ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ವಿಶನ್‌-05 ಕಾರ್ಯಕ್ರಮ


Team Udayavani, Mar 3, 2020, 11:38 AM IST

dg-tdy-1

ಸಾಂದರ್ಭಿಕ ಚಿತ್ರ

ದಾವಣಗೆರೆ: ಜಿಲ್ಲೆಯಲ್ಲಿ 2019-20ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ಫಲಿತಾಂಶ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವಿಶನ್‌-05 ಕಾರ್ಯಕ್ರಮ ರೂಪಿಸಿದೆ.

ಈ ಬಾರಿಯ ಎಸ್‌.ಎಸ್‌.ಎಲ್‌.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ 5ರ ಒಳಗಿನ ಸ್ಥಾನ ಪಡೆದೇ ತೀರುವ ನಿಟ್ಟಿನಲ್ಲಿ ವಿಶನ್‌-05… ಕಾರ್ಯಕ್ರಮದಡಿ ಶಿಕ್ಷಣ ಇಲಾಖೆ ಹಲವಾರು ರಚನಾತ್ಮಕ ಕಾರ್ಯಕ್ರಮ ರೂಪಿಸುವ ಜೊತೆಗೆ ಫಲಿತಾಂಶ ಹೆಚ್ಚಳದತ್ತ ಕಾರ್ಯಪ್ರವೃತ್ತವಾಗಿದೆ. ಎಲ್ಲಾ ಶಾಲಾ ಹಂತದಲ್ಲಿಯೇ ಎಸ್‌.ಎಸ್‌. ಎಲ್‌.ಸಿ. ಕಲಿಕಾ ಗುಣಮಟ್ಟ ಹೆಚ್ಚಳದ ಜೊತೆಗೆ ಫಲಿತಾಂಶ ಸುಧಾರಣೆಗೆ ರೂಪಿಸಿರುವ ವಿಶನ್‌-05 ಕಾರ್ಯಕ್ರಮದಡಿ ಫೋನ್‌ ಇನ್‌, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ, ರಾತ್ರಿ ತರಗತಿ, ದತ್ತು ಯೋಜನೆಯ ಸಮರ್ಪಕ ಅನುಷ್ಠಾನ, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರವಾರು ಮಾರ್ಗದರ್ಶನ, ಪರೀಕ್ಷಾ ಕೇಂದ್ರವಾರು ವಿಶೇಷ ತರಗತಿ ಆಯೋಜನೆ, ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸುವುದು, ಜಿಲ್ಲಾ ಹಂತದಲ್ಲಿ ಪ್ರಶ್ನೆಪತ್ರಿಕೆ ವಿತರಣೆ, ಉರ್ದು ವಿಭಾಗಗಳ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ.

2018-19ನೇ ಸಾಲಿನಲ್ಲಿ ಜಿಲ್ಲೆಯ ಎಸ್‌.ಎಸ್‌. ಎಲ್‌.ಸಿ. ಫಲಿತಾಂಶ ಶೇ.86.28 ಪ್ರಮಾಣದೊಂದಿಗೆ ರಾಜ್ಯದಲ್ಲಿ 9 ನೇ ಸ್ಥಾನದಲ್ಲಿದೆ. 2017-18ನೇ ಸಾಲಿನಲ್ಲಿ ಜಿಲ್ಲೆ 15 ಸ್ಥಾನದಲ್ಲಿದ್ದುದು ಗಮನಾರ್ಹ. ಕಳೆದ ಸಾಲಿನಲ್ಲಿ ಶೇ.69.04 ರಷ್ಟು ವಿದ್ಯಾರ್ಥಿಗಳು ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಗಳಿಸಿದನ್ನು ಗಮನದಲ್ಲಿಟ್ಟು ಕೊಂಡಿರುವ ಶಿಕ್ಷಣ ಇಲಾಖೆ ವಿಶನ್‌-05 ಕಾರ್ಯಕ್ರಮದಡಿ ಈ ಬಾರಿ ಶೇ.80ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಶೇ.80ಕ್ಕಿಂತಲೂ ಹೆಚ್ಚಿನ ಅಂಕ ಗಳಿಸುವಂತಾಗಲು ಹಲವಾರು ಕಾರ್ಯಕ್ರಮ ರೂಪಿಸಿದೆ.

