ಹಣಕ್ಕಾಗಿ ಪತಿಯನ್ನೇ ಅಪಹರಿಸಿದ್ದ ಪತ್ನಿ!
Team Udayavani, Nov 30, 2019, 9:49 PM IST
ಸಾಂದರ್ಭಿಕ ಚಿತ್ರ.
ದಾವಣಗೆರೆ:ಆರು ಮಂದಿ ಯುವಕರ ಜತೆ ಸೇರಿ ಹಣಕ್ಕಾಗಿ ಗಂಡನನ್ನೇ ಅಪಹರಿಸಿದ್ದ ಪತ್ನಿ ಈಗ ಹದಡಿ ಪೊಲೀಸರ ಅತಿಥಿಯಾಗಿದ್ದಾಳೆ.
ಶ್ರೀನಿವಾಸ್ ಕಿಡ್ನಾಪ್ ಆಗಿದ್ದ ಪತಿ. ದಾವಣಗೆರೆ ತಾಲೂಕು ಲೋಕಿಕೆರೆ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪತ್ನಿ ಸಂಗೀತ ಹಾಗೂ ಇಬ್ಬರು ಯುವಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎರಡು ವರ್ಷಗಳಿಂದ ಪತಿಯಿಂದ ದೂರ ಇದ್ದ ಪತ್ನಿ ಸಂಗೀತಾ, ಹಣದ ಆಸೆಗೆ ಗಂಡನನ್ನು ಯುವಕರ ಜೊತೆ ಸೇರಿ ಕಿಡ್ನಾಪ್ ಮಾಡಿದ್ದಳು. ಸಂಗೀತಾಳ ನಡವಳಿಕೆ ಸರಿ ಇಲ್ಲ ಎಂಬ ಹಿನ್ನೆಲೆಯಲ್ಲಿ ಶ್ರೀನಿವಾಸ್ ಆಕೆಯಿಂದ ದೂರವಿದ್ದು, ಜಮೀನು ಹಾಗೂ ಪೆಟ್ರೋಲ್ ಬಂಕ್ ನೋಡಿಕೊಂಡಿದ್ದ. ಈಗ ಹಣದ ಅವಶ್ಯಕತೆ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಸಂಗೀತಾ ಹಾಗೂ 6 ಜನ ಸೇರಿ ಶ್ರೀನಿವಾಸ ಅವರನ್ನು ಕಿಡ್ನಾಪ್ ಮಾಡಿದ್ದರು.
ಪ್ರತಿನಿತ್ಯದಂತೆ ಶ್ರೀನಿವಾಸ್ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ತೆರಳುವಾಗ ಆತನನ್ನು ಕಿಡ್ನಾಪ್ ಮಾಡಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ಹದಡಿ ಪೊಲೀಸರು, ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಗೀತ ಹಾಗೂ ಇಬ್ಬರನ್ನು ಬಂಧಿ ಸಿದ್ದು, ಉಳಿದ ನಾಲ್ವರು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