ನೀರಿಲ್ಲದೆ ಮೀನುಗಳ ಮಾರಣಹೋಮ


Team Udayavani, Feb 13, 2017, 1:15 PM IST

dvg4.jpg

ಹರಪನಹಳ್ಳಿ: ಅಂತರ್ಜಲ ಕುಸಿತದಿಂದ ನೀರು ಇಂಗಿ ಹೋದ ಹಿನ್ನೆಲೆಯಲ್ಲಿ ತಾಲೂಕಿನ ಅಲಮರಸೀಕೆರೆ ಗ್ರಾಮದ ಕೆರೆಯಲ್ಲಿ ಲಕ್ಷಾಂತರ ಮೀನುಗಳು ಸತ್ತಿದ್ದು, ಇದರಿಂದ ಹೊರಸೂಸುವ ದುರ್ವಾಸನೆಯಿಂದ ಸಾಂಕ್ರಾಮಿಕ ರೋಗದ ಭೀತಿ ಜನರನ್ನು ಕಾಡುತ್ತಿದೆ. ಕಳೆದ ಒಂದು ವಾರದಿಂದ ಅಲಮರಸೀಕೆರೆ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಮೀನು ಸಾಯುತ್ತಿವೆ.

ಇದರಿಂದ ಗ್ರಾಮದ ಜನರು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದರೆ ಅಂಗನವಾಡಿ ಮಕ್ಕಳಿಗೆ ಪಾಠ ಹೇಳಿಕೊಡವುದು ಕೂಡ ಕಷ್ಟವಾಗಿದೆ. ತಾಲೂಕಿನಲ್ಲಿಯೇ ಅತಿ ಹೆಚ್ಚು ದೊಡ್ಡದಾದ ಕೆರೆಗಳಲ್ಲಿ ಅಲಮರಸೀಕೆರೆಯೂ ಒಂದಾಗಿದೆ. ಸುಮಾರು 300 ಎಕರೆ ವಿಸ್ತೀರ್ಣ ಹೊಂದಿದ್ದು, ಕಳೆದ ಎರಡು ವರ್ಷಗಳಿಂದ ಸತತವಾಗಿ ವರುಣ ಕೈಕೊಟ್ಟ ಪರಿಣಾಮ ಬರ ಅವರಿಸಿದೆ.

ಇದರಿಂದ ತಾಲೂಕಿನ ಬಹುತೇಕ ಎಲ್ಲ ಕೆರೆಗಳು ಒಣಗಿ ಹೋಗಿವೆ. ಆದರೆ, ಅಲಮರಸೀಕೆರೆ ದೊಡ್ಡದಿರುವುದರಿಂದ ಅಲ್ಪ-ಸ್ವಲ್ಪ ಮಾತ್ರ ನೀರು ಉಳಿದುಕೊಂಡಿದೆ. ಬೇಸಿಗೆ ಬಿಸಿಲಿನ ಪ್ರಖರತೆ  ಹೆಚ್ಚಾಗಿರುವುದರಿಂದ ಉಳಿದ ಅಲ್ಪ ನೀರು ಕೂಡ ಬತ್ತಿ ಹೋಗುತ್ತುದೆ. ಹೀಗಾಗಿಯೇ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ಸಾವನ್ನುಪ್ಪುತ್ತಿವೆ. 

ಅಲ್ಪ ಪ್ರಮಾಣದ ನೀರು ಕೂಡ ಹಚ್ಚ ಹಸಿರಿನಿಂದ ಕೂಡಿದ್ದು, ದುರ್ವಾಸನೆ ಬೀರುತ್ತಿರುವ ಪರಿಣಾಮ ಗ್ರಾಮದವರು ಕೆರೆಯ ತೂಬನ್ನು ಎತ್ತಿ ನೀರನ್ನು ಹರಿಯಲು ಬಿಟ್ಟಿದ್ದಾರೆ. ಇದರಿಂದ ಕೆರೆ ಖಾಲಿಯಾಗುತ್ತಲಿದೆ. ಆದ್ದರಿಂದ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ನೀರಿನಲ್ಲಿ  ಹಾಗೂ ದಡದಲ್ಲಿ ಉದ್ದಕ್ಕೂ ಸತ್ತು ಬಿದ್ದಿವೆ. 

ಇನ್ನೂ ಕೆಲವು ಮೀನುಗಳು ಸ್ವಲ್ಪ ನೀರಿನಲ್ಲಿ ಒದ್ದಾಡುತ್ತಿರುವುದು ಕಂಡು ಬಂತು. ಮೀನುಗಳು  ಸತ್ತಿರುವುದರಿಂದ ದುರ್ವಾಸನೆ ಪ್ರಾರಂಭವಾಗಿ ಗ್ರಾಮಸ್ಥರು ಗ್ರಾಮದಲ್ಲಿ ವಾಸ ಮಾಡುವುದೇ ದುಸ್ತರವಾಗಿದೆ. ಕಳೆದ ಒಂದು ವಾರದಿಂದ ಮೀನುಗಳು ಸಾಯುತ್ತಲಿದ್ದು, ದುರ್ವಾಸನೆ ಆರಂಭವಾಗಿದೆ. 

ಶಾಲೆಯಲ್ಲಿ ಹಾಗೂ ಅಂಗನವಾಡಿಯಲ್ಲಿ ಮಕ್ಕಳು ಕುಳಿತು ಪಾಠ ಕೇಳುವುದು ಕಷ್ಟವಾಗಿದ್ದು, ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ದಡಾರ, ಕಾಲರಾ ಪ್ರಾರಂಭವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಗ್ರಾಮದ ರಾಜು, ನಾಗರಾಜ್‌, ವೈ. ಮಂಜುನಾಥ, ಟಿ. ಗೋಣೆಪ್ಪ ಮತ್ತಿತರರು ಒತ್ತಾಯಿಸಿದ್ದಾರೆ.  

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.