ರಿಂಗ್‌ ರಸ್ತೆಯಲ್ಲಿರಾಂಗ್‌ ರೂಟ್‌!


Team Udayavani, Feb 14, 2019, 6:22 AM IST

dvg-4.jpg

ದಾವಣಗೆರೆ: ಜನಪ್ರತಿನಿಧಿಗಳು, ಅಧಿಕಾರಿಗಳ ರಾಂಗ್‌… ತೀರ್ಮಾನದ ಫಲವಾಗಿ ರಾಮಕೃಷ್ಣ ಹೆಗಡೆ, ಚಂದ್ರೋದಯ ನಗರ ರಿಂಗ್‌ ರಸ್ತೆಯಲ್ಲಿನ ನಿವಾಸಿಗಳ ಮೂರೂವರೆ ದಶಕಗಳ ಸಂಕಷ್ಟ, ನೋವು, ದುಗುಡ, ಅನುಮಾನ, ಆತಂಕ… ಈ ಕ್ಷಣಕ್ಕೂ ದೂರವಾಗಿಲ್ಲ!.

ಕಳೆದ 35 ವರ್ಷದಿಂದ ರಿಂಗ್‌ ರಸ್ತೆಯ 450 ಕ್ಕೂ ಹೆಚ್ಚು ಕುಟುಂಬಗಳು ಶಾಶ್ವತ ಪರಿಹಾರ ಕೋರಿ ಜನಪ್ರತಿನಿಧಿಗಳು, ಅಧಿಕಾರಿಗಳ ಮೊರೆ ಹೋಗುತ್ತಲೇ ಇದ್ದಾರೆ. ಮಾಡೋಣ…, ನೋಡೋಣ…, ಅನುಕೂಲ ಮಾಡಿಕೊಡುತ್ತೇವೆ… ಎಂಬ ಪುಂಖಾನುಪುಂಖ ಭರವಸೆಯ ಮಾತುಗಳಿಗೆ ಕೊರತೆ ಇಲ್ಲ. ಆದರೆ ಈ ಕ್ಷಣಕ್ಕೂ ಶಾಶ್ವತ ಪರಿಹಾರ ಮಾತ್ರ ಸಿಕ್ಕಿಲ್ಲ.

ಒಂದು ಕಡೆ ರಿಂಗ್‌ ರಸ್ತೆಯ ಅಭಿವೃದ್ಧಿ ನಿಧಾನವಾಗಿಯಾದರೂ ನಡೆಯುತ್ತಿದ್ದರೆ ಮತ್ತೂಂದೆಡೆ ರಸ್ತೆಯಲ್ಲಿನ ನಿವಾಸಿಗಳಿಗೆ ಆತಂಕ ಹೆಚ್ಚಾಗುತ್ತಾ ಹೋಗುತ್ತದೆ. ಏಕೆಂದರೆ ಯಾವ ಕ್ಷಣಕ್ಕೆ ಯಾರು ಬಂದು ಖಾಲಿ ಮಾಡಿ… ಎಂದು ಹೇಳುತ್ತಾರೋ ಎಂಬ ದುಗುಡದಲ್ಲೇ ಕಾಲ ಕಳೆಯುತ್ತಿದ್ದಾರೆ. ಯಾವ ಕ್ಷಣದಲ್ಲಿ ಏನಾಗುತ್ತದೆಯೋ ಎಂಬ ಭಯದ ತೂಗುಗತ್ತಿ ಇಲ್ಲಿನ ಬಡ ವರ್ಗದವರ ಮೇಲೆ ಸದಾ ತೂಗುತ್ತಲೇ ಇದೆ.
 
1983ರಲ್ಲಿ ರಾಮಕೃಷ್ಣ ಹೆಗಡೆ, ಚಂದ್ರೋದಯ ನಗರ ನಿರ್ಮಾಣಗೊಂಡವು. ಆಗ ದಾವಣಗೆರೆ ಇಷ್ಟೊಂದು ಬೆಳೆದಿರಲಿಲ್ಲ, ರಿಂಗ್‌ ರಸ್ತೆ ನಿರ್ಮಾಣವಾಗಲಿದೆ ಎಂಬ ಪರಿಕಲ್ಪನೆಯೂ ಯಾರಿಗೂ ಇರಲಿಲ್ಲ. ಪ್ರಾರಂಭದಲ್ಲಿ 200-250 ಕುಟುಂಬಗಳು ಅಲ್ಲಲ್ಲಿ ಗುಡಿಸಲು, ಸಣ್ಣದಾಗಿ ಮನೆ ಕಟ್ಟಿಸಿಕೊಂಡು ಜೀವನ ನಡೆಸುತ್ತಿದ್ದವು.

