ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಣೆ
Team Udayavani, Sep 2, 2019, 10:38 AM IST
ಹೊನ್ನಾಳಿ:ನ್ಯಾಮತಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ಆದೇಶಪತ್ರ ವಿತರಿಸಿದರು.
ಹೊನ್ನಾಳಿ: ಸರ್ಕಾರದ ಅನೇಕ ಜನಪರ ಯೋಜನೆಗಳನ್ನು ನೇರವಾಗಿ ತಲುಪಿಸುವುದೇ ಜನಸ್ಪಂದನ ಕಾರ್ಯಕ್ರಮದ ಉದ್ದೇಶ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ನ್ಯಾಮತಿ ಪಟ್ಟಣದಲ್ಲಿ ಶನಿವಾರ ತಾಲೂಕು ಆಡಳಿತ ಮತ್ತು ನ್ಯಾಮತಿ ತಾಲೂಕು ಮಟ್ಟದ ಕಂದಾಯ ಇಲಾಖೆಯ ವಿವಿಧ ಸೌಲಭ್ಯಗಳ ವಿತರಣೆಯ ಜನಸ್ಪಂದನ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಬಗರ್ ಹುಕುಂ ಹಕ್ಕುಪತ್ರ ಮತ್ತು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು. ಬಸವಣ್ಣನವರ ಸಾಮಾಜಿಕ ನ್ಯಾಯದ ಪರಿಕಲ್ಪನೆಯಂತೆ ಅವಳಿ ತಾಲೂಕುಗಳ ಜನತೆಗೆ ಪ್ರಾಮಾಣಿಕವಾಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕಂಕಣಬದ್ಧನಾಗಿದ್ದೇನೆ. ಸರ್ಕಾರದ ಯೋಜನೆಗಳನ್ನು ಬಡಜನತೆಗೆ ತಲುಪಿಸಲು ಸಿಬ್ಬಂದಿ ಶ್ರಮಿಸಬೇಕು. ಬಡ ಜನತೆ ತಮ್ಮ ಕೆಲಸ ಕಾರ್ಯಗಳಿಗಾಗಿ ಪದೇ ಪದೇ ಕಚೇರಿಗೆ ಅಲೆಯಬಾರದೆಂಬ ಉದ್ದೇಶ ನನ್ನದಾಗಿದ್ದು, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಿದಾಗ ಸರ್ಕಾರದ ಯೋಜನೆಗಳಿಗೆ ಮಹತ್ವ ಬರಲಿದೆ ಎಂದರು.
ಯಡಿಯೂರಪ್ಪನವರು ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ಜನಸ್ಪಂದನ ಕಾಯಕ್ರಮ ಜಾರಿಗೆ ತಂದಿದ್ದು, ಆಗ ಹೋಬಳಿ, ಗ್ರಾಮ ಮಟ್ಟದಲ್ಲಿ 53 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿ 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಗಿತ್ತು ಎಂದರು.
ಕಾರ್ಯಕ್ರಮದಲ್ಲಿ 76 ರೈತರಿಗೆ ಬಗರ್ ಹುಕುಂ ಸಾಗುವಳಿ ಪತ್ರ, ಸಂಧ್ಯಾ ಸುರಕ್ಷಾ 128, ವೃದ್ಧಾಪ್ಯ ವೇತನ 62, ಅಂಗವಿಕಲ ವೇತನ 24, ವಿಧವಾ ವೇತನ 52 ಸೇರಿದಂತೆ ಬೆಳಗುತ್ತಿ, ಗೋವಿನಕೋವಿ ಹೋಬಳಿಯ ಒಟ್ಟು 383 ಪಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಸೌಲಭ್ಯಗಳನ್ನು ವಿತರಿಸಲಾಗಿತು.
ಗ್ರಾ.ಪಂ ಅಧ್ಯಕ್ಷೆ ರೇಣುಕಾ ಪಾಂಡುರಂಗ, ತಾ.ಪಂ ಉಪಾಧ್ಯಕ್ಷ ಎಸ್.ಪಿ. ರವಿಕುಮಾರ್, ತಾ.ಪಂ ಸದಸ್ಯ ಸಿದ್ದಲಿಂಗಪ್ಪ, ತಾ.ಪಂ ಇಒ ಪ್ರೇಮಕುಮಾರ್, ಗ್ರಾ.ಪಂ ಸದಸ್ಯರು, ಕಂದಾಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