Congress ಸರಕಾರದಿಂದ ಅಭಿವೃದ್ಧಿ ಶೂನ್ಯ : ಗಾಯತ್ರಿ ಸಿದ್ದೇಶ್ವರ್‌

ಜೆಡಿಎಸ್‌-ಬಿಜೆಪಿ ಮುಖಂಡರ ಒಗ್ಗಟ್ಟು ಪ್ರದರ್ಶನ

Team Udayavani, Apr 3, 2024, 9:28 AM IST

1-wqeqwe

ದಾವಣಗೆರೆ: ಗ್ಯಾರಂಟಿ, ಪುಕ್ಕಟೆ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಎಂಬುದನ್ನೇ ಮರೆತಿದೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ದೂರಿದರು.

ಮಂಗಳವಾರ ದಾವಣಗೆರೆ ವಿವಿಧ ಭಾಗದಲ್ಲಿ ಪ್ರಚಾರ ನಡೆಸಿದ ಅವರು, ಐದು ಗ್ಯಾರಂಟಿ ಕೊಡುತ್ತೇವೆ ಎಂಬ ನೆಪದಲ್ಲಿ 10 ತಿಂಗಳಿನಿಂದ ದಾವಣಗೆರೆ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲೇ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಅನ್‌ ಗ್ಯಾರಂಟಿ ಸರ್ಕಾರ ನಡೆಸುತ್ತಿದ್ದಾರೆ. ಸ್ವಪಕ್ಷೀಯ ಶಾಸಕರೇ ಅಭಿವೃದ್ಧಿಗೆ ಹಣ ಇಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ನಡೆದುಕೊಂಡು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು.

ಸಮಗ್ರ ಅಭಿವೃದ್ಧಿ, ಸುರಕ್ಷತೆ, ಸಾಕ್ಷರತೆ, ಹೆಣ್ಣು ಮಕ್ಕಳ ರಕ್ಷಣೆಗಾಗಿ ಕೇಂದ್ರದಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರಬೇಕು ಅಂದರೆ ದಾವಣಗೆರೆಯಿಂದ ಮತದಾರರು ನನ್ನನ್ನು ಆಯ್ಕೆ ಮಾಡಿ ದೆಹಲಿಗೆ ಕಳುಹಿಸಬೇಕು ಎಂದುಮನವಿ ಮಾಡಿದರು.

ನಗರ ದೇವತೆ ದುರ್ಗಾಂಬಿಕಾ ದೇವಿ ಹಾಗೂ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಹಳೆಪೇಟೆ ಮತ್ತು ಜಾಲಿನಗರ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿ, ಕೀ ವೋಟರ್ಸ್‌ ಮನೆಗಳಿಗೆ ತೆರಳಿ ತಮಗೆ ಮತ ಹಾಕುವಂತೆ ಕೇಳಿದರು. ಅಕ್ಕಿ ಗಿರಣಿ ಮಾಲಿಕರಾದ ಲೋಹಿತ್‌, ಪ್ರಿಯದರ್ಶಿ, ಮುಖಂಡರಾದ ಅಡವೆಪ್ಪ, ಮಾಗಿ ಜಯಪ್ರಕಾಶ್‌, ಪ್ರವೀಣ್‌, ಜಿ.ಕೃಷ್ಣೋಜಿ ರಾವ್‌, ಜವಳಿ ಜಯಪ್ರಕಾಶ್‌ ನಿವಾಸಕ್ಕೆ ಭೇಟಿ ನೀಡಿ ಮತ ಯಾಚಿಸಿದರು.

ಸವಿತಾ ಸಮಾಜದ ಸಭಾ ಭವನದಲ್ಲಿ ಮುಖಂಡರ ಸಭೆ ನಡೆಸಿ, ಬಿಜೆಪಿ ಯಾವಾಗಲೂ ತಮ್ಮ ಜೊತೆ ನಿಲ್ಲುತ್ತದೆ ಎಂಬ ಅಭಯ ನೀಡಿದರು. ನಿಮಿಷಾಂಬ ಸಮಾಜದ ಬಂಧುಗಳ ಜೊತೆ ಮಾತು ಕತೆ ನಡೆಸಿದರು.