ದಾವಣಗೆರೆ ಬೆಳೆದಂತೆ ಬೇಡಿಕೆಯೂ ಹೆಚ್ಚಾದವು. ಅದರಲ್ಲಿ ರಿಂಗ್‌ ರಸ್ತೆಯೂ ಒಂದು. ರಿಂಗ್‌ ರಸ್ತೆಯ ಸಮೀಕ್ಷೆ ಕಾರ್ಯ ಪ್ರಾರಂಭವೂ ಆಯಿತು. ಶಾಮನೂರು ರಸ್ತೆ, ದೇವರಾಜ ಅರಸು ಬಡಾವಣೆಯ ದೂಡಾ ಕಚೇರಿ ಮುಂದೆ, ಈಗಿನ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಪಕ್ಕ.. ಹೀಗೆ ಸಾಗಿದ ರಿಂಗ್‌ ರಸ್ತೆ ಬಂದು ನಿಂತಿದ್ದು ರಾಮಕೃಷ್ಣ ಹೆಗಡೆ, ಚಂದ್ರೋದಯ ನಗರಕ್ಕೆ. 

ಅಲ್ಲಾಗಲೇ 200-250 ಕುಟುಂಬಗಳು ವಾಸ ಮಾಡುತ್ತಿದ್ದ ಕಾರಣಕ್ಕೆ ಮುಂದೆ ನೋಡಿದರಾಯಿತು… ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಸುಮ್ಮನಾಗಿದ್ದರು. ಅಂದೇ ಜನರ ಕೂಗಿಗೆ ಆಡಳಿತ ಕೊಂಚ ಸ್ಪಂದಿಸಿದ್ದರೆ ಇಂತಹ ಪರಿಸ್ಥಿತಿ ಉದ್ಭವಿಸುತ್ತಲೇ ಇರಲಿಲ್ಲ. 35 ವರ್ಷಗಳ ಕಾಲ ಜನ ಸಹ ಹೈರಾಣಾಗುತ್ತಿರಲಿಲ್ಲ. 

“30-35 ವರ್ಷದಿಂದ ಜೀವ ಮಾಡ್ಕೊಂಡು ಬಂದೀವಿ. ಅದೇನೋ ರಿಂಗ್‌ ರಸ್ತೆ ಮಾಡ್ತೀವಿ. ನೀವು ಮನೆ ಬಿಡಬೇಕು. ಬೇರೆ ಕಡೆ ಹೋಗ್ಬೇಕು ಅಂತಾ ಹೇಳ್ತಾರೆ. ಒಂದೇ ಪಟ್ಟಿಗೆ ಎಲ್ಲನೂ ಬಿಟ್ಟು ಹೋಗಬೇಕು ಅಂದ್ರೆ ಹೆಂಗೆ. ಮಕ್ಳು-ಮರಿ ಕಟ್ಕೊಂಡು ಎಲ್ಲೋ ಹೋಗಿ ಜೀವಾ° ಮಾಡೋಕೆ ಆಗ್ತಾತಾ. ನಮ್ಮಂತೋರಿಗೆ ಎಲ್ಲಾದ್ರೂ ಜಾಗ ಮಾಡಿ, ಮನೆ ಕಟ್ಟಿಕೊಟ್ರೆ ಹೋಗ್ತಿವಿ. ಅದನ್ನ ಮಾಡೊಲ್ಲ. ಹೋಗ್ರಿ, ಹೋಗ್ರಿ ಅಂದ್ರೆ ಎಲ್ಲಿಗೆ ಹೋಗ್ಬೇಕು’… ಎಂದು ರಿಂಗ್‌ ರಸ್ತೆಯ ಬಶೀರ್‌ ಬಾಷಾ, ಮಹಬೂಬ್‌, ಅಬ್ದುಲ್ಲಾ… ಇತರರು ಪ್ರಶ್ನಿಸುತ್ತಾರೆ.

