ಸ್ಕೇಟಿಂಗ್‌ನಲ್ಲಿ ಚಿನ್ನ ಪಡೆದ ಹಳ್ಳಿಹೈದ


Team Udayavani, Aug 6, 2018, 2:45 PM IST

dvg-3.jpg

ಹರಪನಹಳ್ಳಿ: ನಗರದಲ್ಲಿ ಉತ್ತಮ ಸೌಲಭ್ಯದ ಜತೆಗೆ ತರಬೇತಿ ಪಡೆದು ಸಾಧನೆ ಮಾಡುವವರ ನಡುವೆ ಹಳ್ಳಿಹೈದನೊಬ್ಬ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಕಿರಿ ವಯಸ್ಸಿನಲ್ಲಿ ಸಾಧನೆ ಶಿಖರವೇರಿದ್ದಾನೆ.

ಹರಿಹರ ವಿದ್ಯಾದಾಯಿನಿ ಶಾಲೆಯಲ್ಲಿ 8ನೇ ತರಗತಿ ಅಭ್ಯಾಸ ಮಾಡುತ್ತಿರುವ ತಾಲೂಕಿನ ಮೈದೂರು ಗ್ರಾಮದ ವಕೀಲ ಬಿ. ರೇವನಗೌಡ ಹಾಗೂ ರೇಣುಕಮ್ಮ ಅವರ ಪುತ್ರ ಬಿ. ವಿನಾಯಕ. ಥೈಲ್ಯಾಂಡ್‌ಲ್ಲಿ ಜು. 27ರಿಂದ 31ರವರೆಗೆ
ವಿದ್ಯಾರ್ಥಿ ಒಲಿಂಪಿಕ್ಸ್‌ ಸಂಘದ ಆಯೋಜಿಸಿದ್ದ 4ನೇ ಅಂತಾರಾಷ್ಟ್ರೀಯ ವಿದ್ಯಾರ್ಥಿ ಒಲಿಂಪಿಕ್‌ ಕ್ರೀಡಾಕೂಟದಲ್ಲಿ
ಭಾಗವಹಿಸಿ ಸ್ಕೇಟಿಂಗ್‌ಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಮುಡಿಗೇರಿಸಿಕೊಂಡಿದ್ದಾನೆ.

14 ವರ್ಷದೊಳಗಿನ ಸ್ಕೇಟಿಂಗ್‌ ಸ್ಪರ್ಧೆಯಲ್ಲಿ ಪಾಕಿಸ್ತಾನ, ಶ್ರೀಲಂಕಾ, ಮಲೇಷಿಯಾ, ಬರ್ಮಾ, ಥೈಲಾಂಡ್‌ ಕ್ರೀಡಾಪಟುಗಳ ತೀವ್ರ ಪೈಪೋಟಿ ನಡುವೆ 100 ಮೀಟರ್‌ ವಿಭಾಗದಲ್ಲಿ ಪ್ರಥಮ, 1000 ಮೀಟರ್‌ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾನೆ. ಹರಿಹರ ತರಬೇತುದಾರ ಮಹ್ಮದ್‌ ಆಲಿ ಗರಡಿಯಲ್ಲಿ ಪಳಗಿರುವ ವಿನಾಯಕ ಓದಿನ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಛಾಪು ಮೂಡಿಸುತ್ತಿದ್ದಾನೆ.

ವಿನಾಯಕ ಪ್ರಥಮ ಬಾರಿಗೆ ಬಳ್ಳಾರಿ ನಗರದಲ್ಲಿ ನಡೆದ ಅಂತರ್‌ ಜಿಲ್ಲಾ ಮಟ್ಟದ ಸ್ಕೇಟಿಂಗ್‌ ಸ್ಪರ್ಧೆಯಲ್ಲಿ ಪ್ರಥಮ,
ಹರಿಹರದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ, ಮಹಾರಾಷ್ಟ್ರದ ಸೊಲ್ಲಾಪುರದ ಉಜ್ಜಯಿನಿ ಹಾಗೂ ಹರಿಯಾಣದಲ್ಲಿ ನಡೆದ
ಅಂತಾರಾಜ್ಯ ಸ್ಪರ್ಧೆಯಲ್ಲಿಯೂ ಪ್ರಥಮ ಪಡೆದಿದ್ದಾನೆ. 2017-18ರ ಮೇ 11ರಿಂದ 17ವರೆಗೆ ಮಲೇಷಿಯಾದಲ್ಲಿ ನಡೆದ ಸ್ಪರ್ಧೆಯಲ್ಲಿ 100 ಮೀಟರ್‌ನಲ್ಲಿ ಚಿನ್ನ, 300 ಮೀಟರ್‌ ನಲ್ಲಿ ಬೆಳ್ಳಿ ಪದಕಕ್ಕೆ ಭಾಜನನಾಗಿದ್ದಾನೆ.

ವಕೀಲರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುವ ವಿನಾಯಕ ತಂದೆ ಬಿ. ರೇವನಗೌಡ ಅವರು ಮಗನ ಆಸಕ್ತಿಯಂತೆ ಕ್ರೀಡಾ ಚಟುವಟಿಕೆಗೆ ಉತ್ತೇಜನ ನೀಡುತ್ತಿದ್ದಾರೆ. ಮಗನ ಆಸೆಯಂತೆ ಅಭ್ಯಾಸದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡಿದ್ದೇವೆ. ಅನ್ಯ ದೇಶದ ಮಕ್ಕಳ ನಡುವೆ ನಮ್ಮ ಮಗನೂ ಪೈಪೋಟಿ ನೀಡುವಾಗ ರೋಮಾಂಚನವಾಗುತ್ತಿತ್ತು. ವಿದೇಶ ನೆಲದಲ್ಲಿ ಮಗನ ಸಾಧನೆ ಕಂಡು ಹೆಮ್ಮೆ ಆಗುತ್ತಿದೆ. ಮಗನ ಅಭಿರುಚಿಗಳಿಗೆ ನೀರೆರೆದು ಪೋಷಿಸುವ ಕೆಲಸ ಮಾಡುತ್ತೇನೆ ಎನ್ನುತ್ತಾರೆ ವಿನಾಯಕ ತಂದೆ ಬಿ.ರೇವನಗೌಡ.

 ಪ್ರತಿಭೆ ಎನ್ನುವುದು ಎಲ್ಲಿದ್ದರೂ ಪ್ರಜ್ವಲಿಸುತ್ತದೆ ಎಂಬುವುದಕ್ಕೆ ಗ್ರಾಮೀಣ ಭಾಗದ ಹಳ್ಳಿಹೈದ ವಿನಾಯಕ ಉತ್ತಮ ನಿದರ್ಶನವಾಗಿದ್ದಾನೆ. ಬಾಲಕನ ಸಾಧನೆಗೆ ವಿವಿಧ ಸಂಘ, ಸಂಸ್ಥೆಗಳ ಗಣ್ಯರು, ಶಾಲೆಯ ಮುಖ್ಯಸ್ಥರು, ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.

ಥೈಲಾಂಡ್‌ನ‌ಲ್ಲಿ ನಡೆದ ಕ್ರೀಡಾಕೂಟದಲ್ಲಿ ತೀವ್ರ ಪೈಪೋಟಿ ಇತ್ತು. ತರಬೇತುದಾರ ಗುರುಗಳ ಮಾರ್ಗದರ್ಶನ ಹಾಗೂ
ಪೋಷಕರ ಪ್ರೋತ್ಸಾಹದಿಂದ ಗೆಲುವು ನನ್ನದಾಗಿದೆ. ಅನ್ಯ ದೇಶಗಳ ಕ್ರೀಡಾಪಟುಗಳು ಸಹ ಉತ್ತಮ ಪ್ರದರ್ಶನ
ತೋರಿದರು. ಸ್ಕೇಟಿಂಗ್‌ ಜೊತೆಗೆ ಅಥ್ಲೆಟಿಕ್ಸ್‌, ಕೇರಂ ಆಟದಲ್ಲಿ ನನಗೆ ಆಸಕ್ತಿಯಿದ್ದು, ಬಿಡುವಿನ ವೇಳೆಯಲ್ಲಿ ಇತರೆ ಆಟಗಳಲ್ಲಿಯೂ ತೊಡಗಿಸಿಕೊಳ್ಳುತ್ತೇನೆ.
 ಬಿ.ವಿನಾಯಕ, ಕ್ರೀಡಾಪಟು 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.