ಜಲ ಸಂರಕ್ಷಣೆಗೆ ಪ್ರತಿಜ್ಞೆ-ಜಾಗೃತಿ ಅಭಿಯಾನ


Team Udayavani, Mar 19, 2019, 6:53 AM IST

dvg-1.jpg

ದಾವಣಗೆರೆ: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಾ. 22ರಂದು ವಿಶ್ವ ಜಲ ದಿನ ಆಚರಿಸಬೇಕು. ಜಲ ಸಂರಕ್ಷಣೆಗೆ ಪ್ರತಿಜ್ಞೆ ಸ್ವೀಕರಿಸಿ, ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಪೋಷಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಚ್‌.ಬಸವರಾಜೇಂದ್ರ ಸೂಚಿಸಿದ್ದಾರೆ.

ಸೋಮವಾರ, ನಗರದ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ 2019ನೇ ವರ್ಷವನ್ನು ಜಲವರ್ಷ ಎಂಬುದಾಗಿ ಘೋಷಿಸಿದೆ. ಜಲವರ್ಷದ ಆಚರಣೆಗಾಗಿ ರಾಜ್ಯಾದ್ಯಂತ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿ ಸಮುದಾಯ ಹಾಗೂ ಸಂಸ್ಥೆಗಳ ಸಹಯೋಗದಲ್ಲಿ ಮಾ. 22ರಂದು ವಿಶ್ವ ಜಲ ದಿನ ಆಚರಿಸಲಾಗುವುದು. ಅಂದು ಎಲ್ಲಾ ಸರ್ಕಾರಿ
ಕಚೇರಿಗಳಲ್ಲಿ ವಿಶ್ವ ಜಲ ದಿನ ಆಚರಿಸಬೇಕು ಎಂದರು.

ಜಲಾಮೃತ ಕಾರ್ಯಕ್ರಮದ ಅಂಗವಾಗಿ ಜನರಿಗೆ ನೀರಿನ ಬಗ್ಗೆ ಅರಿವು ಮೂಡಿಸಲು ಜಲ ಸಾಕ್ಷರತೆ, ಜಲ ಸಂರಕ್ಷಣೆ, ಜಲ ಪ್ರಜ್ಞೆ ಹಾಗೂ ಹಸಿರೀಕರಣ ಎಂಬ ನಾಲ್ಕು ಅಂಶ ಪರಿಚಯಿಸಲಾಗುತ್ತಿದೆ. ನೀರನ್ನು ಮಿತವಾಗಿ ಬಳಸಿ ನಾಳೆಗೂ ಉಳಿಸಿ, ನೀರು ಅಮೃತ, ನೀರಿನ ಜವಾಬ್ದಾರಿ ನನ್ನದು, ಸರ್ವರಿಗೂ ಜಲ ಸದಾಕಾಲ ಎಂಬ ಘೋಷವಾಕ್ಯಗಳ ಮೂಲಕ ಜನರಿಗೆ ನೀರಿನ ಬಳಕೆ ಮತ್ತು ಮಹತ್ವ ಹಾಗೂ ಮುಂದಿನ ಪೀಳಿಗೆಗೆ ನೀರು ಉಳಿಸಬೇಕು ಎನ್ನುವುದರ ಮಾಹಿತಿ ನೀಡಲಾಗುವುದು ಅವರು ತಿಳಿಸಿದರು.
 
ವಿಶ್ವ ಜಲ ದಿನಾಚರಣೆಗೂ ಮುನ್ನ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಕಿರು ನೀರು ಸರಬರಾಜು ಟ್ಯಾಂಕರ್‌ಗಳು, ಶಾಲೆಗಳು, ಅಂಗನವಾಡಿ, ಡೈರಿಗಳು, ಕೋ-ಆಪರೇಟಿವ್‌ ಸಂಘಗಳು, ಸರ್ಕಾರಿ ಕಟ್ಟಡಗಳ ಕಾಂಪೌಂಡ್‌ ಗೋಡೆಗಳ ಮೇಲೆ ಜಲಸಂರಕ್ಷಣಾ ಸಂದೇಶ ಮತ್ತು ಚಿತ್ರ ಪ್ರದರ್ಶಿಸಲು ಅವರು ಸೂಚಿಸಿದರು.