ಯರಗುಂಟೆ, ಕರೂರು, ಎಸ್‌.ಜೆ.ಎಂ ನಗರದಲ್ಲಿ ಪ್ರಚಾರ ನಡೆಸಿದರು. ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಮಾಜಿ ಮೇಯರ್‌ ಬಿ.ಜಿ. ಅಜಯ್‌ ಕುಮಾರ್‌, ಜಿ.ಎಸ್‌. ಅಶ್ವಿ‌ನಿ, ಭಾಗ್ಯ ಪಿಸಾಳೆ, ಬಿ.ಎಂ.ಸತೀಶ್‌, ಸೋಗಿ ಶಾಂತಕುಮಾರ್‌, ಜಯಮ್ಮ, ಪ್ರೇಮಮ್ಮ ಇತರರು ಇದ್ದರು.

ಜೆಡಿಎಸ್‌-ಬಿಜೆಪಿ ಮುಖಂಡರ ಒಗ್ಗಟ್ಟು ಪ್ರದರ್ಶನ
ಹರಿಹರ: ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲೂ ಈ ಎರಡೂ ಪಕ್ಷಗಳ ಮುಖಂಡರು ಸೋಮವಾರ ಒಂದೆ ವೇದಿಕೆಯಲ್ಲಿ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.

ಮಾಜಿ ಸಚಿವ ದಿ| ಎಚ್‌. ಶಿವಪ್ಪನವರ ಜನ್ಮದಿನದ ಅಂಗವಾಗಿ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಶಾಸಕ, ಜೆಡಿಎಸ್‌ನ ಎಚ್‌.ಎಸ್‌. ಶಿವಶಂಕರ್‌ ಮತ್ತು ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ್‌ ಕೇಕ್‌ ಕತ್ತರಿಸಿ, ಪರಸ್ಪರ ವಿನಿಮಯ ಮಾಡಿಕೊಂಡರು. ನಂತರ ಶಿವಪ್ಪನವರ ಆಡಳಿತ ಮತ್ತು ಹೋರಾಟದ ಬದುಕಿನ ಬಗ್ಗೆ ಸಭೆಯಲ್ಲಿ ಮಾತನಾಡಿದರು.

ಇದಕ್ಕೂ ಮುನ್ನ ಮಾಜಿ ಶಾಸಕ ಎಚ್‌.ಎಸ್‌ ಶಿವಶಂಕರ್‌ ಕುಟುಂಬಸ್ಥರು ಮತ್ತು ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ. ಚಿದಾನಂದಪ್ಪ ಸೇರಿದಂತೆ ಪಕ್ಷದ ಮುಖಂಡರು ಗ್ರಾಮದಲ್ಲಿರುವ ದಿ| ಶಿವಪ್ಪನವರ ಸಮಾಧಿಗೆ ಪೂಜೆ ಸಲ್ಲಿಸಿದರು.

ದೇಶದ ಹಿತದೃಷ್ಟಿಯಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ
ದೇಶದ ಹಿತದೃಷ್ಟಿಯಿಂದ ಜೆಡಿಎಸ್‌, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಹರಿಹರ ಕ್ಷೇತ್ರದ ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ತಿಳಿಸಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌರ ಸಲಹೆ, ಸೂಚನೆಯಂತೆ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ ಪರವಾಗಿ ಕೆಲಸ ಮಾಡಿ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು. ಅವರನ್ನು ಗೆಲ್ಲಿಸುವವರೆಗೂ ನಾನು ವಿರಮಿಸುವುದಿಲ್ಲ, ನೀವು ವಿರಮಿಸಬೇಡಿ ಎಂದು ಕರೆ ನೀಡಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಬಂಧು-ಬಳಗ, ಕಾರ್ಯಕರ್ತರು ಎಲ್ಲರೂ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ ಅವರಿಗೆ ಮತ ಚಲಾಯಿಸಬೇಕು. ಅಧಿಕಾರ ಶಾಶ್ವತ ಅಲ್ಲ, ವಿಶ್ವಾಸ ಶಾಶ್ವತ. ನಮ್ಮ ಮೇಲೆ ವಿಶ್ವಾಸವಿಟ್ಟು ಹೊಂದಾಣಿಗೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಹರಿಹರ ತಾಲೂಕಿನಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ಸಮ್ಮಿಲನ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.

ಹರಿಹರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ನಾನು ಸೋತಿದ್ದರೂ ಎಂದೂ ಸುಮ್ಮನೆ ಕುಳಿತಿಲ್ಲ. ಜನರ ನಡುವೆ, ಜನರಿಗೆ ಸ್ಪಂದಿಸಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇನೆ. ಜೆಡಿಎಸ್‌ ಮತ್ತು ಬಿಜೆಪಿ ಕಾರ್ಯಕರ್ತರು ನಾವೆಲ್ಲ ಒಂದೇ ಎಂದುಕೊಂಡು ಗಾಯಿತ್ರಿ ಸಿದ್ದೇಶ್ವರ್‌ ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಬೇಕು. ಹರಿಹರ ತಾಲೂಕಿನಲ್ಲಿ ಹೆಚ್ಚಿನ ಲೀಡ್‌ ಕೊಡುವ ಮೂಲಕ ದಿವಂಗತ ಎಚ್‌.ಶಿವಪ್ಪ ಅವರ ಶಕ್ತಿ ತೋರಿಸಬೇಕು ಎಂದರು.

ಸಂಸದ ಡಾ| ಜಿ.ಎಂ.ಸಿದ್ದೇಶ್ವರ್‌ ಮಾತನಾಡಿ, 10 ವರ್ಷಗಳಿಂದ ದೇಶದ ಆಡಳಿತ ನೋಡಿರುವ ಎಚ್‌.ಡಿ. ದೇವೇಗೌಡರು ಮತ್ತೆ ಕೇಂದ್ರದಲ್ಲಿ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ಬರಬೇಕು ಎಂದು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಜೆಡಿಎಸ್‌ ಕಾರ್ಯಕರ್ತರು ಎಲ್ಲೆಡೆಯೂ ಹೃದಯಪೂರ್ವ ಸ್ಪಂದನೆ ನೀಡುತ್ತಿದ್ದು, ನಮಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಹರಿಹರ ಶಾಸಕ ಬಿ.ಪಿ.ಹರೀಶ್‌ ಮಾತನಾಡಿ, ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಬಿಜೆಪಿ, ಜೆಡಿಎಸ್‌ ಅನ್ನು ಮುಗಿಸುತ್ತೇವೆ ಎಂದು ಹೇಳುತ್ತಾರೆ. ನಾವಿಬ್ಬರು ಸೇರಿ ಕಾಂಗ್ರೆಸ್‌ ಅನ್ನು ರಾಜಕೀಯವಾಗಿ ಮುಗಿಸಬೇಕು. ಜೆಡಿಎಸ್‌ ಕಾರ್ಯಕರ್ತರು ಗಾಯಿತ್ರಿ ಸಿದ್ದೇಶ್ವರ್‌ ಅವರಿಗೆ ಬೆಂಬಲ ನೀಡಿ, ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್‌, ಕೆ.ಬಿ.ಕೊಟ್ರೇಶ್‌, ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಗಣೇಶ್‌ ದಾಸಕರಿಯಪ್ಪ ,ಜೆಡಿಎಸ್‌ ಕಾರ್ಯಕರ್ತರು, ಎಚ್‌.ಶಿವಪ್ಪ ಅವರ ಅಭಿಮಾನಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.