ವ್ಯಾಪಾರೋದ್ಯಮಕ್ಕೆ ಹಣಕ್ಕಿಂತ ಬುದ್ಧಿ ಮುಖ್ಯ: ರವಿರಾಜ್‌


Team Udayavani, May 27, 2018, 12:12 PM IST

dvg-3.jpg

ದಾವಣಗೆರೆ: ವ್ಯಾಪಾರ, ಉದ್ಯಮಗಳಲ್ಲಿ ಮೇಲೆ ಬರಲು ಹಣಕ್ಕಿಂತ ಬುದ್ಧಿ ಮುಖ್ಯ ಎಂದು ಮಹಾರಾಜ ಸೋಪ್‌ ಇಂಡಸ್ಟೀಸ್‌ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಡಾ| ರವಿರಾಜ್‌ ಅಭಿಪ್ರಾಯಪಟ್ಟಿದ್ದಾರೆ. 

ಶನಿವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ತಮ್ಮ ಕಂಪನಿಯಿಂದ ಕೊಡುಗೆ ನೀಡಿದ 4 ಲಕ್ಷ ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ವ್ಯಾಪಾರ ಮಾಡಲು ಒಂದು ವೇಳೆ ಹಣ ಇಲ್ಲದಿದ್ದರೆ ನಡೆಯುತ್ತದೆ. ಆದರೆ, ಬುದ್ಧಿ ಇಲ್ಲದೆ ಯಾವುದೇ ವ್ಯವಹಾರ ಮಾಡಲಾಗುವುದಿಲ್ಲ. ವ್ಯಾಪಾರಿಗೆ ಬುದ್ಧಿ ಇದ್ದದ್ದೇ ಆದಲ್ಲಿ ಹಣ ತಾನಾಗಿಯೇ ಬರುತ್ತದೆ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಖಾಸಗಿ ಕಾಲೇಜಿನವರಿಗೆ ಸರಿಸಾಟಿಯಾಗಿ ಹೆಸರು ಮಾಡಿದೆ. ಕಾಲೇಜಿನ ಪ್ರಾಂಶುಪಾಲ ಡಾ| ಮಲ್ಲಿಕಾರ್ಜುನ ಕಲಮರಹಳ್ಳಿ ತಿಂಗಳಲ್ಲೇ ನಿವೃತ್ತಿ ಹೊಂದುತ್ತಿದ್ದರೂ ಲವಲವಿಕೆಯಿಂದ ಕೆಲಸ ಮಾಡುತ್ತಿರುವುದು ಅಚ್ಚರಿ ಅನ್ನಿಸುತ್ತದೆ. ಈ ಶುದ್ಧ ಕುಡಿಯುವ ನೀರಿನ ಘಟಕ ಅವರ ಸೇವಾ ಕೊನೆ ದಿನಗಳ ನೆನಪಾಗಿ ಉಳಿಯಲಿದೆ ಎಂದು ಅವರು ಹೇಳಿದರು.

ಕಷ್ಟ ಪಟ್ಟರೆ ಫಲ ಉಂಟು ಎಂಬುದು ವಿದ್ಯಾರ್ಥಿಗಳಿಗೆ ಅರ್ಥ ಆಗಬೇಕು. ನೀವು ಯಾವುದೇ ಕೆಲಸ ಮಾಡುವ ಮುನ್ನ
ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ. ಶಿಕ್ಷಕರು, ಪೋಷಕರು ಸದಾ ಕಾಲ ಮಾರ್ಗದರ್ಶಕಾಗಿ ನಿಮಗೆ ಇರುತ್ತಾರೆ ಎಂಬುದನ್ನು ಮರೆಯಬೇಡಿ. ನಮ್ಮ ಬುದ್ಧಿಶಕ್ತಿ ಜೊತೆಗೆ ಹಿರಿಯ ಅನುಭವ ಸಹ ಯಶಸ್ಸಿಗೆ ಸಹಕಾರಿಯಾಗಲಿದೆ. ಶಿಕ್ಷಕರು, ಪೋಷಕರು ಏನೇ ಹೇಳಿದರೂ ಅದನ್ನು ಪಾಲಿಸುವ ಪರಿಪಾಠ ಬೆಳೆಸಿಕೊಳ್ಳಿ. ನಿಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುವ ಕೆಲಸಕ್ಕೆ ಎಂದಿಗೂ ಕೈ ಹಾಕದಿರಿ ಎಂದು ಅವರು ಕಿವಿಮಾತು ಹೇಳಿದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ| ಕೆ.ಎಂ. ಮಲ್ಲಿಕಾರ್ಜುನ, ಕಾಲೇಜಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿತ್ತು. ವಿದ್ಯಾರ್ಥಿಗಳು ನೀರಿಗಾಗಿ ಪರದಾಡುವಂತಾಗಿತ್ತು. ಇದೀಗ ರವಿರಾಜ್‌ ಈ ಕೊರತೆ ನೀಗಿಸಿದ್ದಾರೆ. 4 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಒದಗಿಸುವ ಮೂಲಕ 4 ಸಾವಿರ ವಿದ್ಯಾರ್ಥಿಗಳ ನೀರಿನ ದಾಹ ತೀರಿಸಿದ್ದಾರೆ ಎಂದರು.
 
ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಎಸ್‌. ಆರ್‌. ಭಜಂತ್ರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಪ್ರಸಾದ್‌, ನಾಗರಾಜ, ಐಕ್ಯುಎಸಿ ಸಂಚಾಲಕ ಡಾ| ಆರ್‌. ತಿಪಾರೆಡ್ಡಿ, ವ್ಯವಸ್ಥಾಪಕ ವಿಭಾಗದ ಮರುಳಸಿದ್ಧಪ್ಪ, ಎನ್‌.ಆರ್‌. ರಾಜಮೋಹನ್‌ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.