ಕೋರೆಗಾಂವ್‌ ಗೆಲುವಿನ ನೆನಪಿಗೆ ವಿಜಯೋತ್ಸವ


Team Udayavani, Jan 2, 2019, 8:26 AM IST

1-january-11.jpg

ದಾವಣಗೆರೆ: ಮಹಾರಾಷ್ಟ್ರದ ಪುಣೆಯ ಶಿರೂರು ತಾಲೂಕಿನ ಕೋರೆಗಾಂವ್‌ನಲ್ಲಿ 1818ರ ಜ. 1ರಂದು ನಡೆದ ಯುದ್ಧದಲ್ಲಿ ಸಾಧಿಸಿದ ಗೆಲುವಿನ ಸವಿನೆನಪಿಗಾಗಿ ಮಂಗಳವಾರ ಬಹುಜನ ಸಮಾಜ ಪಾರ್ಟಿ ಮತ್ತು ಸಾಮಾಜಿಕ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತ್ಯೇಕವಾಗಿ ವಿಜಯೋತ್ಸವ ಆಚರಿಸಿದರು. ಅಂಬೇಡ್ಕರ್‌ ವೃತ್ತದಲ್ಲಿನ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಘೋಷಣೆ ಕೂಗಿ, ಪರಸ್ಪರ ಸಿಹಿ ಹಂಚುವ ಮುಖೇನ ಕೋರೆಗಾಂವ್‌ ವಿಜಯೋತ್ಸವ ಆಚರಿಸಿದರು.

ಬಹುಜನ ಸಮಾಜ ಪಾರ್ಟಿ: ಪೇಶ್ವೆಗಳ ಎರಡನೇ ಬಾಜಿರಾಯನ ಆಡಳಿತದಲ್ಲಿ ವೈದಿಕ ಮನುಧರ್ಮಶಾಸ್ತ್ರ ಆಧಾರಿತ ಚಾತುರ್ವರ್ಣ ಜಾತಿ ಪದ್ಧತಿ ಅನುಸರಿಸುತ್ತಾ ಅಸ್ಪೃಶ್ಯರನ್ನು ಅತ್ಯಂತ ಅಮಾನುಷವಾಗಿ ನಡೆಸಿಕೊಳ್ಳಲಾಗುತ್ತಿತ್ತು. ಬಾಂಬೆ ನೇಟಿವ್‌ ಇನ್‌ಫಂಟ್ರಿಯಾ 2ನೇ ಬೆಟಾಲಿಯನ್‌ನ ಮೊದಲ ರೆಜಿಮೆಂಟ್‌ನಲ್ಲಿ ಸೈನಿಕರಾಗಿ ಕೆಲಸ ಮಾಡುತ್ತಿದ್ದವರು ಜಾತಿ ಪದ್ಧತಿ ಅನುಸರಣೆ ತೀವ್ರವಾಗಿ ವಿರೋಧಿಸುತ್ತಿದ್ದರು. ಅದೇ ಸಂದರ್ಭಲ್ಲಿ ಬ್ರಿಟಿಷರು ಪೇಶ್ವೆಗಳ ವಿರುದ್ಧ ನಡೆಸಿದ ಯುದ್ಧದಲ್ಲಿ ಪಾಲ್ಗೊಂಡಿದ್ದ ಮಹರ್‌ ಭಂಗಿ, ಚಮ್ಮಾರ್‌ ಇತರೆ ಸಮುದಾಯದವರು 1818ರ ಜ. 1ರಂದು ಭೀಮಾ ನದಿ ತೀರದಲ್ಲಿ ನಡೆದ ಯುದ್ಧದಲ್ಲಿ ವಿರೋಚಿತ ಹೋರಾಟ ನಡೆಸಿ, 21 ಜನರು ಹುತಾತ್ಮರಾದರು ಎಂದು ಕಾರ್ಯಕರ್ತರು ಸ್ಮರಿಸಿದರು.

