Chitradurga ಕ್ಷೇತ್ರದಿಂದ ಸಹೋದರನ ನಾಮಪತ್ರ ವಾಪಸ್ ತೆಗೆಸುತ್ತೇನೆ: ರೇಣುಕಾಚಾರ್ಯ
ನಿತ್ಯ ಮದುವೆ, ಶವ ಸಂಸ್ಕಾರ... ಹೀಗೆ ಎಲ್ಲೆಡೆ ಪ್ರಚಾರ ಮಾಡುತ್ತಿದ್ದೇನೆ..
Team Udayavani, Apr 6, 2024, 7:07 PM IST
ದಾವಣಗೆರೆ: ಚಿತ್ರದುರ್ಗ ಎಸ್ ಸಿ ಮೀಸಲು ಲೋಕಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಸಹೋದರ ಎಂ.ಪಿ. ದಾರಕೇಶ್ವರಯ್ಯ ಆವರಿಂದ ನಾಮಪತ್ರ ವಾಪಸ್ ತೆಗೆಸಲಾಗುವುದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ’ಈ ವಿಚಾರವಾಗಿ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಸಹೋದರ ನಾಮಪತ್ರ ಸಲ್ಲಿಸಿರುವುದನ್ನು ಕ್ಲಿಯರ್ ಮಾಡಿಸುತ್ತೇನೆ. ಸಾಮಾಜಿಕವಾಗಿ ಅವರಿಗೆ ನ್ಯಾಯ ಕೊಡಿಸಬೇಕು. ವಾಪಸ್ ಪಡೆಯಲು ಸಹೋದರನಿಗೆ ಹೇಳುತ್ತೇನೆ. ನಮಗೆ ಸಮಾಜದಲ್ಲಿ ನಮ್ಮದೇ ಆದ ಗೌರವವಿದೆ. ಅದನ್ನು ನಾವು ಉಳಿಸಿಕೊಂಡು ಹೋಗಬೇಕೇ ವಿನಃ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ನಮಗೆ ಎಸ್ ಸಿ ಸರ್ಟಿಫಿಕೇಟ್ ಬೇಡ. ಅದರಿಂದ ರಾಜಕಾರಣ ಮಾಡುವ ಅವಶ್ಯಕತೆಯೂ ನಮಗಿಲ್ಲ. ಹಿಂದೆ ನನ್ನ ಮಗಳ ಮೇಲೆಯೂ ಆರೋಪ ಬಂದಿತ್ತು’ ಎಂದರು.
ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರ ಹೆಸರು ಹೇಳುತ್ತಿಲ್ಲ. ಅಭ್ಯರ್ಥಿಯೊಂದಿಗೆ ಪ್ರಚಾರ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ,”ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ನಮ್ಮಲ್ಲಿ ಯಾವುದೇ ಕಲ್ಮಷವೂ ಇಲ್ಲ. ಕ್ಷೇತ್ರದಲ್ಲಿ ನಿತ್ಯ ಶವ ಸಂಸ್ಕಾರ, ಮದುವೆ ಹೀಗೆ ಎಲ್ಲೆಡೆ ಪ್ರಚಾರ ಮಾಡುತ್ತಿದ್ದೇನೆ. ಮೋದಿ ನಾಮಬಲದಿಂದ ಗೆದ್ದು ಅವರ ಕೈಬಲ ಪಡಿಸಬೇಕಾಗಿರುವುದರಿಂದ ಮೋದಿ ಹೆಸರು ಹೇಳುತ್ತಿದ್ದೇನೆ. ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಹೆಸರು ಹೇಳಲು ನಮಗೆ ಯಾವ ಹಿಂಜರಿಕೆಯೂ ಇಲ್ಲ.ಅಭ್ಯರ್ಥಿಯೊಂದಿಗೆ ಪ್ರಚಾರಕ್ಕೆ ಶೀಘ್ರ ದಿನಾಂಕ ನಿಗದಿ ಮಾಡುತ್ತೇವೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