ಯತ್ನಾಳ್ ಹೇಳಿಕೆಗೆ ವಿಶೇಷ ಅರ್ಥ ಬೇಡ
Team Udayavani, May 8, 2022, 4:23 PM IST
ಹೊನ್ನಾಳಿ: ದುಡ್ಡು ಕೊಟ್ಟು ಅಧಿಕಾರ ಹಿಡಿಯುವ ಭಂಡತನದ ವ್ಯವಸ್ಥೆ ಬಿಜೆಪಿಯಲ್ಲಿಲ್ಲ. ಬಸವನಗೌಡ ಪಾಟೀಲ್ ಯತ್ನಾಳ್ ಹಿರಿಯ ರಾಜಕಾರಣಿಯಾಗಿದ್ದು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಇಲ್ಲಸಲ್ಲದ ಹೇಳಿಕೆ ಕೊಡಬಾರದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ. ಅಲ್ಲದೇ ಪದಾಧಿ ಕಾರಿಗಳಿಗೆ, ಪರಿವಾರದವರಿಗೆ, ಕಾರ್ಯಕರ್ತರ ಮನಸ್ಸಿಗೂ ಅಪಾರ ನೋವಾಗುತ್ತದೆ ಎಂದರು. ಸಿಎಂ, ಮಂತ್ರಿ ಹುದ್ದೆಗಳಿಗೆ ಲಾಬಿ ನಡೆಯುತ್ತಿದೆ ಎನ್ನುವ ಯತ್ನಾಳ್ ಹೇಳಿಕೆ ಅಪ್ರಬುದ್ಧವಾದುದು. ರಾಜ್ಯದಲ್ಲಿ ಬಿಎಸ್ ವೈ ಅವರಂತಹ ಮಹಾನ್ ನಾಯಕರಿಂದ ಬೆಳೆದ ಪಕ್ಷ ಇಂದು ಹೆಮ್ಮರವಾಗಿದೆ. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಬಿಜೆಪಿಗೆ ಉತ್ತಮ ಹೆಸರಿದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತವೆ. ಹಣ ಕೊಟ್ಟರೆ ಸಿಎಂ ಆಗುವುದು ಕಾಂಗ್ರೆಸ್ಸಿನಲ್ಲಿ ಮಾತ್ರ. ಲಕೋಟೆ ಸಂಸ್ಕೃತಿ, ಹೈಕಮಾಂಡ್ ಹೇಳಿದ ವ್ಯಕ್ತಿ ಸಿಎಂ ಆಗುವುದು ಕಾಂಗ್ರೆಸ್ನಲ್ಲಿ. ನಮ್ಮ ಪಕ್ಷದಲ್ಲಿ ಶಾಸಕರು ನಾಯಕನನ್ನು ಆಯ್ಕೆ ಮಾಡುತ್ತಾರೆ ಎಂದರು.
ಹಿಟ್ ಆ್ಯಂಡ್ ರನ್
ಪ್ರಮುಖರು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ಕುಮಾರಸ್ವಾಮಿ ಅವರು ಯಾವಾಗಲೂ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಾರೆ. ಅವರು ಹಿಟ್ ಆ್ಯಂಡ್ ರನ್ ಕಾರ್ಯವನ್ನು ನಿರಂತರ ಮಾಡಿಕೊಂಡು ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು. ಮೂಡಿಗೆರೆ ಶಾಸಕ ಕುಮಾರಸ್ವಾಮಿ ಏಕವಚನದಲ್ಲಿ ಪಿಎಸ್ಐ ಅವರನ್ನು ನಿಂದಿಸಿದ್ದು ವೈರಲ್ ಆಗಿರುವ ಬಗ್ಗೆ ಕೇಳಿದಾಗ, ಶಾಸಕರನ್ನು ಕೇಳಿ ಪಿಎಸ್ಐ ನಿಯುಕ್ತಿ ಮಾಡಬೇಕಿತ್ತು ಎಂದು ಹೇಳಿದರು. ಜಿಪಂ ಮಾಜಿ ಉಪಾಧ್ಯಕ್ಷ ಸುರೇಂದ್ರ ನಾಯ್ಕ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