ಮೇವಿಗಿಲ್ಲ ಬರ


Team Udayavani, May 17, 2019, 1:17 PM IST

Udayavani Kannada Newspaper

ದಾವಣಗೆರೆ: ದಾವಣಗೆರೆಯ ಎಲ್ಲಾ ಆರು ತಾಲೂಕುಗಳು ಬರಕ್ಕೆ ತುತ್ತಾಗಿದ್ದರೂ ಜಾನುವಾರುಗಳಿಗೆ ಅತೀ ಅಗತ್ಯವಾದ ಮೇವಿನ ಕೊರತೆ ಈವರೆಗೆ ಕಂಡುಬಂದಿಲ್ಲ.

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪ್ರಕಾರ ಜಿಲ್ಲೆಯಲ್ಲಿ ಇನ್ನೂ 27 ವಾರಕ್ಕೆ ಆಗುವಷ್ಟು ಮೇವಿನ ಲಭ್ಯತೆ ಇದೆ.

ಜಿಲ್ಲೆಯ 21 ಹೋಬಳಿಯಲ್ಲಿ 24 ಗೋಶಾಲೆ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ಪ್ರಗತಿ ಪರಿಶೀಲನಾ ಸಭೆ ನಡೆಸಿ ಗೋಶಾಲೆ ಪ್ರಾರಂಭಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಗಳೂರು ತಾಲೂಕಿನ ಗುರುಸಿದ್ದಾಪುರ ಮತ್ತು ಕಲ್ಲೇದೇವರಪುರದಲ್ಲಿ ಗೋಶಾಲೆ ಪ್ರಾರಂಭಿಸಿದೆ.

ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 4,04,933 ಜಾನುವಾರುಗಳಿವೆ. ಚನ್ನಗಿರಿ ತಾಲೂಕಿನಲ್ಲಿ 1,02,128, ದಾವಣಗೆರೆಯಲ್ಲಿ 92,003, ಹರಿಹರ ತಾಲೂಕಿನಲ್ಲಿ 50,305, ಹೊನ್ನಾಳಿಯಲ್ಲಿ 1,03,882, ಜಗಳೂರಿನಲ್ಲಿ 56,615 ಜಾನುವಾರುಗಳಿವೆ. ಒಂದು ಜಾನುವಾರುಗೆ 5ಕೆ.ಜಿ. ಒಣ ಹುಲ್ಲು ಅಥವಾ 15 ಕೆ.ಜಿ. ಹಸಿ ಹುಲ್ಲಿನಂತೆ ಒಂದು ವಾರಕ್ಕೆ ಒಟ್ಟಾರೆ 14,173 ಮೆಟ್ರಿಕ್‌ ಟನ್‌ನಷ್ಟು ಹುಲ್ಲಿನ ಅವಶ್ಯತೆ ಇದೆ.

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪ್ರಕಾರ ಈಗ ಜಿಲ್ಲೆಯಲ್ಲಿ 3,84,998 ಮೆಟ್ರಿಕ್‌ ಟನ್‌ ಮೇವು ಲಭ್ಯತೆ ಇದೆ. ಈಗ ಲಭ್ಯ ಇರುವ ಮೇವು ಇನ್ನೂ 27 ವಾರಕ್ಕೆ ಸಾಕಾಗಲಿದೆ. ದಾವಣಗೆರೆ ತಾಲೂಕಿನಲ್ಲಿ 23, ಚನ್ನಗಿರಿಯಲ್ಲಿ 23, ಹರಿಹರದಲ್ಲಿ 49, ಹೊನ್ನಾಳಿಯಲ್ಲಿ 33, ಜಗಳೂರಿನಲ್ಲಿ 11 ವಾರಕ್ಕೆ ಆಗುವಷ್ಟು ಮೇವು ಇದೆ ಎಂಬುದು ಇಲಾಖೆ ಹೇಳಿಕೆ.

ಭದ್ರಾ ಅಚ್ಚುಕಟ್ಟು ಪ್ರದೇಶ ಹೊಂದಿರುವ ದಾವಣಗೆರೆ ಜಿಲ್ಲೆಯಲ್ಲಿ ಬೇಸಿಗೆ ಭತ್ತ, ರಾಗಿ, ಮೆಕ್ಕೆಜೋಳ ಮತ್ತು ಇತರೆ ಬೆಳೆಗಳ ಕಟಾವು ಪ್ರಾರಂಭವಾಗಿದೆ. ಇದು ಸಹ ಮೇವಿನ ಕೊರತೆ ನೀಗಿಸಲಿದೆ ಎಂಬ ಲೆಕ್ಕಾಚಾರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯದ್ದಾಗಿದೆ.

ಜಿಲ್ಲೆಯಲ್ಲಿ 27 ವಾರಕ್ಕೆ ಆಗುವಷ್ಟು ಮೇವಿನ ಲಭ್ಯತೆ ಜೊತೆಗೆ ಒಟ್ಟಾರೆ 1,48,372 ವಿವಿಧ ಹಂತದ ಮೇವಿನ ಕಿಟ್ ವಿತರಣೆ ಮಾಡಲಾಗಿದೆ. ಅದರಿಂದಲೂ ಮೇವು ಲಭ್ಯವಾಗಲಿದೆ. ಹಾಗಾಗಿಯೇ ಇಲ್ಲಿಯವರೆಗೆ ಜಿಲ್ಲಾಡಳಿತ ಗೋಶಾಲೆ ಪ್ರಾರಂಭಿಸಿರಲಿಲ್ಲ. ಈಗ ಎರಡು ಗೋಶಾಲೆ ಪ್ರಾರಂಭಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ರವರ ಸೂಚನೆ ಮೇರೆಗೆ ಜಗಳೂರು ತಾಲೂಕಿನ ಗುರುಸಿದ್ದಾಪುರ,
ಕಲ್ಲೇದೇವರಪುರಗಳಲ್ಲಿ ಗೋಶಾಲೆ ಪ್ರಾರಂಭಿಸಲಾಗಿದೆ. ಮೇವು ಬ್ಯಾಂಕ್‌ ಪ್ರಾರಂಭಿಸುವ ಪ್ರಸ್ತಾವನೆ ಇತ್ತು. ಆದರೆ ರೈತರಿಗೆ ಮೇವು ಖರೀದಿಸಲಿಕ್ಕಾಗದು ಎಂಬ ಕಾರಣಕ್ಕೆ ಮೇವು ಬ್ಯಾಂಕ್‌ ಬದಲಿಗೆ ಗೋಶಾಲೆ ಪ್ರಾರಂಭಿಸಲಾಗಿದೆ. ಜಾನುವಾರುಗಳಿಗೆ ತಗಲುಬಹುದಾದ ಕಾಯಿಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಬಿ.ಟಿ. ಕುಮಾರಸ್ವಾಮಿ,
ಉಪ ವಿಭಾಗಾಧಿಕಾರಿ

ರಾ.ರವಿಬಾಬು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.