ವಿಶ್ವ ಜಲ ದಿನಾಚರಣೆಯಂದು ಸಮುದಾಯಗಳನ್ನು ಒಗ್ಗೂಡಿಸಿ ಪ್ರತಿಯೊಬ್ಬರೂ ಒಂದು ಸಸಿ ನೆಡಲು ಚಾಲನೆ ನೀಡಿ, ಸಸಿ ನೆಡುವ ವೀಡಿಯೊವನ್ನು ದಾಖಲಿಸಿ ಅದನ್ನು [email protected]ಗೆ ಇಮೇಲ್‌ ಮಾಡಬೇಕು. ಜಲಾಮೃತ ಕುರಿತಾದ ಸಾರ್ವಜನಿಕ ಪ್ರತಿಕ್ರಿಯೆ ದಾಖಲಿಸಬೇಕು. ಕಾರ್ಯಕ್ರಮಗಳ ಕುರಿತಾಗಿ ಜನರಿಗೆ ಕರಪತ್ರ ಹಂಚಬೇಕು ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ, ಅರಣ್ಯ, ನೀರಾವರಿ ಇಲಾಖೆಗಳು ಜಲಮೂಲಗಳ ಪುನಶ್ಚೇತನಕ್ಕಾಗಿ ಕೈಗೊಳ್ಳುವ ಕಾರ್ಯಕ್ರಮ ಮತ್ತು ನೀರಿಗೆ ಸಂಬಂಧಿಸಿದ ಇತರೆ ಯೋಜನೆಗಳಿಗೆ ಹೆಚ್ಚು ಗಮನ ನೀಡಬೇಕು. ಜಲ ಸಂರಕ್ಷಣೆ ಚಲನಚಿತ್ರಗಳನ್ನು ಹಳ್ಳಿಗಳಲ್ಲಿ ಪ್ರದರ್ಶಿಸಲು ಸರ್ಕಾರಕ್ಕೆ ತಾವು ಮನವಿ ಮಾಡಿ ಪತ್ರ ಬರೆಯುವುದಾಗಿ ಸಿಇಓ ತಿಳಿಸಿದರು. 

ಜಿ.ಪಂ. ಸಹಾಯಕ ಯೋಜನಾ ನಿರ್ದೇಶಕ ಶಶಿಧರ್‌ ಮಾತನಾಡಿ, ಕಳೆದ ಹದಿನೇಳು ವರ್ಷಗಳಲ್ಲಿ ಹದಿನಾಲ್ಕು ವರ್ಷ ನಮ್ಮ ರಾಜ್ಯ ಬರಪೀಡಿತವಾಗಿದೆ. ಇದಕ್ಕೆ ಕಾರಣ ರಾಜ್ಯದಲ್ಲಿ ಹಸಿರು ಕಡಿಮೆಯಾಗಿರುವುದು. ಪ್ರಸಕ್ತ ವರ್ಷವನ್ನು
ಜಲವರ್ಷವನ್ನಾಗಿಸಿ ಜಲ ಮರುಪೂರಣ ಯೋಜನೆ ಮತ್ತು ಎರಡು ಕೋಟಿ ಸಸಿ ನೆಡಲು ಯೋಜಿಸಲಾಗಿದೆ ಎಂದರು.

ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಆಂಜನೇಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಆರ್‌. ಪರಮೇಶ್ವರಪ್ಪ, ಡಿಎಚ್‌ಒ ಡಾ| ತ್ರಿಪುಲಾಂಭ, ದಾವಣಗೆರೆ, ಜಗಳೂರು, ಹೊನ್ನಾಳಿ, ಹರಿಹರ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.