ಲೋಕ ಸಮರ: ಮತ ಎಣಿಕೆಗೆ ಸಕಲ ಸಿದ್ಧತೆ

ನಾಳೆ ಬೆಳಗ್ಗೆ 8.30ಕ್ಕೆ ಎಣಿಕೆ ಕಾರ್ಯ ಶುರು•ಸಂಜೆ ವೇಳೆಗೆ ಫಲಿತಾಂಶ ದೊರೆಯುವ ಸಾಧ್ಯತೆ

Team Udayavani, May 22, 2019, 10:46 AM IST

22-May-5

ದಾವಣಗೆರೆ: ಚುನಾವಣಾಧಿಕಾರಿ ಜಿ.ಎನ್‌. ಶಿವಮೂರ್ತಿ ಮತ ಎಣಿಕೆ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು. ಎಸ್ಪಿ ಆರ್‌. ಚೇತನ್‌ ಇದ್ದರು.

ದಾವಣಗೆರೆ: ಗುರುವಾರ (ಮೇ 23) ನಡೆಯುವ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿ.ಎನ್‌. ಶಿವಮೂರ್ತಿ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ 14 ಟೇಬಲ್ ಹಾಗೂ ವಿವಿ ಪ್ಯಾಟ್ ಚೀಟಿಗಳ ಎಣಿಕೆಗೆ ಪ್ರತ್ಯೇಕ ಒಂದು ಟೇಬಲ್ ಸೇರಿ 15 ಟೇಬಲ್ ವ್ಯವಸ್ಥೆ ಮಾಡಲಾಗಿದೆ. 8 ವಿಧಾನಸಭಾ ಕ್ಷೇತ್ರಕ್ಕೆ ಒಟ್ಟಾರೆಯಾಗಿ 120 ಟೇಬಲ್, ತಲಾ 120 ಮತ ಎಣಿಕಾ ಮೇಲ್ವಿಚಾರಕರು, ಮತ ಎಣಿಕಾ ಸಹಾಯಕರು, ಮೈಕ್ರೋ ವೀಕ್ಷಕರು ಹಾಗೂ 16 ಜನ ಕಾಯ್ದಿರಿಸಿದ ಸಿಬ್ಬಂದಿ ಸೇರಿ 376 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಮತ ಎಣಿಕಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ ಎಂದರು.

