ವರ್ಣಾಶ್ರಮ ಪದ್ಧತಿ ಮಹಾಪರಾಧ


Team Udayavani, Feb 25, 2019, 6:02 AM IST

dvg-2.jpg

ದಾವಣಗೆರೆ: ಐದು ಸಾವಿರ ವರ್ಷದ ಹಿಂದೆ ಸೃಷ್ಟಿಸಿದ ವರ್ಣಾಶ್ರಮ ಪದ್ಧತಿ ಮಹಾಪರಾಧ ಎಂದು ಉಪಮುಖ್ಯಮಂತ್ರಿ ಡಾ|ಜಿ.ಪರಮೇಶ್ವರ್‌ ಬಣ್ಣಿಸಿದ್ದಾರೆ. ಭಾನುವಾರ, ಜಿಲ್ಲಾ ಛಲವಾದಿ ಮಹಾಸಭಾ ಶ್ರೀಶಿವಯೋಗಿ ಮಂದಿರದ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಮತ್ತು ಜನಜಾಗೃತಿ ಸಮಾವೇಶ ಉದ್ಘಾಟಿಸಿ, ಮಾತನಾಡಿದ ಅವರು, ಇಡೀ ವಿಶ್ವದ ಯಾವುದೇ ಸಮಾಜದಲ್ಲಿ ವರ್ಗೀಕರಣ ಆಗಿಲ್ಲ. ಜಾತಿ ಹೆಸರಲ್ಲಿ ಮೇಲು-ಕೀಳು ಎಂಬ ವರ್ಗೀಕರಣ ಅಕ್ಷಮ್ಯ ಅಪರಾಧ ಎಂದರು.

ಆಧುನಿಕ ಜಗತ್ತಿಗೆ ಮೊದಲು ಬದಲಾವಣೆಯ ಮುನ್ನುಡಿ ಬರೆದವರು ಭಗವಾನ್‌ ಬುದ್ಧ. ಸಮಾಜದಲ್ಲಿನ ಶೋಷಿತರ ಸಂಕಷ್ಟ ಗುರುತಿಸಿ, ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು. 

12ನೇ ಶತಮಾನದಲ್ಲಿ ಬ್ರಾಹ್ಮಣನಾಗಿ ಹುಟ್ಟಿದ ಬಸವಣ್ಣನವರು ಮೊದಲ ಬಾರಿಗೆ ಅನುಭವ ಮಂಟಪವೆಂಬ ಸಂಸತ್‌ನಲ್ಲಿ ಶೋಷಿತರಿಗೆ ಸಮಾನತೆ ಪ್ರತಿಪಾದಿಸಿದರು. ಆಧುನಿಕ ಭಾರತದಲ್ಲಿ ಮಹಾತ್ಮ ಗಾಂಧೀಜಿ ಶೋಷಿತರನ್ನು ಹರಿಜನರೆಂದು ಕರೆದರು. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಬಾಬಾಸಾಹೇಬ್‌ ಅಂಬೇಡ್ಕರ್‌ ಶೋಷಿತರ ಧ್ವನಿಯಾಗಿ ಹೋರಾಟ ಮಾಡಿದರು. ಶೋಷಿತರ ಅದೃಷ್ಟವೇನೋ ಎಂಬಂತೆ ಅವರಿಗೆ ಸಂವಿಧಾನ ರಚನೆ ಅವಕಾಶ ದೊರೆಯಿತು. ಅಂಬೇಡ್ಕರ್‌ ಅವರಿಗೆ ಆ ಅವಕಾಶ ಸಿಗದಿದ್ದರೆ ಯಾವ ಸಮಾಜ ನಿರ್ಮಾಣ ಆಗುತ್ತಿತ್ತೋ ಎಂಬುದನ್ನು ಯೋಚಿಸಿ ಎಂದು ಹೇಳಿದರು.

ಸಂವಿಧಾನಕ್ಕೆ ಅಪಮಾನ ಮಾಡುವ ಹಾಗೂ ಅದರ ವಿರುದ್ಧ ನಡೆಯುವವರಿಗೆ ಈ ದೇಶದಲ್ಲಿ ಗೌರವ ಇಲ್ಲ. ಸಂವಿಧಾನ ತಿದ್ದಲು ಮುಂದಾಗುವವರಿಗೆ ಈ ದೇಶದ ಹಿತಾಸಕ್ತಿ ಇಲ್ಲ ಎಂದು ಟಾಂಗ್‌ ನೀಡಿದರು.