ರಾಮಕೃಷ್ಣ ಹೆಗಡೆ, ಚಂದ್ರೋದಯ ನಗರ ರಿಂಗ್‌ ರಸ್ತೆಯಲ್ಲಿನ ನಿರಾಶ್ರಿತರಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಅಹೋರಾತ್ರಿ ಧರಣಿ, ಹೋರಾಟ ಮಾಡಲಾಗಿದೆ. ಆಶ್ರಯ ಸಮಿತಿ ಸ್ವಾಧೀನದಲ್ಲಿರುವ ಸರ್ವೇ ನಂಬರ್‌ 144/2 ರಲ್ಲಿನ
ಜಮೀನಿನಲ್ಲಾಗಲಿ ಅಥವಾ ನಗರ ವ್ಯಾಪ್ತಿಯ ಬೇರೆ ಕಡೆ ಜಮೀನು ಗುರುತಿಸಿ, ಇಲ್ಲಿನ ಜನರನ್ನು ಸ್ಥಳಾಂತರಿಸಿ, ಶಾಶ್ವತ ಪರಿಹಾರ ಒದಗಿಸಬೇಕು ಎಂದು ಹೋರಾಟ ನಡೆಸಲಾಗುತ್ತಿದೆ ಎನ್ನುತ್ತಾರೆ ನಾಗರಿಕ ಮೂಲ ಸೌಕರ್ಯ ಹೋರಾಟ ವೇದಿಕೆ ಅಧ್ಯಕ್ಷ ಜೆ. ಅಮಾನುಲ್ಲಾಖಾನ್‌.
 
ವೇದಿಕೆಯಿಂದ ಹೋರಾಟ ತೀವ್ರಗೊಳಿಸಿದ್ದರ ಪರಿಣಾಮ ಎಸ್‌ಟಿಪಿ ಪಕ್ಕದ ಕ್ರೀಡಾಂಗಣದ ಸಮೀಪ 1 ಕೋಟಿ ವೆಚ್ಚದಲ್ಲಿ ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅರ್ಧದಷ್ಟು ಶೆಡ್‌ಗಳ ತಗಡು ಹಾರಿ ಹೋಗಿವೆ. ಕೆಲವಾರು ಯಾವಾಗ ಬೇಕಾದರೂ ಬೀಳುವಂತಹ ಸ್ಥಿತಿಯಲ್ಲಿವೆ. ಮುಖ್ಯವಾಗಿ ಅಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳೇ ಇಲ್ಲದ ಕಾರಣಕ್ಕೆ ಯಾರೂ ಸಹ ಅಲ್ಲಿಗೆ ಹೋಗುತ್ತಿಲ್ಲ. ಇಲ್ಲಿನ ಜನರು ಪ್ರತಿನಿತ್ಯ ಅನುಭವಿಸುವ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಒದಗಿಸುವುದೊಂದೇ ಸೂಕ್ತ ಪರಿಹಾರ ಎನ್ನುತ್ತಾರೆ ಅಮಾನುಲ್ಲಾ

ಅಶೋಕ ನಗರದ ಸರ್ವೇ ನಂಬರ್‌ 144/2ಎ ರಲ್ಲಿ 5.36 ಎಕರೆ, ಬಾತಿ ಬಳಿ 41 ಎಕರೆ ಜಾಗದಲ್ಲಿ ಮನೆ ಕಟ್ಟಿಸಿಕೊಡುವ ಪ್ರಸ್ತಾವನೆಯೂ ಇದೆ. ಫಲಾನುಭವಿಗಳನ್ನು ಗುರುತಿಸುವ ಕಾರ್ಯವೂ ನಡೆದಿದೆ. ಪ್ರಸ್ತಾವನೆಯಂತೆ ಮನೆಗಳು ನಿರ್ಮಾಣಗೊಂಡು ರಾಮಕೃಷ್ಣ ಹೆಗಡೆ, ಚಂದ್ರೋದಯ ನಗರ ರಿಂಗ್‌ ರಸ್ತೆಯಲ್ಲಿನ ನಿರಾಶ್ರಿತರು ಶಾಶ್ವತ ಪರಿಹಾರ ಕಂಡುಕೊಳ್ಳಲಿಕ್ಕೆ ಕನಿಷ್ಠ 1-2 ವರ್ಷವಾದರೂ ಬೇಕು. ಅಲ್ಲಿಯವರೆಗೆ ದಿನ ನಿತ್ಯ ಆತಂಕದಲ್ಲೇ ಕಾಲ ದೂಡಬೇಕಾಗಿದೆ.

 ರಾ. ರವಿಬಾಬು

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.