ಸಾರುಬಳೆ ಹಿಡಿದಾಗಿದೆ ಎದುರಾಳಿ ಯಾರಾದರೇನು?


Team Udayavani, Mar 30, 2019, 5:09 PM IST

dvg-4

ದಾವಣಗೆರೆ: ಸಂಸದ, ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ್‌ ಈಗಾಗಲೇ ಸಾರುಬಳೆ ಹಿಡಿದು ಆಖಾಡದಲ್ಲಿ ಅಡ್ಡಾಡುತ್ತಿದ್ದಾರೆ. ಎದುರಾಳಿ ಯಾರಾದರೇನು, ಸ್ಪರ್ಧೆಗೆ ಹಿಂಜರಿಕೆ ಇಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಹೇಳಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಬಂಧ ನಿರ್ಮಾಣವಾಗಿರುವ ಗೊಂದಲದ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ, ನಮ್ಮ ಪೈಲ್ವಾನ್‌ (ಜಿ.ಎಂ.ಸಿದ್ದೇಶ್ವರ್‌) ಆಖಾಡದಲ್ಲಿ ಸಾರುಬಳೆ ಹಿಡಿದಿದ್ದಾರೆ. ಎದುರಾಳಿ ಯಾರಾದರೇನು? ಅವರಂತೂ ಸ್ಪರ್ಧೆಗೆ ಅಣಿಯಾಗಿದ್ದಾರೆ. ಹಾಗಾಗಿ ನಾವು ಪ್ರತಿಸ್ಪರ್ಧಿ ಬಗ್ಗೆ ಆಲೋಚನೆಯನ್ನೆ ಮಾಡುವುದಿಲ್ಲ ಎಂದು ಕುಸ್ತಿ ಭಾಷೆಯಲ್ಲೇ ಅವರು ಪ್ರತಿಕ್ರಿಯಿಸಿದರು.

ನಾವು ದುಗ್ಗಮ್ಮನ ಜಾತ್ರೆಯಲ್ಲಿ ನಡೆಯೋ ಕುಸ್ತಿ ಪಂದ್ಯಕ್ಕೆ ತಯಾರಾಗುವ ಪೈಲ್ವಾನರಲ್ಲ. ವರ್ಷದ 365 ದಿನವೂ ತಾಲೀಮು ಮಾಡೋರು. ಹಾಗಾಗಿ ಪ್ರತಿಸ್ಪರ್ಧಿ ಬಗ್ಗೆ ಚಿಂತಿಸಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಇಲ್ಲವೇ ಜೆಡಿಎಸ್‌ ಅಭ್ಯರ್ಥಿ ಯಾರಾದರೂ ನಾವು ಸಿದ್ಧವಾಗಿದ್ದೇವೆ ಎಂದು ಮಾರ್ಮಿಕವಾಗಿ ಹೇಳಿದರು.

ನಮ್ಮ ಅಭ್ಯರ್ಥಿ ಕ್ಷೇತ್ರದಲ್ಲಿ ನಿರಂತರವಾಗಿ ಮೂರು ಬಾರಿ ಗೆದ್ದಿದ್ದಾರೆ. ಈ ಬಾರಿಯೂ ಗೆಲ್ಲುವ ವಿಶ್ವಾಸ ಇದೆ. ಒಂದು ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲಾ ಹಳ್ಳಿಗಳನ್ನು ಸುತ್ತೋದು ಕಷ್ಟ. ಅಂತಹದರಲ್ಲಿ ನಮ್ಮ ಸಂಸದರು ಲೋಕಸಭಾ ಕ್ಷೇತ್ರದಲ್ಲಿನ 1800 ಹಳ್ಳಿಗಳಲ್ಲೂ ಪ್ರವಾಸ ಮಾಡಿದ್ದಾರೆ. ಸಾರ್ವಜನಿಕರ ಕೈಗೆ ಹೇಳಿದ ಸಮಯದಲ್ಲಿ ಸಿಗುತ್ತಾರೆ. ನಾವು ಈ ಬಾರಿಯೂ ಗೆಲ್ಲುವ ವಿಶ್ವಾಸ ಹೊಂದುವಲ್ಲಿ ಅವರ ಶ್ರಮವೂ ಇದೆ ಎಂದು ಜಾಧವ್‌ ಪ್ರತಿಪಾದಿಸಿದರು.

ಈ ಹಿಂದೆ ಅನುಕಂಪ, ಆಶೀರ್ವಾದ, ಅಲೆ ಸಿದ್ದೇಶ್ವರ್‌ ಗೆಲುವಿಗೆ ಕಾರಣವಾದ ಒಂದು ಭಾಗವಷ್ಟೆ. ಆದರೆ, ಅವರು ಕ್ಷೇತ್ರದಲ್ಲಿ ಕೈಗೊಂಡ ಕೆಲಸವೂ ಜಯಕ್ಕೆ ನಾಂದಿಯಾಗಲಿದೆ. ಜನರು ಎಲ್ಲವನ್ನೂ ಗಮನಿಸಿದ್ದು, ಈ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.

ನಮ್ಮ ಪಕ್ಷದ ಅಭ್ಯರ್ಥಿ ಇಷ್ಟೇ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಹಾಗೂ ಎದುರಾಳಿ ಠೇವಣಿ ಕಳೆಯುತ್ತೇವೆ ಎಂಬುದಾಗಿ ನಾವು ಹೇಳಲ್ಲ. ಏಕೆಂದರೆ ನಾವು ಯಾವ ಮತದಾರರನ್ನು ಖರೀದಿಸಿಲ್ಲ. ಸ್ಲಮ್‌ ಜನರೂ ಸೇರಿದಂತೆ ಎಲ್ಲೆಡೆ ನರೇಂದ್ರ ಮೋದಿ ಪರ ಒಲವು ತೋರುತ್ತಿರುವುದರಿಂದ ಈ ಬಾರಿಯೂ ಗೆಲ್ಲುತ್ತೇವೆ ಎಂಬುದು ನಮ್ಮ ವಿಶ್ವಾಸ ಎಂದು ತಿಳಿಸಿದರು.

ಏಪ್ರಿಲ್‌ 4ರಂದು ಜಿ.ಎಂ.ಸಿದ್ದೇಶ್ವರ್‌ ನಾಮಪತ್ರ ಸಲ್ಲಿಸಲಿದ್ದು, ಅಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರಿಗೂ ಆಗಮಿಸುವಂತೆ ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಎಚ್‌. ಎನ್‌.ಶಿವಕುಮಾರ್‌, ಎನ್‌.ರಾಜಶೇಖರ್‌, ಖಜಾಂಚಿ ಹೇಮಂತಕುಮಾರ್‌, ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಘಟಕದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಜಗದೀಶ್‌ ಗೌಳಿ, ಅಭಿಲಾಷ್‌, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.