ಕರ್ನಾಟಕವನ್ನು 5 ವರ್ಷದಲ್ಲಿ ಕಲ್ಯಾಣ ರಾಜ್ಯವಾಗಿಸುವೆ

ರಾಜ್ಯದ ಜನತೆಗೆ ಸೌಲಭ್ಯ ಕಲ್ಪಿಸಲು ಪಂಚರತ್ನ ಯೋಜನೆ ಸಿದ್ಧ: ಎಚ್ಡಿಕೆ

Team Udayavani, May 8, 2022, 3:57 PM IST

jds

ಹರಿಹರ: ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಸಂಪೂರ್ಣ ಬಹುಮತದ ಅಧಿಕಾರ ನೀಡಿದರೆ ಐದು ವರ್ಷಗಳಲ್ಲಿ ಕರ್ನಾಟಕವನ್ನು ಕಲ್ಯಾಣ ರಾಜ್ಯವನ್ನಾಗಿ ಮಾಡುತ್ತೇನೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಾಗ್ಧಾನ ಮಾಡಿದರು.

ಜನತಾ ಜಲಧಾರೆ ರಥಯಾತ್ರೆ ನಿಮಿತ್ತ ಶನಿವಾರ ನಗರದಲ್ಲಿ ನಡೆದ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಉಚಿತ ಶಿಕ್ಷಣ, ಆರೋಗ್ಯ, ರೈತರ ಉನ್ನತಿ, ಯುವಜನತೆಗೆ ಸ್ವ ಉದ್ಯೋಗ, ಪ್ರತಿ ಕುಟುಂಬಕ್ಕೂ ಸ್ವಂತ ಸೂರು ಒದಗಿಸುವ ಪಂಚರತ್ನ ಯೋಜನೆ ಸಿದ್ಧಪಡಿಸಲಾಗಿದೆ ಎಂದರು.

ಯುಕೆಜಿಯಿಂದ ಪಿಯುಸಿವರೆಗೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೆ ಉಚಿತ ಶಿಕ್ಷಣ, ಪ್ರತಿ ಗ್ರಾಪಂನಲ್ಲಿ 24 ಗಂಟೆ ಸೇವೆ ನೀಡುವ 30 ಬೆಡ್‌ಗಳ ಆಸ್ಪತ್ರೆ, ರೈತರ ಸಮಗ್ರ ಅಭಿವೃದ್ಧಿ, ಯುವಜನತೆ ಸ್ವಯಂ ಉದ್ಯೋಗ ಆರಂಭಿಸಿ ಇತರರಿಗೆ ಉದ್ಯೋಗ ನೀಡಲು ಶೇ. 90 ಸಹಾಯಧನದ ಸಾಲ ಸೌಕರ್ಯ ಯೋಜನೆ, ಪ್ರತಿಯೊಂದು ಬಡ ಕುಟುಂಬವೂ ಉಚಿತವಾಗಿ ಸ್ವಂತ ಮನೆ ಹೊಂದುವ ಯೋಜನೆ ರೂಪಿಸಲಾಗಿದೆ. ಸ್ತ್ರೀಶಕ್ತಿ ಸಂಘಗಳ 1 ಸಾವಿರ ಕೋಟಿ ಸಾಲ ಮನ್ನಾ ಸೇರಿದಂತೆ ಉದ್ದೇಶಿತ ಯೋಜನೆ ಜಾರಿಗೊಳಿಸದಿದ್ದರೆ ಮತ್ತೆಂದೂ ಮತ ಕೇಳಲು ಬರುವುದಿಲ್ಲ ಎಂದು ಹೇಳಿದರು.

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಕಾಮಗಾರಿಯಲ್ಲಿ 40 ಪರ್ಸೆಂಟ್‌ ಕಮಿಷನ್‌ ಕೊಡಬೇಕಿದೆ. ಪಿಎಸ್‌ಐಗೆ, ಅಬಕಾರಿ ಡಿಸಿಗೆ ಬಿಜೆಪಿ ಶಾಸಕರು ಬೆದರಿಸಿದ್ದಾರೆ.