ಬಾಬಾ ಸಾಹೇಬ್‌ ಅಂಬೇಡ್ಕರ್‌ರವರು ಪ್ರತಿ ವರ್ಷವೂ ಕೋರೆಗಾಂವ್‌ನಲ್ಲಿನ ಹುತಾತ್ಮರ ವಿಜಯಸ್ಮಾರಕಕ್ಕೆ ಭೇಟಿ ನೀಡಿ, ವೀರ ಯೋಧರಿಗೆ ಗೌರವ ಸಲ್ಲಿಸುತ್ತಿದ್ದರು. ಆ ಹಿನ್ನೆಲೆಯಲ್ಲಿ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಿಹಿ ಹಂಚುವ ಮೂಲಕ ಕೋರೆಂಗಾವ್‌ ವಿಜಯೋತ್ಸವ ಆಚರಿಸಲಾಗುವುದು ಎಂದು ತಿಳಿಸಿದರು. ಬಹುಜನ ಸಮಾಜ ಪಾರ್ಟಿ ಜಿಲ್ಲಾ ಅಧ್ಯಕ್ಷ ಎಚ್‌. ಮಲ್ಲೇಶ್‌, ಪರಶುರಾಮ ಕೋಟೆಮಲ್ಲೂರು, ಮಂಜುನಾಥ್‌ ಪೆರಿಯಾರ್‌, ಮೋಹನ್‌ದಾಸ್‌, ಎಚ್‌. ಪ್ರವೀಣ್‌, ಮಂಜಪ್ಪ ಕೋಡಿಹಳ್ಳಿ, ಬಿ.ವಿ. ಹನುಮಂತಪ್ಪ, ಮಲ್ಲಪ್ಪ, ಅಂಜಿನಪ್ಪ ನೀಲಗುಂದ ಇತರರು ಇದ್ದರು.

ಸಾಮಾಜಿಕ ಸಂಘರ್ಷ ಸಮಿತಿ…
ಸಾಮಾಜಿಕ ಸಂಘರ್ಷ ಸಮಿತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿದ್ಯಾರ್ಥಿಗಳ ಒಕ್ಕೂಟ ಕಾರ್ಯಕರ್ತರು ಕೋರೆಗಾಂವ್‌ ವಿಜಯೋತ್ಸವ ಆಚರಿಸಿದರು. ಅಪಮಾನ, ಅವಮಾನಕ್ಕೀಡಾಗಿದ್ದ ದಲಿತರು, ಶೋಷಿತರು ತಮಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ 1818 ರ ಜ. 1 ರಂದು ಕೋರೆಂಗಾವ್‌ನಲ್ಲಿ ನಡೆದ ಯುದ್ಧದಲ್ಲಿ ಜಯ ಗಳಿಸಿದ್ದರ ಸವಿನೆನಪಿಗಾಗಿ ಕೋರೆಂಗಾವ್‌ ಸಂಗ್ರಾಮದ- ಶೋಷಿತರ ವಿಜಯದ ದಿನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಸಮಿತಿ ಜಿಲ್ಲಾ ಅಧ್ಯಕ್ಷ ಪಿ. ತಿಪ್ಪೇರುದ್ರಪ್ಪ, ಇಮ್ತಿಯಾಜ್‌ ಹುಸೇನ್‌, ಬಿ.ಎನ್‌. ನಾಗೇಶ್‌, ಡಿ. ಅಂಜಿನಪ್ಪ, ಎಂ. ಪ್ರಕಾಶ್‌, ಚಂದ್ರಪ್ಪ, ಪರಶುರಾಮ್‌ ಹೊನ್ನಾಳಿ, ಗುಮ್ಮನೂರು ಪರಶುರಾಮ್‌, ಮಂಜಪ್ಪ, ಆರ್‌. ಜಯಪ್ಪ, ಡಿ. ಜಯಪ್ಪ, ತಿಪ್ಪೇಶ್‌, ಎಸ್‌.ಎಲ್‌. ದುರುಗೇಶ್‌, ಗಂಗಾಧರ್‌, ಎಂ. ಕಿರಣ್‌ ಇತರರು ಇದ್ದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.