ಮೆಕ್ಕೆಜೋಳ ಸ್ಥಳೀಯವಾಗಿಯೇ ಖರೀದಿಸಿ


Team Udayavani, Dec 1, 2020, 3:54 PM IST

ಮೆಕ್ಕೆಜೋಳ ಸ್ಥಳೀಯವಾಗಿಯೇ ಖರೀದಿಸಿ

ದಾವಣಗೆರೆ: ಜಿಲ್ಲೆಯಲ್ಲಿರುವ ಮೆಕ್ಕೆಜೋಳ ಸಂಸ್ಕರಣೆ ಆಧಾರಿತ ಸ್ಥಳೀಯ ಕೈಗಾರಿಕೆಗಳು ಸ್ಥಳೀಯವಾಗಿಯೇ ಬೆಳೆದ ಮೆಕ್ಕೆಜೋಳ ಖರೀದಿಸುವ ನಿಟ್ಟಿನಲ್ಲಿ ಉದ್ದಿಮೆದಾರರ ಸಭೆ ಕರೆದು ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ಜಿಪಂ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಯಿತು.

ಸದಸ್ಯ ಸುರೇಂದ್ರ ನಾಯ್ಕ ಮಾತನಾಡಿ, ಮೆಕ್ಕೆಜೋಳ ಬೆಳೆ ಕಟಾವಿಗೆ ಬಂದಿದೆ. ಈವರೆಗೂ ಖರೀದಿ ಕೇಂದ್ರ ತೆರೆದಿಲ್ಲ. ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆಧ್ವನಿಗೂಡಿಸಿದ ಸದಸ್ಯರಾದ ವಿಶ್ವನಾಥ್‌, ಕೆ.ಎಸ್‌. ಬಸವಂತಪ್ಪ, ಕೆ.ಎಚ್‌. ಓಬಳಪ್ಪ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸದಸ್ಯರೇ ರೈತರ ಪರವಾಗಿ ಪ್ರಶ್ನೆ ಕೇಳಿರುವುದು  ಒಳ್ಳೆಯ ವಿಚಾರ. ಆದರೆ ಮುಖ್ಯಮಂತ್ರಿಯವರು ಮೆಕ್ಕೆಜೋಳ ಆಹಾರ ವಸ್ತುವಲ್ಲ ಎಂದು ಕೇಂದ್ರ ಹೇಳಿದ್ದು ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸಲು ಸಾಧ್ಯವಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮಾನವೀಯತೆ ಆಧಾರದಲ್ಲಿ ಜಿಲ್ಲೆಯಲ್ಲಿ ಮೆಕ್ಕೆಜೋಳ ಆಧರಿಸಿ ನಡೆಯುವ ಕೈಗಾರಿಕೆಯವರಾದರೂ ಕೇಂದ್ರ ಸರ್ಕಾರ ಘೋಷಿಸಿರುವ 1800 ರೂ. ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತಾಗಬೇಕು. ಇದರಿಂದ ಕೆಲವು ರೈತರಿಗಾದರೂ ಅನುಕೂಲವಾಗುತ್ತದೆ. ಈ ಬಗ್ಗೆ ಉದ್ಯಮಿಗಳ ಸಭೆ ಕರೆದ ಮನವೊಲಿಸಬೇಕು ಎಂದು ಸಲಹೆ ನೀಡಿದರು.