ವಿಶನ್‌-05 ಕಾರ್ಯಕ್ರಮದಡಿ ಫೋನ್‌ ಇನ್‌ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ಗಣಿತ, ವಿಜ್ಞಾನ, ಇಂಗ್ಲಿಷ್‌ ಅಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಎದುರಾದಲ್ಲಿ ಕೂಡಲೇ ಸಂಬಂಧಿತ ಶಿಕ್ಷಕರಿಗೆ ಕರೆ ಮಾಡಿ, ಇಂತಹದ್ದು ಅರ್ಥವಾಗುತ್ತಿಲ್ಲ… ಎಂದು ಹೇಳಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ದಾವಣಗೆರೆ ದಕ್ಷಿಣ ವಲಯದಲ್ಲಿ ಫೋನ್‌-ಇನ್‌ ಕಾರ್ಯಕ್ರಮಕ್ಕೆ ಒಳ್ಳೆಯ ಸ್ಪಂದನೆ ದೊರೆಯುತ್ತಿದೆ ಎನ್ನುತ್ತಾರೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಸಿದ್ದಪ್ಪ.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ಗುರಿಯ ವಿಶನ್‌ -05 ಅಡಿ ಸಂವಾದ ಮತ್ತೂಂದು ಕಾರ್ಯಕ್ರಮ ದಾವಣಗೆರೆ ದಕ್ಷಿಣ ವಲಯದ 13 ಕಡೆ ಈವರೆಗೆ ಸಂವಾದ ನಡೆಸಲಾಗಿದೆ. ವಿಷಯವಾರು ತಜ್ಞರು, ಸಂಪನ್ಮೂಲ ವ್ಯಕ್ತಿಗಳೊಂದಿಗೆ ವಿದ್ಯಾರ್ಥಿಗಳು ಮುಕ್ತವಾಗಿ ಸಂವಾದ ನಡೆಸಬಹುದು. ಸಂವಾದದ ವಿಶೇಷವೆಂದರೆ, ಯಾವುದೇ ವಿದ್ಯಾರ್ಥಿ ನಿರ್ದಿಷ್ಟ ಸಮಸ್ಯೆಯ ಬಗ್ಗೆ ಪರಿಹಾರ ಕಂಡುಕೊಳ್ಳಬಹುದು. ಇಂತಹ ಲೆಕ್ಕ, ವಿಷಯ ಅರ್ಥವಾಗಿಲ್ಲ ಎಂದು ತಿಳಿಸಿದರೆ, ಆ ಸಮಸ್ಯೆಗೆ ಮಾತ್ರವೇ ಸೀಮಿತವಾಗಿ ಪರಿಹಾರ ನೀಡಲಾಗುವುದು. ಹಾಗಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಗೆ ತಕ್ಷಣಕ್ಕೆ ಸೂಕ್ತ ಪರಿಹಾರ ದೊರೆತಂತಾಗುತ್ತದೆ.

ಜಿಲ್ಲೆಯ ಅನೇಕ ಶಾಲೆಯಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ಕಡ್ಡಾಯವಾಗಿ ವಿಶೇಷ ತರಗತಿ ನಡೆಸಲಾಗುತ್ತಿದೆ. ಪ್ರತಿ ದಿನ ಸಂಜೆ 6ರ ವರೆಗೆ ಶಾಲೆಯಲ್ಲೇ ಇರಬೇಕು. 6ರ ನಂತರ ವಿದ್ಯಾರ್ಥಿನಿಯರಿಗೆ ಮಾತ್ರವೇ ಮನೆಗೆ ತೆರಳಲು ಅವಕಾಶ ಇದೆ. ದಾವಣಗೆರೆ ತಾಲೂಕಿನ ಮಳಲ್ಕೆರೆ, ಹೂವಿನಮಡು, ನಿಟುವಳ್ಳಿ ಸರ್ಕಾರಿ ಪ್ರೌಢಶಾಲೆ ಇತರೆಡೆ ರಾತ್ರಿ 9ರ ವರೆಗೂ ವಿಶೇಷ ತರಗತಿ ನಡೆಸಲಾಗುತ್ತಿದೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಶ್ನೆಕೋಶ ನೀಡಲಾಗಿದೆ. ಹಿಂದಿನ ವರ್ಷಗಳ ಪ್ರಶ್ನೆಪತ್ರಿಕೆಗಳಲ್ಲಿ ಸಾಮಾನ್ಯವಾಗಿ ಕೇಳಲಾಗುವ ಸಂಭವನೀಯ ಪ್ರಶ್ನೆಗಳ ಮಾಹಿತಿ ನೀಡಲಾಗುವುದು. ಕೆಲವಾರು ವಿಷಯ ಶಿಕ್ಷಕರು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆಗಳ ಬಗ್ಗೆಯೂ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ.

21,467 ವಿದ್ಯಾರ್ಥಿಗಳು :  ಮಾ. 27 ರಿಂದ ಏ.9ರ ವರೆಗೆ ಜಿಲ್ಲೆಯ 67 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಒಟ್ಟು 21,467 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೊನ್ನಾಳಿ ವಲಯದಲ್ಲಿ 2,848, ಜಗಳೂರಿನಲ್ಲಿ 2,278,ಚನ್ನಗಿರಿಯಲ್ಲಿ 3,975, ದಾವಣಗೆರೆ ಉತ್ತರ ವಲಯದಲ್ಲಿ 3,349, ದಕ್ಷಿಣ ವಲಯದಲ್ಲಿ ಅತೀ ಹೆಚ್ಚು 5,768, ಹರಿಹರದಲ್ಲಿ 3,249 ವಿದ್ಯಾರ್ಥಿಗಳು ಇದ್ದಾರೆ.

ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 5ರ ಒಳಗಿನ ಸ್ಥಾನ ಪಡೆಯುವ ನಿಟ್ಟಿನಲ್ಲಿ ವಿಶನ್‌-05… ಕಾರ್ಯಕ್ರಮ ರೂಪಿಸಿದ್ದೇವೆ. ಎಲ್ಲಾ ಶಾಲೆಯಲ್ಲಿ ವಿಶನ್‌-05 ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಫೋನ್‌ ಇನ್‌, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ, ಕೆಲ ಶಾಲೆಯಲ್ಲಿ ರಾತ್ರಿ ವೇಳೆಯಲ್ಲೂ ಶಾಲೆ ನಡೆಸಲಾಗುತ್ತಿದೆ. ಸಂವಾದ ಒಳಗೊಂಡಂತೆ ಹಲವಾರು ರಚನಾತ್ಮಕ ಕಾರ್ಯಕ್ರಮ ಕಾರ್ಯರೂಪಕ್ಕೆ ತರಲಾಗಿದೆ. ಸಿ.ಆರ್‌. ಪರಮೇಶ್ವರಪ್ಪ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ

 

-ರಾ. ರವಿಬಾಬು

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.