋವು ಮತ್ತು ಸಮುದಾಯ ಹರಡುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಕೋವಿಡ್ ಲಸಿಕಾಕರಣ ಕಾರ್ಯಕ್ರಮ ಜಾರಿಗೆ ತಂದಿದೆ. ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು ಜಿಲ್ಲೆಯಲ್ಲಿ ಒಟ್ಟು 36 ಕೇಂದ್ರಗಳಲ್ಲಿ 19,070 ಜನರಿಗೆ ಲಸಿಕೆ ನೀಡಲಾಗುವುದು. ಒಟ್ಟು 108 ನುರಿತ ಲಸಿಕಾಕಾರರು ಲಸಿಕೆ ನೀಡುತ್ತಿದ್ದಾರೆ ಎಂದರು.
ಶಾಸಕರಾದ ಎಸ್.ಎ. ರವಿಂದ್ರನಾಥ್, ಪ್ರೊ| ನಿಂಗಣ್ಣ, ಆರ್ ಸಿಎಚ್ ಅಧಿಕಾರಿ ಡಾ| ಮೀನಾಕ್ಷಿ , ದಾವಣಗೆರೆ ತಹಶೀಲ್ದಾರ್ ಗಿರೀಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಯಪ್ರಕಾಶ್, ತಾಲೂಕು ವೈದ್ಯಾಧಿಕಾರಿ ಸೇರಿದಂತೆ ಇತರೆ ವೈದ್ಯರು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