ಪ್ರತಿಭಟನೆಗೆ ಒತ್ತಾಯ: ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಜಿಪಂನ ಎಲ್ಲ ಸದಸ್ಯರು, ಪಕ್ಷಾತೀತವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸೋಣ ಎಂದರು. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ಜಿಪಂ ಅಧ್ಯಕ್ಷರ ಮೇಲೆ ಒತ್ತಡ ಹೇರಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷದವರೇ ಆದ ಜಿಪಂ ಅಧ್ಯಕ್ಷೆ ದೀಪಾ ಜಗದೀಶ್‌, ವಿರೋಧ ಪಕ್ಷದ ಸದಸ್ಯರ ಒತ್ತಡಕ್ಕೆ ಮಣಿಯಲಿಲ್ಲ. ಎಲ್ಲದಕ್ಕೂ ಪ್ರತಿಭಟನೆಯೇ ಪರಿಹಾರವಲ್ಲ. ಈ ಕುರಿತು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುವುದು ಎಂದು ಹೇಳಿ ಪ್ರತಿಭಟನೆ ವಿಚಾರಕ್ಕೆ ತೆರೆ ಎಳೆದರು. ಹಳ್ಳಿಯಲ್ಲೂ ಪೌರ ಕಾರ್ಮಿಕರನ್ನು ನೇಮಿಸಿ: ಗ್ರಾಮ ಪಂಚಾಯಿತಿಯಲ್ಲಿ ಸ್ವತ್ಛತೆಗಾಗಿ ವರ್ಷಕ್ಕೆ ಎರಡ್ಮೂರು ಲಕ್ಷ ರೂ. ಖರ್ಚು ಹಾಕಲಾಗುತ್ತದೆ. ಇದರಿಂದ ಹಳ್ಳಿಗಳಲ್ಲಿ ಸರಿಯಾಗಿ ಸ್ವತ್ಛತೆ ಕೆಲಸ ಆಗುತ್ತಿಲ್ಲ. ಒಂದೆರೆಡು ಕಡೆ ಸ್ವತ್ಛ ಮಾಡಿದಂತೆ ಮಾಡಿ ಹಣ ಪಡೆಯಲಾಗುತ್ತಿದೆ. ಆದ್ದರಿಂದ ನಗರ ಪ್ರದೇಶಗಳ ಮಾದರಿಯಲ್ಲಿ ಗ್ರಾಮಗಳಲ್ಲಿಯೂ ಗುತ್ತಿಗೆ ಇಲ್ಲವೇ ಹೊರಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕರನ್ನುನೇಮಿಸಿಕೊಳ್ಳಬೇಕು. ಇದರಿಂದ ಹಳ್ಳಿಗಳಲ್ಲಿಯೂ ಸ್ವಚ್ಛತೆ ಎದ್ದು ಕಾಣುತ್ತದೆ ಎಂದು ಸದಸ್ಯ ಕೆ.ಎಸ್‌. ಬಸವಂತಪ್ಪ ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಯಾವುದೇ ರೀತಿಯ ನೇಮಕಾತಿ ಮಾಡಿಕೊಳ್ಳದಂತೆ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಗುತ್ತಿಗೆ ಕರೆದು ಸ್ವತ್ಛತೆ ಕೆಲಸ ನೀಡಬಹುದಾಗಿದೆ ಎಂದರು. ಇದಕ್ಕೆ ಒಪ್ಪಿದ ಸದಸ್ಯರು, ಸ್ವತ್ಛತೆಯನ್ನು ಟೆಂಡರ್‌ ಮೂಲಕವೇ ಏಜೆನ್ಸಿಗೆ ಜವಾಬ್ದಾರಿ ಕೊಟ್ಟು ನಿಗದಿತ ಕಾರ್ಮಿಕರಿಂದ ಸ್ವತ್ಛತೆ ಮಾಡಿಸುವಂತಾಗಲಿ. ನಗರ, ಮಹಾನಗರ ಪಾಲಿಕೆಯಲ್ಲಿಯೂ ಏಜೆನ್ಸಿ ಮೂಲಕ ಕೆಲಸವಾಗುತ್ತಿದೆ ಎಂದರು. ಸದಸ್ಯೆ ಶೈಲಜಾ ಈ ಕುರಿತು ನಿರ್ಣಯ ಕೈಗೊಳ್ಳಲು ಸೂಚಿಸಿದರು. ಜಿಪಂ ಅಧ್ಯಕ್ಷರು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದರು. ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ವಸತಿರಹಿತರ ಪಟ್ಟಿಯಲ್ಲೇ ಆಯ್ಕೆಯಾಗಲಿ: ಸದಸ್ಯ ವಿಶ್ವನಾಥ್‌ ಮಾತನಾಡಿ, ಪ್ರತಿ ಗ್ರಾಪಂಗೆ 20 ಆಶ್ರಯ ಮನೆ ಮಂಜೂರಿ ಮಾಡಲಾಗುತ್ತಿದ್ದು ಈಗಾಗಲೇ ಸಿದ್ಧಪಡಿಸಿರುವ ವಸತಿರಹಿತರ ಪಟ್ಟಿಯಲ್ಲಿರುವವರನ್ನೇ ಆಯ್ಕೆ ಮಾಡಬೇಕು. ಆ ಪಟ್ಟಿ ಬಿಟ್ಟು ಮಾಡುವುದಾದರೆ ಎಲ್ಲ ಹಂತದ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಹೊಸದಾಗಿ ಗ್ರಾಮಸಭೆ ಮಾಡಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಜಿಪಂ ಅಧ್ಯಕ್ಷೆ ದೀಪಾ ಜಗದೀಶ್‌, ವಸತಿರಹಿತರ ಪಟ್ಟಿಯಲ್ಲಿಯೇ ಮನೆಯ ಅವಶ್ಯಕತೆ ಹಾಗೂ ಮನೆ ಕಟ್ಟಿಸಿಕೊಳ್ಳುವ ಆಸಕ್ತಿ ಆಧರಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸದಸ್ಯ ಕೆ.ಎಚ್‌. ಓಬಳಪ್ಪ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಆಹಾರ ಸರಬರಾಜಿಗೆ ಸಂಬಂಧಿಸಿದ ಟೆಂಡರ್‌ ನೀಡುವಲ್ಲಿ ಅಧಿಕಾರಿಗಳು ಕಾನೂನು ಉಲ್ಲಂಘಿಸಿದ್ದು ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಭೆ ತೀರ್ಮಾನಿಸಿತು. ಜಿಪಂ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ಫಕೀRರಪ್ಪ, ಲೋಕೇಶ್‌ ವೇದಿಕೆಯಲ್ಲಿದ್ದರು.

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.