ಅಧಿಕಾರಿಗಳು ಪ್ರಜೆಗಳ ಸೇವಕರೇ ಹೊರತು ಶಾಸಕರ ಗುಲಾಮರಲ್ಲ. ಈ ಸರ್ಕಾರದ ನಡವಳಿಕೆಯೇ ಸರಿಯಿಲ್ಲ ಎಂದು ಟೀಕಿಸಿದರು.

ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬಿಜೆಪಿ ಬೆಂಕಿ ಹಚ್ಚಿದರೆ, ಕಾಂಗ್ರೆಸ್‌ ಪೆಟ್ರೋಲ್‌ ಸುರಿಯುತ್ತಿದೆ. ಬಿಜೆಪಿ ಅಧಿಕಾರಕ್ಕಾಗಿ ಅಮಾಯಕ ಯುವಕರಿಗೆ ಧರ್ಮದ ಅಮಲು ಏರಿಸುತ್ತಿದೆ. ಕಳೆದ ಚುನಾವಣೆಯಲ್ಲಿ ಪಕ್ಷವನ್ನು ಬಿಜೆಪಿ “ಬಿ’ ಟೀಂ ಎಂದು ಅಪಪ್ರಚಾರ ಮಾಡಿದ್ದು ರಾಜ್ಯದಲ್ಲಿ ಪಕ್ಷದ ಹಾಗೂ ಹರಿಹರದಲ್ಲಿ ಶಿವಶಂಕರ್‌ ಸೋಲಿಗೆ ಕಾರಣವಾಯಿತು. ಹರಿಹರದಲ್ಲಿ ಎಚ್.ಎಸ್. ಶಿವಶಂಕರ್‌, ರಾಜ್ಯದಲ್ಲಿ ತಾವು ಅಧಿಕಾರಕ್ಕೆ ಬಂದರೆ ಹರಿಹರದ ಬೈರನಪಾದ, ಕರೆ ಭರ್ತಿ, ಮೆಡಿಕಲ್‌, ಎಂಜಿನಿಯರಿಂಗ್‌ ಕಾಲೇಜು ಸ್ಥಾಪನೆ ಇತ್ಯಾದಿ ಯೋಜನೆಗಳಿಗೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದರು.

ಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾತನಾಡಿ, 5 ವರ್ಷ ಜೆಡಿಎಸ್‌ಗೆ ನೀಡಿದರೆ, 25 ವರ್ಷ ಜೆಡಿಎಸ್‌ ಅಧಿಕಾರದಲ್ಲಿರುತ್ತದೆ. ದೇವೇಗೌಡರಂತೆ ಕುಮಾರಸ್ವಾಮಿಯವರನ್ನು ಸಹ ದೆಹಲಿಗೆ ಕರೆಯುತ್ತಾರೆ. ಕೆಂಪುಕೋಟೆ ಮೇಲೆ ಮತ್ತೆ ಕನ್ನಡಿಗರ ಕಹಳೆ ಮೊಳಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಹುಟ್ಟಿದ್ದು ಹರಿಹರ ಸಮೀಪದ ಐರಣಿ ಗ್ರಾಮದಲ್ಲಿ. ವೀರಪ್ಪ, ಎಚ್‌. ಶಿವಪ್ಪ ಕಾಲದಿಂದಲೂ ಹರಿಹರದಲ್ಲಿ ಪ್ರಚಾರ ಮಾಡಿದ್ದೇನೆ. ಕಳೆದ ಚುನಾವಣೆಯಂತೆ ನಿರ್ಧಾರ ತೆಗೆದುಕೊಳ್ಳಬಾರದು. ಸಾಮರಸ್ಯ ಸಾಧಿಸುವ ಪ್ರಾದೇಶಿಕ ಪಕ್ಷಕ್ಕೆ ಮತ ನೀಡಬೇಕು. ಕುಮಾರಣ್ಣ ಎಲ್ಲಾ ಜಾತಿ, ಮತ, ಪಂಥದವರನ್ನು ಒಟ್ಟುಗೂಡಿಸಿ ವಿಧಾನಸೌಧವನ್ನು ಬಸವಣ್ಣನ ಕಾಲದ ಅನುಭವ ಮಂಟಪ ಮಾಡುತ್ತಾರೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಎಚ್.ಎಸ್. ಶಿವಶಂಕರ್‌, ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಹಾಗೂ ರಾಷ್ಟ್ರೀಯ ಪಕ್ಷಗಳು ಅಸ್ತಿತ್ವ ಕಳೆದುಕೊಂಡಿವೆ. ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ದು ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಇಬ್ರಾಹಿಂ ಜೆಡಿಎಸ್‌ ಸೇರಿದ್ದು ಕುಮಾರಣ್ಣಗೆ ಆನೆ ಬಲ ತಂದಿದೆ. ಜೋಡೆತ್ತಿನಂತೆ ಇಬ್ಬರೂ ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. 2023ರ ಚುನಾವಣೆಯಲ್ಲಿ ಮಿಷನ್‌ 123 ಯಶಸ್ವಿಯಾಗುವುದಲ್ಲಿ ಅನುಮಾನವಿಲ್ಲ. ಮತ್ತೂಮ್ಮೆ ತಮ್ಮನ್ನು ಆಯ್ಕೆ ಮಾಡಿದರೆ ಬೈರನಪಾದ ಯೋಜನೆ, ಅಗಸನಕಟ್ಟೆ ಕರೆ ಅಭಿವೃದ್ಧಿ, ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದು, ಸರ್ಕಾರಿ ಮೆಡಿಕಲ್‌, ಇಂಜಿನಿಯರಿಂಗ್‌ ಕಾಲೇಜು ಸೇರಿದಂತೆ ಎಲ್ಲಾ ಯೋಜನೆಗಳನ್ನು ಜಾರಿಗೊಳಿಸುತ್ತೇನೆ ಎಂದು ತಿಳಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ. ಚಿದಾನಂದಪ್ಪ, ವಿಧಾನ ಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಮಾಜಿ ಸಚಿವ ನಬಿ ಸಾಬ್‌, ಅಮನುಲ್ಲಾ ಸಾಬ್‌, ಗಣೇಶ್‌ ದಾಸಕರಿಯಪ್ಪ, ಯೋಗೀಶ್‌, ಮನ್ಸೂರ್‌ ಅಲಿ ಖಾನ್‌, ಬೀರೇಶ್‌, ಗಂಗಾಧರಪ್ಪ, ಪಾರ್ವತಿ, ಶಿವಮೂರ್ತಿ, ಕೊಟ್ರೇಶ್‌ ಕೆ., ಸೋಮಶೇಖರ್‌, ಶೃತಿ ತ್ಯಾವಣಗಿ, ಚಂದ್ರಶೇಖರಪ್ಪ, ಬಸವಣ್ಣ ಪೂಜಾರ್‌, ಪರಮೇಶ್ವರಪ್ಪ, ಎಂ. ಮುರುಗೇಶಪ್ಪ, ಹೇಮಾವತಿ, ಲಕ್ಷ್ಮೀ ಆಚಾರ್‌, ವಾಮನಮೂರ್ತಿ, ಹಾಲಸ್ವಾಮಿ, ಮುರುಗೇಶಪ್ಪ ಗೌಡ, ರುದ್ರೇಶ್‌, ಅಬ್ದುಲ್‌ ರೆಹಮಾನ್‌ ಖಾನ್‌, ದಿನೇಶ್‌ ಬಾಬು, ದೇವರಾಜ್‌, ಬಂಡೇರ್‌ ತಿಮ್ಮಣ್ಣ, ಸುರೇಶ್‌, ಎಂ. ಚಂದ್ರಯ್ಯ, ಬಸವರಾಜಪ್ಪ ಜೆ. ಎಂ.ಜಿ. ತಿಮ್ಮಣ್ಣ, ಸಂಜೀವಪ್ಪ, ಚೆನ್ನಯ್ಯ, ಮಹಾಂತೇಶ್‌, ಟಿ.ಆರ್. ರಂಗಪ್ಪ, ವಿಜಯಕುಮಾರ್‌, ಡಿ. ಯಶೋಧರ ಇತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.