ದೇಶದ ಅಭಿವೃದ್ಧಿ ಆಗಬೇಕಿದ್ದಲ್ಲಿ ಮೊದಲು ಜಾತಿ ನಾಶವಾಗಬೇಕು. ಶೋಷಿತರು, ದಲಿತರು ಎಂದೇಳಿಕೊಳ್ಳಲು ನಾವು ಅಂಜಬಾರದು. ನಮಗೆ ಅಂಬೇಡ್ಕರ್‌ ದೇವರು, ಸರ್ವಸ್ವ. ಅವರು ತೋರಿಸಿದ ಹೋರಾಟದ ದಾರಿ ಬದಲಾಗಬಾರದು. ದಾರಿ ಬದಲಿಸಿದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ. ಆ ನಿಟ್ಟಿನಲ್ಲಿ ಸಮಾಜದವರು ಮೊದಲು ವಿದ್ಯಾವಂತರಾಗಬೇಕು. ಸಮಾಜದ ಪೋಷಕರು ತಮ್ಮ ಮಕ್ಕಳು ಅದರಲ್ಲೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಶಪಥ ಮಾಡಬೇಕು. ನಾನು ಎಲ್ಲೇ ಇರಲಿ, ಸಮಾಜದ ಜೊತೆಗಿರುತ್ತೇನೆ. ಸಮಾಜ ಸಂಘಟಿತರಾಗಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಮಹಾಸಭಾದವರು ಸಲ್ಲಿಸಿದ ಬೇಡಿಕೆಗಳಿಗೆ ಸ್ಪಂದಿಸಿದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್‌ ಅವುಗಳ ಈಡೇರಿಕೆಗೆ ಭರವಸೆ ನೀಡಿದರು. 

ಭಿನ್ನವತ್ತಲೆ…
ಛಲವಾದಿ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ, ದಾವಿವಿಯಲ್ಲಿ ದಿ.ಬಸವಲಿಂಗಪ್ಪ ಅಧ್ಯಯನ ಪೀಠ ಸ್ಥಾಪನೆ, 5 ಎಕರೆ ಜಮೀನು ಖರೀದಿಗೆ ಧನಸಹಾಯ, ಡಾ|ಬಿ.ಆರ್‌.ಅಂಬೇಡ್ಕರ್‌ ಕಂಚಿನ ಪ್ರತಿಮೆ ನಿರ್ಮಾಣ, ವಿದ್ಯಾರ್ಥಿನಿಲಯ ಹಾಗೂ ಮಹಾಸಭಾದ ಕಟ್ಟಡಕ್ಕೆ 5 ಕೋಟಿ ರೂ. ನೆರವು, ವೀರವನಿತೆ ಒನಕೆ ಓಬವ್ವನ ಜಯಂತಿ ಸರ್ಕಾರದಿಂದಲೇ ಆಚರಣೆ, ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಛಲವಾದಿ ಸಮುದಾಯ ಭವನ ನಿರ್ಮಾಣಕ್ಕೆ ಕೋರಿ ಇದೇ ಸಂದರ್ಭದಲ್ಲಿ ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ಉಪ ಮುಖ್ಯಮಂತ್ರಿಗಳಿಗೆ ಭಿನ್ನವತ್ತಲೆ ಸಲ್ಲಿಸಲಾಯಿತು.

ಸ್ವಲ್ಪಮಟ್ಟಿಗೆ ಅಸ್ಪೃಶ್ಯತೆ ನಿವಾರಣೆ
 ದಾವಣಗೆರೆ: ಅಸ್ಪೃಶ್ಯತೆಗೆ 5 ಸಾವಿರ ವರ್ಷಗಳ ಇತಿಹಾಸ ಇದೆ. ಸ್ವಾತಂತ್ರ್ಯಾ ನಂತರ ಸ್ವಲ್ಪಮಟ್ಟಿನ ಬದಲಾವಣೆ ಆಗುತ್ತಿದೆ. ಆದರೆ, ಸಂಪೂರ್ಣ ಬದಲಾವಣೆ ಆಗಬೇಕಿದ್ದರೆ ಜನರ ಮನಪರಿವರ್ತನೆ ಆಗಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್‌ ಹೇಳಿದ್ದಾರೆ.

ಬೆಳಕಿಗೆ ಬರುತ್ತಿರುವ ಅಸ್ಪೃಶ್ಯತೆ ಪ್ರಕರಣಗಳ ಬಗ್ಗೆ ಮಾಧ್ಯಮದವರ ಪಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಸ್ಪೃಶ್ಯತೆ ಅಷ್ಟು ಬೇಗ ನಿರ್ಮೂಲನೆ ಆಗುವುದು ಕಷ್ಟ. ದೇಶಕ್ಕೆ ಸ್ವಾತಂತ್ರ್ಯಾ ಸಿಕ್ಕ ಬಳಿಕ ಸಂವಿಧಾನ ಜಾರಿಯಾಗಿ ತಕ್ಕಮಟ್ಟಿಗೆ ಬದಲಾವಣೆ ಆಗಿದೆ ಎಂದರು.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.