“ಹಳ್ಳಿ’ ಕ್ರೀಡಾಂಗಣ: ಸರಕಾರದ ಮಾರ್ಗಸೂಚಿ


Team Udayavani, May 30, 2022, 6:45 AM IST

“ಹಳ್ಳಿ’ ಕ್ರೀಡಾಂಗಣ: ಸರಕಾರದ ಮಾರ್ಗಸೂಚಿ

ದಾವಣಗೆರೆ: ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳನ್ನು ಉತ್ತೇಜಿಸಲು 504 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕ್ರೀಡಾ ಅಂಕಣಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯವ್ಯಯದಲ್ಲಿ ಮಾಡಿದ್ದ ಘೋಷಣೆ ಅನುಷ್ಠಾನಕ್ಕೆ ಮಾರ್ಗಸೂಚಿ ಸಿದ್ಧವಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಹಯೋಗದೊಂದಿಗೆ ಗ್ರಾಮೀಣ ಪ್ರದೇಶ ದಲ್ಲಿ ಕ್ರೀಡಾ ಅಂಕಣ ನಿರ್ಮಾಣ ಮಾಡಲು ಹಾಗೂ ಕ್ರೀಡಾ ತರಬೇತಿ ನೀಡಲು ಉಭಯ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು ಜಂಟಿಯಾಗಿ ಮಾರ್ಗಸೂಚಿ ರೂಪಿಸಿ ಸುತ್ತೋಲೆ ಹೊರಡಿಸಿದ್ದಾರೆ.

ನರೇಗಾ ಯೋಜನೆಯಡಿ ವೆಚ್ಚ
ಗ್ರಾಮೀಣ ಕ್ರೀಡಾ ಅಂಕಣಗಳಲ್ಲಿ ನರೇಗಾ ಯೋಜನೆಯಡಿ ಸ್ಥಳೀಯ ಆವಶ್ಯಕತೆಗಳಿಗೆ ಅನುಗುಣವಾಗಿ ರನ್ನಿಂಗ್‌ ಟ್ರ್ಯಾಕ್ , ಕಬಡ್ಡಿ, ಖೋಖೋ, ವಾಲಿಬಾಲ್‌, ಬಾಸ್ಕೆಟ್‌ಬಾಲ್‌ ಇತ್ಯಾದಿ ಅಂಕಣಗಳನ್ನು ನಿರ್ಮಿಸಬೇಕು. ಇದರ ವೆಚ್ಚವನ್ನು ನರೇಗಾ ಯೋಜನೆಯಡಿ ಭರಿಸಬೇಕು. ಪ್ರತೀ ಪಂಚಾಯತ್‌ನಲ್ಲಿ ಒಂದರಂತೆ ಸರಕಾರಿ ಶಾಲೆ, ಕಾಲೇಜು, ವಸತಿ ನಿಲಯಗಳಲ್ಲಿ ಆದ್ಯತೆ ಮೇರೆಗೆ ಕ್ರೀಡಾ ಅಂಕಣಗಳನ್ನು ನಿರ್ಮಿಸಬೇಕು ಎಂದು ರಾಜ್ಯದ ಎಲ್ಲ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹೆಚ್ಚುವರಿ ಕ್ರಿಯಾಯೋಜನೆ-ಅವಕಾಶ
ಕ್ರೀಡಾ ಅಂಕಣ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಹೆಚ್ಚುವರಿ ಕ್ರಿಯಾಯೋಜನೆ ತಯಾರಿಸುವುದು ಆವಶ್ಯವಿದ್ದಲ್ಲಿ ಅಂತಹ ಕ್ರಿಯಾ ಯೋಜನೆಗಳಿಗೆ ಜಿಲ್ಲಾ ಪಂಚಾಯತ್‌ನಿಂದ ಅನುಮೋದನೆ ಪಡೆಯಬೇಕು. ಸುತ್ತೋಲೆಯಲ್ಲಿ ತಿಳಿಸಿರುವ ಕ್ರೀಡಾ ಅಂಕಣಗಳ ಜತೆಗೆ ಅಥವಾ ಬದಲಾಗಿ ಸ್ಥಳೀಯವಾಗಿ ಆವಶ್ಯವಿರುವ ಇತರ ಕ್ರೀಡಾ ಅಂಕಣಗಳ ಅಂದಾಜು ಪಟ್ಟಿ ತಯಾರಿಸಿಕೊಂಡು ಅನುಷ್ಠಾನಗೊಳಿಸಬಹುದು ಎಂದೂ ತಿಳಿಸಲಾಗಿದೆ.

