ಯಶ್‌ ಹವಾಕ್ಕೆ ಅಭಿಮಾನಿಗಳು ಖುಷ್‌


Team Udayavani, Dec 22, 2018, 4:17 PM IST

dvg-1.jpg

ದಾವಣಗೆರೆ: ಕನ್ನಡಿಗರ ಬಹುನಿರೀಕ್ಷೆಯ ನಟ ಯಶ್‌ ಅಭಿನಯದ ಕೆ.ಜಿ.ಎಫ್‌ ಚಿತ್ರ ಶುಕ್ರವಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಪ್ರದರ್ಶನಗೊಂಡ ಹಿನ್ನೆಲೆಯಲ್ಲಿ ನಗರದ ಗೀತಾಂಜಲಿ, ವಸಂತ ಚಿತ್ರಮಂದಿರಗಳಲ್ಲೂ ಅಭಿಮಾನಿಗಳು ಯಶ್‌ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಭಾವಚಿತ್ರದ ಫ್ಲೆಕ್ಸ್‌ಗೆ ಹಾಲಿನ ಅಭಿಷೇಕ ನೆರವೇರಿಸಿ ಸಂಭ್ರಮಿಸಿದರು.

ಗೀತಾಂಜಲಿ ಚಿತ್ರಮಂದಿರದಲ್ಲಿ ನಸುಕಿನ 4.30ಕ್ಕೆ ಆರಂಭವಾದ ಚಿತ್ರದ ಪ್ರಥಮ ಶೋನಲ್ಲಿ ಯುವಕರದ್ದೇ ಹವಾ. ಆಗಲೇ ಯಶ್‌ ಅಭಿಮಾನಿ ಬಳಗದ ಯುವಕರು ಫ್ಲೆಕ್ಸ್‌ಗೆ ಮಾಲಾರ್ಪಣೆ ಮಾಡಿ ಸಂಭ್ರಮಿಸಿದರು. ನಂತರದ ಪ್ರದರ್ಶನ ವೀಕ್ಷಿಸಲು ಅಭಿಮಾನಿಗಳು, ಕಾಲೇಜು ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಚಿತ್ರಮಂದಿರದತ್ತ ಧಾವಿಸುತ್ತಿದ್ದರು. 

ಗೀತಾಂಜಲಿ ಚಿತ್ರಮಂದಿರದಲ್ಲಿ ಚಿತ್ರದ ಪ್ರಥಮ ಶೋ ಮುಗಿಯುವ ಮುನ್ನ ಬೆಳಿಗ್ಗೆಯಿಂದಲೇ ಕಾಲೇಜು ವಿದ್ಯಾರ್ಥಿಗಳು ಟಿಕೆಟ್‌ ಕೌಂಟರ್‌ ತೆರೆಯುವವರಿಗೆ ಕ್ಯೂನಲ್ಲಿ ನಿಂತು ಟಿಕೆಟ್‌ ಪಡೆದು ಚಿತ್ರ ವೀಕ್ಷಿಸಿದರು. ವಸಂತ ಚಿತ್ರಮಂದಿರದಲ್ಲಿ ಕೂಡ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಗೀತಾಂಜಲಿ ಚಿತ್ರಮಂದಿರದಲ್ಲಿ ಬೆಳಿಗ್ಗೆ 4.30 ರಿಂದ ಒಟ್ಟು 5 ಪ್ರದರ್ಶನ ನಡೆದರೆ, ವಸಂತ ಚಿತ್ರಮಂದಿರದಲ್ಲಿ ಬೆಳಿಗ್ಗೆ 10.30 ರಿಂದ ರಾತ್ರಿ 8.30 ರವರೆಗೆ ನಾಲ್ಕು ಶೋಗಳು ನಡೆದವು. ಗೀತಾಂಜಲಿ ಚಿತ್ರಮಂದಿರದಲ್ಲಿ ಬಾಲ್ಕನಿ ಟಿಕೆಟ್‌ 200, ಫಸ್ಟ್‌ ಕ್ಲಾಸ್‌ 150 ರೂಪಾಯಿ ನಿಗದಿ ಪಡಿಸಲಾಗಿತ್ತು. ವಸಂತ ಚಿತ್ರಮಂದಿರದಲ್ಲೂ ಸಹ ಬಾಲ್ಕನಿ 200, ಫಸ್ಟ್‌ ಕ್ಲಾಸ್‌ ಟಿಕೆಟ್‌ ಗೆ 150 ರೂ, ನಿಗದಿ ಪಡಿಸಲಾಗಿದೆ.

