ಪಾಲಿಕೆ ಆಡಳಿತ ವೈಫಲ್ಯದಿಂದ ನೀರಿನ ಸಮಸ್ಯೆ ಉಲ್ಬಣ: ನಾಗರಾಜ್
Team Udayavani, Jun 24, 2020, 9:08 AM IST
ದಾವಣಗೆರೆ: ಮಹಾನಗರ ಪಾಲಿಕೆಯ ವೈಫಲ್ಯದ ಪರಿಣಾಮ ಜನರು ಕುಡಿಯುವ ನೀರಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ನಗರಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್ ದೂರಿದ್ದಾರೆ.
ರಾಜನಹಳ್ಳಿ, ಬಾತಿ, ಕುಂದುವಾಡ ಪಂಪ್ಹೌಸ್ಗಳಲ್ಲಿನ ಮೋಟಾರ್ಗಳನ್ನು ದುರಸ್ತಿ ಮಾಡಿಸಿಲ್ಲ. ನಿಜಲಿಂಗಪ್ಪ ಬಡಾವಣೆಯಲ್ಲೇ 15 ದಿನಗಳಿಂದ ನೀರು ಬಿಟ್ಟಿಲ್ಲ. ಆಡಳಿತ ವರ್ಗದ ಸಂಪೂರ್ಣ ವೈಫಲ್ಯವೇ ನೀರಿನ ಸಮಸ್ಯೆಗೆ ಮೂಲ ಕಾರಣ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿದರು. ಜಿಲ್ಲಾಧಿಕಾರಿಗಳ ಅಧಿಕಾರವಧಿಯಲ್ಲಿ ಫೆ. 7 ರಂದು ಆಸ್ತಿ ತೆರಿಗೆ ಹೆಚ್ಚಿಸಲಾಗಿದೆ. ಕೋವಿಡ್ , ಲಾಕ್ ಡೌನ್ನಿಂದ ಜನರು ಆರ್ಥಿಕ ತೊಂದರೆಯಲ್ಲಿರುವಾಗ ತೆರಿಗೆ ಕಟ್ಟುವುದು ಬಹಳ ಕಷ್ಟ. ಹಾಗಾಗಿ ಈಗ ತೆರಿಗೆ ಪರಿಷ್ಕರಣೆಯೇ ಬೇಡ. ಒಂದೊಮ್ಮೆ ಮಾಡುವುದಾದರೆ ಮನೆ, ವಾಣಿಜ್ಯಕ್ಕೆ ಕಡಿಮೆ ಪರಿಷ್ಕರಣೆ ಮಾಡಬೇಕು. ಸಾಮಾನ್ಯ ಸಭೆಯಲ್ಲಿ ಈ ವಿಷಯವಾಗಿ ಚರ್ಚೆ ಮಾಡಿ ನಮ್ಮ ವಿರೋಧ ವ್ಯಕ್ತಪಡಿಸಲಾಗುವುದು ಎಂದು ತಿಳಿಸಿದರು.
ಕೋವಿಡ್ ದಂತಹ ಸಂಕಷ್ಟ ಸಮಯದಲ್ಲಿ ಪೊಲೀಸರು ಹೆಲ್ಮೆಟ್ ಹಾಕದವರಿಂದ ದಂಡ ವಸೂಲಿ ಮಾಡುವುದನ್ನೇ ದಂಧೆಯಂತೆ ಮಾಡುತ್ತಿದ್ದಾರೆ. ಮಾಸ್ಕ್ ಕಡ್ಡಾಯ ಮಾಡಲಿ, ಆದರೆ 2-3 ತಿಂಗಳು ಹೆಲ್ಮೆಟ್ಗೆ ವಿನಾಯತಿ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್