ದುಶ್ಚಟಕ್ಕೆ ಯುವಜನಾಂಗ ಬಲಿ: ಬಸವಪ್ರಭು ಶ್ರೀ ವಿಷಾದ

ಮದ್ಯ, ಗುಟ್ಕಾ, ಸಿಗರೇಟ್‌ಗಳಂತಹ ವಸ್ತುಗಳ ದಾಸರಾದರೆ ಬದುಕು ಹಾಳು

Team Udayavani, Aug 13, 2019, 10:38 AM IST

dg-tdy-2

ದಾವಣಗೆರೆ: ಕರುಣಾಜೀವ ಕಲ್ಯಾಣ ಟ್ರಸ್ಟ್‌ ವಿರಕ್ತ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಬಸವಪ್ರಭು ಸ್ವಾಮೀಜಿಗಳು ಉದ್ಘಾಟಿಸಿದರು.

ದಾವಣಗೆರೆ: ಪ್ರಸ್ತುತ ಯುವಜನಾಂಗ ಆರೋಗ್ಯದ ಎಚ್ಚರಿಕೆ ವಹಿಸದೇ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದುರಂತ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಿಷಾದಿಸಿದ್ದಾರೆ.

ನಗರದ ವಿರಕ್ತ ಮಠದಲ್ಲಿ ಕರುಣಾಜೀವ ಕಲ್ಯಾಣ ಟ್ರಸ್ಟ್‌ ಏರ್ಪಡಿಸಿದ್ದ 200ನೇ ಯಶಸ್ವಿ ಆರೋಗ್ಯ ತಪಾಸಣಾ ಶಿಬಿರ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ದೇಹ ರಕ್ಷಣೆಗೆ ಅತಿ ಹೆಚ್ಚು ಜಾಗ್ರತೆ ವಹಿಸಬೇಕು. ಆದರೆ, ಇಂದಿನ ಯುವ ಸಮೂಹ ಮದ್ಯ, ಗುಟ್ಕಾ, ಸಿಗರೇಟ್‌ಗಳಂತಹ ವಸ್ತುಗಳ ದಾಸರಾಗಿ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.

ಶ್ರಮರಹಿತ ಜೀವನದಿಂದ ಇಂದು ಮಾನವನ ಶರೀರ ರೋಗದ ಗೂಡಾಗಿ ಮಾರ್ಪಟ್ಟಿದೆ. ಅತಿಯಾದ ಆಹಾರ ಸೇವನೆ ಹಾಗೂ ಬೊಜ್ಜಿನಿಂದ ಮಧುಮೇಹ ಸಮಸ್ಯೆ ಎದುರಾಗಲಿದೆ. ಆರೋಗ್ಯ ಎಲ್ಲಕ್ಕಿಂತ ದೊಡ್ಡ ಸಂಪತ್ತು. ಮುನುಷ್ಯನ ಆರೋಗ್ಯ ಸುಸ್ಥಿತಿಯಲ್ಲಿರಲು ಯಾವುದೇ ದುಶ್ಚಟಕ್ಕೆ ಬಲಿಯಾಗಬಾರದು. ಒಮ್ಮೆ ದೇಹ ರಿಪೇರಿಗೆ ಬಂದರೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ. ಆದ್ದರಿಂದ ಭಗವಂತ ನೀಡಿರುವ ದೇಹವನ್ನು ಅತಿ ಎಚ್ಚರಿಕೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಅಲ್ಲಿನ ಜನರ ಬದುಕು ನೀರಲ್ಲಿ ಮುಳುಗಿ ಹೋಗಿದೆ. ಅವರ ನೆರವಿಗೆ ದಾವಿಸುವುದು ಪ್ರತಿಯೊಬ್ಬರ ಕರ್ತವ್ಯ, ಸಂತ್ರಸ್ತರಿಗೆ ಸಹಾಯ ಮಾಡಲಿಚ್ಚಿಸುವವರು ಶಿವಯೋಗಾಶ್ರಮ ಅಥವಾ ವಿರಕ್ತ ಮಠಕ್ಕೆ ಅಗತ್ಯ ವಸ್ತುಗಳನ್ನು ನೀಡಿದರೆ ಶ್ರೀಮಠದಿಂದ ಅವುಗಳನ್ನು ಸಂಕಷ್ಟಕ್ಕೊಳದ ಜನರಿಗೆ ತಲುಪಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ಹುಬ್ಬಳ್ಳಿಯ ಕಾರಟಗಿ ಆಸ್ಪತ್ರೆ ಡಾ| ರಾಮಚಂದ್ರ ಹಾಗೂ ಹರಿಹರದ ಡಾ| ಸವಿತಾ ಅವರಿಗೆ ಕಾರ್ಯಕ್ರಮದಲ್ಲಿ ಕರುಣಾ ಸೇವಾ ಪ್ರಶಸ್ತಿ ನೀಡಿ, ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ, ಮಾತನಾಡಿದ ಡಾ| ರಾಮಚಂದ್ರ ಕಾರಟಗಿ, 12ನೇ ಶತಮಾನದಲ್ಲೇ ಬಸವಣ್ಣನವರು ಕಾಯಕ ನಿಷ್ಠೆ ತತ್ವ ಸಾರಿದ್ದರು. ದಯವೇ ಧರ್ಮದ ಮೂಲವೆಂದು ಹೇಳಿದ್ದರು. ಬಡವರು, ನೊಂದವರಿಗೆ ನೆರವು ನೀಡುವುದರಿಂದ ಬದುಕಿನ ಸಾರ್ಥಕತೆ ಲಭಿಸಲಿದೆ. ಈ ನಿಟ್ಟಿನಲ್ಲಿ ಕರುಣಾ ಜೕವ ಟ್ರಸ್ಟ್‌ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ಕರುಣಾ ಜೀವ ಟ್ರಸ್ಟ್‌ನ ಕಾರ್ಯದರ್ಶಿ ಶಿವನಕೆರೆ ಬಸವಲಿಂಗಪ್ಪ, ಡಾ| ಬಿ.ಎಂ.ವಿಶ್ವನಾಥ್‌, ಡಾ| ಶಾರದಾ ಶೆಟ್ಟಿ, ಸಿ.ಜಿ.ದಿನೇಶ್‌, ಇತರರು ಕಾರ್ಯಕ್ರಮದಲ್ಲಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.