ಶುಕ್ರವಾರದ ಬಾಲ್ಕನಿ ಎಲ್ಲಾ ಶೋನ ಟಿಕೆಟ್‌ ಮುಂಗಡವಾಗಿ ಬುಕ್ಕಿಂಗ್‌ ಹಾಗೂ ಮಾರಾಟಗೊಂಡಿದ್ದವು. 300 ರೂ.ಗಳಿಗಿಂತಲೂ ಹೆಚ್ಚಿನ ದರಕ್ಕೆ ಟಿಕೆಟ್‌ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದುದು ಕಂಡುಬಂತು. ಚಿತ್ರ ವೀಕ್ಷಣೆಗೆ ಬಂದ ಅನೇಕ ಯುವಕರು, ಮಹಿಳೆಯರು, ವಿದ್ಯಾರ್ಥಿಗಳು, ಕ್ಯೂನಲ್ಲಿ ಟಿಕೆಟ್‌ ಸಿಗದಿದ್ದಾಗ ಬ್ಲಾಕ್‌ನಲ್ಲಿ ಹೆಚ್ಚು ಹಣ ನೀಡಿ ಚಿತ್ರ ವೀಕ್ಷಿಸಲು ತೆರಳಿದ್ದು ಕಂಡುಬಂತು.
ಯಶ್‌ ಅಭಿಮಾನಿಗಳು ಕೆ.ಜಿ.ಎಫ್‌ ಚಿತ್ರಕ್ಕೆ ಶುಭಕೋರಿ ಗೀತಾಂಜಲಿ ಚಿತ್ರಮಂದಿರದಲ್ಲಿ ಹಾಕಿದ್ದ ಫ್ಲೆಕ್ಸ್‌ಗಳು ತುಂಬಿ ತುಳುಕುತ್ತಿದ್ದವು. ಒಳಗಡೆ ಜಾಗ ಸಾಲದೇ ರಸ್ತೆಯಲ್ಲೂ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ವಸಂತ ಚಿತ್ರಮಂದಿರದಲ್ಲಿ ಅಭಿಮಾನಿಗಳು ಯಶ್‌ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು. ಆ ಚಿತ್ರಮಂದಿರದ ಬಳಿಯೂ ಯಶ್‌ ದೊಡ್ಡ ಕಟೌಟ್‌ಗಳು ಗೋಚರಿಸುತ್ತಿವೆ.

ಆನ್‌ಲೈನ್‌ ಟಿಕೆಟ್‌ ಹೊಂಬಾಳೆ ಫಿಲಂಸ್‌ನ ಕೆ.ಜಿ.ಎಫ್‌ ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗ ಮಾಮೂಲಿಯಾಗಿ ಕ್ಯೂನಲ್ಲಿ ನಿಂತು ಬಾಲ್ಕನಿ ಟಿಕೆಟ್‌ ಬೇಕು ಎಂದರೆ ಸಿಗುವಂತಿಲ್ಲ. ಏಕೆಂದರೆ, ಆನ್‌ಲೈನ್‌ನಲ್ಲಿ ಪೇಟಿಎಮ್‌ ಮೂಲಕ ಬಾಲ್ಕನಿ ಸೀಟ್‌ಗಳ ಬುಕ್ಕಿಂಗ್‌ ಪ್ರಕ್ರಿಯೆ ನಡೆದಿದ್ದು, ಸೋಮವಾರದವರೆಗೆ ಟಿಕೆಟ್‌ ಮಾರಾಟ ಆಗಿವೆ. ಬಾಲ್ಕನಿ ಟಿಕೆಟ್‌ ಸೋಮವಾರವರೆಗೆ ಸಿಗುವುದು ಸಂದೇಹ.
 ಮಹಾದೇವಗೌಡ, ಗೀತಾಂಜಲಿ ಚಿತ್ರಮಂದಿರದ ವ್ಯವಸ್ಥಾಪಕ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.