![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ವರಾಹ ಮುಕ್ತ ಸ್ಮಾರ್ಟ್ ಸಿಟಿ ಕಾರ್ಯಾಚರಣೆ
Team Udayavani, Feb 14, 2017, 12:56 PM IST
![dvg2.jpg](https://www.udayavani.com/wp-content/uploads/2017/02/14/dvg2.jpg)
ದಾವಣಗೆರೆ: ಹಲವು ಬಾರಿ ಸಭೆ ನಡೆಸಿ, ಮನವೊಲಿಸಿ ಎಚ್ಚರಿಕೆ ನೀಡಿದರೂ ಮಾಲೀಕರು ಹಂದಿಗಳ ಸ್ಥಳಾಂತರಕ್ಕೆ ಮುಂದಾಗದೇ ಇರುವುದರಿಂದ ಪಾಲಿಕೆ ಇದೀಗ ಇನ್ನೊಂದು ಮಾರ್ಗದಲ್ಲಿ ಹಂದಿ ಸಮಸ್ಯೆ ನಿರ್ಮೂಲನೆಗೆ ಮುಂದಾಗಿದೆ. ಹಂದಿಮುಕ್ತ ಸ್ಮಾರ್ಟ್ ಸಿಟಿ ನಿರ್ಮಿಸುವ ಕಾರ್ಯಾಚರಣೆಗೆ ಪಾಲಿಕೆ ಕೈ ಹಾಕಿದ್ದು, ಸೋಮವಾರ ತಮಿಳುನಾಡಿನ ತಂಡ ಹಂದಿಗಳನ್ನು ಹಿಡಿದು ಕೊಂಡೊಯ್ಯುತ್ತಿದೆ.
ಈ ತಂಡದವರೇ ನಗರದಲ್ಲಿನ ಹಂದಿಗಳನ್ನು ಹಿಡಿದುಕೊಂಡು ತಮಿಳುನಾಡಿಗೆ ಸಾಗಿಸುವ ಜವಾಬ್ದಾರಿ ಹೊತ್ತಿದ್ದಾರೆ. ಈ ಕೆಲಸಕ್ಕೆ ಪೊಲೀಸ್ ಇಲಾಖೆ ಸಹ ಕೈ ಜೋಡಿಸಿದೆ. ಹಂದಿಗಳನ್ನು ಹಿಡಿದು ದಾವಣಗೆರೆ ಜಿಲ್ಲೆಯ ಗಡಿ ದಾಟಿಸುವವರೆಗೆ ಈ ತಂಡಕ್ಕೆ ಪೊಲೀಸ್ ಇಲಾಖೆ ಭದ್ರತೆ ನೀಡಲಿದೆ. ಚಿತ್ರದುರ್ಗದ ಜಿಲ್ಲೆ ಗಡಿ ಮುಕ್ತಾಯದವರೆಗೂ ಆ ಜಿಲ್ಲಾ ಪೊಲೀಸರ ಭದ್ರತೆ ಸಿಗಲಿದೆಯಂತೆ.
ಬೆಳಗ್ಗೆಯಿಂದಲೇ ತಂಡದವರು ನಗರದ ವಿವಿಧೆಡೆ ಹಂದಿಗಳನ್ನು ಹಿಡಿದು ತರಾತುರಿಯಲ್ಲಿ ಚಿತ್ರದುರ್ಗದ ಮೂಲಕ ಸಾಗಿಸಿದರು. ನಗರದ ಅರುಣ ಚಿತ್ರಮಂದಿರ, ಮೀನು ಮಾರುಕಟ್ಟೆ, ಲಕ್ಷ್ಮೀಫ್ಲೊರ್ ಮಿಲ್, ಜಿಲ್ಲಾಸ್ಪತ್ರೆ, ಎಂಸಿಸಿ ಬಿ ಬ್ಲಾಕ್, ಪಿ.ಜೆ. ಬಡಾವಣೆ ಸೇರಿ ವಿವಿಧ ಭಾಗಗಳಲ್ಲಿ ಹಿಡಿದು, 2 ಲಾರಿಯಲ್ಲಿ ಹಂದಿಗಳನ್ನು ಸಾಗಿಸಲಾಗಿದೆ. 500ಕ್ಕೂ ಹಂದಿಗಳನ್ನು ಹಿಡಿದು ಸಾಗಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆದರೆ, ಲಭ್ಯ ಮಾಹಿತಿ ಪ್ರಕಾರ ಸಾವಿರಾರು ಹಂದಿಗಳನ್ನು ಒಂದೇ ದಿನದಲ್ಲಿ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಕೆಲ ಕಡೆಗಳಲ್ಲಿ ಹಂದಿ ಹಿಡಿಯುವಾಗ ಅವುಗಳ ಮಾಲೀಕರು ಅಡ್ಡಿಪಡಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದು, ವಾಪಸ್ ಕಳುಹಿಸಿದರು. ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಂದಿ ಹಿಡಿಯುವ ಕಾರ್ಯಕ್ಕೆ ಸಹಕಾರ ನೀಡಿದರು.
ಕಳೆದ ಹಲವು ವರ್ಷಗಳಿಂದ ಹಂದಿ ನಿರ್ಮೂಲನೆಗೆ ಯತ್ನಿಸಿದರೂ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿರಲಿಲ್ಲ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಸ್.ಟಿ. ಅಂಜನ್ಕುಮಾರ್ ಬಾತಿ ಗುಡ್ಡದ ಬಳಿ ಜಾಗ ನೀಡಿ, ಅಲ್ಲಿ ಹಂದಿ ಸಾಕಣೆಗೆ ಅವಕಾಶ ಮಾಡಿಕೊಡುವ ಉದ್ದೇಶ ಹೊಂದಿದ್ದರು. ಆದರೆ, ಗ್ರಾಮಸ್ಥರಿಂದ ತೀವ್ರ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಯೋಜನೆ ಅಲ್ಲಿಗೆ ಬಿದ್ದುಹೋಯಿತು.
ಅದಾದ ನಂತರ ಪಾಲಿಕೆ ಮೇಯರ್, ಆಯುಕ್ತ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಹಲವು ಬಾರಿ ಹಂದಿ ಮಾಲೀಕರ ಸಭೆ ನಡೆಸಲಾಯಿತು. ಸಭೆಯಲ್ಲಿ ಹಂದಿ ಸ್ಥಳಾಂತರಕ್ಕೆ ಒತ್ತಾಯ ಮಾಡಲಾಗಿತ್ತು. ಸ್ಥಳಾಂತರ ಮಾಡದೇ ಇದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಎಚ್ಚರಿಕೆ ಸಹ ನೀಡಲಾಗಿತ್ತು. ಆದರೆ, ಮಾಲೀಕರು ಇದಕ್ಕೆ ಜಗ್ಗಲಿಲ್ಲ ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.