ನಿರ್ಮಾಣಕ್ಕೆ ನಿಬಂಧನೆಗಳೇನು?
ಕ್ರೀಡಾ ಅಂಕಣಗಳನ್ನು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಸರಕಾರಿ ನಿವೇಶನ ಅಥವಾ ಸರಕಾರಿ ಶಾಲೆ-ಕಾಲೇಜು ಆವರಣದಲ್ಲಿ ನಿರ್ಮಿಸಬೇಕು. ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ನೋಂದಾಯಿತ ಕೂಲಿ ಕಾರ್ಮಿಕರಿಂದ ನಿರ್ವಹಿಸಬೇಕು ಮತ್ತು ಯೋಜನೆಯಡಿ ಅನುಮತಿಸಲ್ಪಟ್ಟ ಯಂತ್ರಗಳನ್ನು ಹೊರತುಪಡಿಸಿ ಇತರ ಯಾವುದೇ ಯಂತ್ರಗಳನ್ನು ಬಳಸಬಾರದು. ಕ್ರೀಡಾ ಅಂಕಣ ನಿರ್ಮಾಣ ಕಾಮಗಾರಿಯಲ್ಲಿ ನರೇಗಾ ಯೋಜನೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕ್ರೀಡಾ ಅಂಕಣ ಕಾಮಗಾರಿಗಳಲ್ಲಿ ಸಾಮಗ್ರಿ ವೆಚ್ಚ ಅಧಿಕ ಇರುವುದರಿಂದ ಜಿಲ್ಲೆಯ ಸಾಮಗ್ರಿ ವೆಚ್ಚದ ಅನುಪಾತ ಶೇ. 40ರಷ್ಟು ಮೀರದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ.

ಅಂದಾಜು ಮೊತ್ತ ಎಷ್ಟು?
ಯಾವ ಕ್ರೀಡಾ ಅಂಕಣಕ್ಕೆ ಎಷ್ಟು ವೆಚ್ಚ ಮಾಡಬೇಕು ಎನ್ನುವುದರ ಬಗ್ಗೆಯೂ ನಿರ್ದೇಶನ ನೀಡಲಾಗಿದೆ. ಕಬಡ್ಡಿ ಅಂಕಣಕ್ಕೆ 2.60 ಲಕ್ಷ ರೂ., ಖೋಖೋ ಅಂಕಣಕ್ಕೆ 3.30 ಲಕ್ಷ ರೂ., ವಾಲಿಬಾಲ್‌ ಅಂಕಣಕ್ಕೆ 5.10 ಲಕ್ಷ ರೂ., ಬಾಸ್ಕೆಟ್‌ಬಾಲ್‌ ಅಂಕಣಕ್ಕೆ 5.20 ಲಕ್ಷ ರೂ., ರನ್ನಿಂಗ್‌ ಟ್ರಾÂಕ್‌ ಅಂಕಣಕ್ಕೆ 5 ಲಕ್ಷ ರೂ. ಸೇರಿ ಒಟ್ಟು 21.20 ಲಕ್ಷ ರೂ.ಗಳ ಅಂದಾಜು ಪಟ್ಟಿ ತಯಾರಿಸಿ ನಿರ್ದೇಶನ ನೀಡಲಾಗಿದೆ. ಕ್ರೀಡಾ ಅಂಕಣ ನಿರ್ಮಾಣದ ಬಳಿಕ ತಲಾ 25 ಸಾವಿರ ರೂ.ವರೆಗೆ ಕ್ರೀಡಾ ಸಾಮಗ್ರಿಗಳನ್ನು ಜಿಲ್ಲಾ ಪಂಚಾಯತ್‌ ವಲಯದ ಲೆಕ್ಕ ಶೀರ್ಷಿಕೆಯ ಕ್ರೀಡಾಕೂಟ ಮತ್ತು ರ್ಯಾಲಿ ಸಂಘಟನೆ ಹಾಗೂ ಯುವಜನ ಕ್ರೀಡಾ ಚಟುವಟಿಕೆ ಪ್ರೋತ್ಸಾಹದಡಿ ಒದಗಿಸಿರುವ ಅನುದಾನ ನೀಡಲು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಮಟ್ಟದ ಉಪ ಹಾಗೂ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.