Davanagere; ಮೆಣಸು ಮಾರಾಟಕ್ಕೆ ಬರುತ್ತಿದ್ದ ವಾಹನ ಪಲ್ಟಿ; ಆಂಧ್ರದ ಮೂವರು ಸಾವು
Team Udayavani, Feb 26, 2024, 12:15 PM IST
ದಾವಣಗೆರೆ: ಆಂಧ್ರ ಪ್ರದೇಶದಿಂದ ಒಣ ಮೆಣಸಿನಕಾಯಿ ಮಾರಾಟ ಮಾಡಲು ಬಂದಿದ್ದವರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ.
ಆಂಧ್ರದಿಂದ ಹಾವೇರಿಯ ಬ್ಯಾಡಗಿಗೆ ಮೆಣಸಿನಕಾಯಿ ಮಾರಾಟ ಮಾಡಲು ಬಂದಿದ್ದ ಬಡ ರೈತರಿಗೆ ದಾವಣಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜವರಾಯ ಕಾದು ಕುಳಿತಿದ್ದ. ಮೆಣಸಿನಕಾಯಿ ಹೊತ್ತು ತರುತ್ತಿದ್ದ ಬುಲೆರೋ ಟೆಂಪೋದ ಟೈಯರ್ ಸ್ಪೋಟವಾಗಿ ವಾಹನ ಪಲ್ಟಿಯಾಗಿದ್ದು, ಸ್ಥಳದಲ್ಲೇ ಮೂರು ಜನ ಸಾವನ್ನಪ್ಪಿದ್ದಾರೆ. ಉಳಿದಂತೆ ಆರು ಜನರಿಗೆ ಗಾಯಗಳಾಗಿವೆ.
ಅಪಘಾತಕ್ಕೀಡಾದವರು ಆಂಧ್ರದ ಕರ್ನೂಲ್ ಜಿಲ್ಲೆಯ ಮಂತ್ರಾಲಯಂ ತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಮುಸ್ತಾನ್ (50), ಎಸ್ ಟಿ ವೀರಣ್ಣ (30), ಪೆದ್ದ ವೆಂಕಣ್ಣ (38) ಮೃತ ದುರ್ದೈವಿಗಳಾಗಿದ್ದಾರೆ.
ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದು, ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಡ ರೈತರು ತಾವು ಬೆಳೆದ ಒಣ ಮೆಣಸಿನಕಾಯಿಯನ್ನು ಬ್ಯಾಡಗಿ ಮಾರುಕಟ್ಟೆಗೆ ಮಾರಾಟ ಮಾಡಿ ಜೀವನ ನಡೆಸುತ್ತಿದ್ದರು. ಪ್ರತಿ ಬಾರಿಯಂತೆ ತಾವು ಬೆಳೆದ ಒಣ ಮೆಣಸಿನಕಾಯಿಯನ್ನು ಬುಲೇರೋ ವಾಹನದಲ್ಲಿ ಹಾಕಿಕೊಂಡು ಬರುವಾಗ ರಾಷ್ಟ್ರೀಯ ಹೆದ್ದಾರಿ 48 ರ ಪಕ್ಕದಲ್ಲಿರುವ ಪಂಜಾಬಿ ಡಾಬಾದ ಬಳಿ ವಾಹನದ ಟಯರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿದ್ದು, ಮೇಲೆ ಇದ್ದವರು ರಸ್ತೆಗೆ ಬಿದ್ದು ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾವಣಗೆರೆಯ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