ಅಂಚೆ ಮತಪತ್ರ ಎಣಿಕೆಗಾಗಿಯೇ ತಲಾ ಓರ್ವ ಸಹಾಯಕ ಚುನಾವಣಾಧಿಕಾರಿ, ಮೇಲ್ವಿಚಾರಕ, ಇಬ್ಬರು ಮತ ಎಣಿಕೆ ಮೇಲ್ವಿಚಾಕರು, ಮತ ಎಣಿಕೆ ಸಹಾಯಕರು, ಮೈಕ್ರೋ ವೀಕ್ಷಕರು ಸೇರಿ 8 ಜನರ ನಿಯೋಜನೆ ಮಾಡಲಾಗಿದೆ. ಇಟಿಪಿಬಿಎಸ್‌ ಎಣಿಕೆಗಾಗಿ ಇಬ್ಬರು ಸಹಾಯಕ ಚುನಾವಣಾಧಿಕಾರಿ, ಓರ್ವ ಮೇಲ್ವಿಚಾರಕ, ತಲಾ ನಾಲ್ವರು ಮತ ಎಣಿಕೆ ಮೇಲ್ವಿಚಾಕರು, ಮತ ಎಣಿಕೆ ಸಹಾಯಕರು, ಮೈಕ್ರೋ ವೀಕ್ಷಕರು ಸೇರಿ 15 ಜನರ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 4,047 ಅಂಚೆ ಮತಪತ್ರ ಹಾಗೂ ಇಟಿಪಿಬಿಎಸ್‌ ಮೂಲಕ 598 ಸೇವಾ ಮತದಾರರಿಗೆ ಮತ ಚಲಾವಣೆಗ ಪತ್ರ ಕಳಿಸಿಕೊಡಲಾಗಿತ್ತು. ಮೇ 21ರ ವರೆಗೆ 2,190 ಅಂಚೆ ಮತಪತ್ರ, 382 ಇಟಿಪಿಬಿಎಸ್‌ ಮತ ಪತ್ರಗಳು ಸ್ವೀಕೃತವಾಗಿವೆ. ಮೇ 23ರ ಬೆಳಗ್ಗೆ 8ರ ವರೆಗೆ ಸ್ವೀಕೃತವಾಗುವ ಅಂಚೆ ಹಾಗೂ ಇಟಿಪಿಬಿಎಸ್‌ ಮತ ಪತ್ರಗಳನ್ನ ಮಾತ್ರ ಮತ ಎಣಿಕೆಗೆ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಸಾಮಾನ್ಯ ವೀಕ್ಷಕರ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರೆಯ ಲಾಗುವುದು. 8ಕ್ಕೆ ಚುನಾವಣಾಧಿಕಾರಿಗಳ ಟೇಬಲ್ನಲ್ಲಿ ಅಂಚೆ ಮತಪತ್ರ ಎಣಿಕೆ ಪ್ರಾರಂಭವಾಗಲಿದೆ. 8.30ಕ್ಕೆ ಆಯಾಯ ವಿಧಾನಸಭಾ ಕ್ಷೇತ್ರವಾರು ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತ ಯಂತ್ರಗಳ ಎಣಿಕಾ ಕಾರ್ಯ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಪ್ರತಿ ವಿಧಾನಸಭಾ ಕ್ಷೇತ್ರವಾರು 5 ವಿವಿ ಪ್ಯಾಟ್‌ಗಳನ್ನು ಚುನಾವಣಾ ವೀಕ್ಷಕರು, ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಲಾಟರಿ ಮೂಲಕ ಆಯ್ಕೆಯಾದ ಮತಗಟ್ಟೆಗಳ ವಿವಿ ಪ್ಯಾಟ್‌ಗಳನ್ನ ಒಂದಾದ ನಂತರ ಒಂದರಂತೆ ಎಣಿಕೆ ಮಾಡಲಾಗುವುದು. ಮತ ಎಣಿಕೆ ಪ್ರಗತಿಯನ್ನ ಸುತ್ತುವಾರು ಸುವಿಧ… ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿ ವಿಧಾನಸಭಾ ಮತ ಕ್ಷೇತ್ರದ ಮತ ಎಣಿಕೆ, ಅಂಚೆ ಮತಪತ್ರ ಹಾಗೂ ಇಟಿಪಿಬಿಎಸ್‌ ಮತ ಎಣಿಕಾ ಸಂಪೂರ್ಣ ಪ್ರಕ್ರಿಯೆಯನ್ನ ವೀಡಿಯೋಗ್ರಫಿ ಮಾಡಲಾಗುವುದು. ಮತ ಎಣಿಕಾ ಕಾರ್ಯದ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. 144 ಸೆಕ್ಷನ್‌ ಜಾರಿಗೊಳಿಸಲಾಗಿದೆ. ಶಾಂತಿಯುತ ವಾತಾವರಣಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಇತರರು ಇದ್ದರು.

ಮೊಬೈಲ್ ಗೆ ಅವಕಾಶವಿಲ್ಲ
ಮತ ಎಣಿಕಾ ಕೇಂದ್ರದಲ್ಲಿ ಮೊಬೈಲ್, ಎಲೆಕ್ಟ್ರಾನಿಕ್‌ ಉಪಕರಣ, ಸಿಗರೇಟು, ಬೆಂಕಿಪೊಟ್ಟಣ, ತಂಬಾಕು ಉತ್ಪನ್ನಗಳು, ಯಾವುದೇ ವಿನಾಶಕಾರಿ ವಸ್ತುಗಳನ್ನು ತರುವಂತೆಯೇ ಇಲ್ಲ. ಒಂದೊಮ್ಮೆ ಮೊಬೈಲ್ ತಂದಲ್ಲಿ ವಿಶ್ವವಿದ್ಯಾಲಯ ಮುಖ್ಯ ಗೇಟ್ ಬಳಿ ಮೊಬೈಲ್ ಕೇಂದ್ರದಲ್ಲಿ ಕೊಟ್ಟು ಸ್ವೀಕೃತಿ ಪಡೆಯಬೇಕು. ಮತ ಎಣಿಕಾ ಕಾರ್ಯ ಮುಗಿದ ನಂತರವೇ ಸ್ವೀಕೃತಿಪತ್ರ ಸಲ್ಲಿಸಿ, ಮೊಬೈಲ್ ವಾಪಸ್‌ ಪಡೆದುಕೊಳ್ಳಬೇಕಾಗುತ್ತದೆ. ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿ.ಎನ್‌. ಶಿವಮೂರ್ತಿ ತಿಳಿಸಿದರು.

ಸಂಜೆ ವೇಳೆಗೆ ಫಲಿತಾಂಶ
ಅಂಚೆ ಮತ ಪತ್ರ, ಇಟಿಪಿಬಿಎಸ್‌ (ಸೇವಾ ಮತದಾರರ ಮತ ಪತ್ರ) ಎಣಿಕೆ ಮುಕ್ತಾಯದ ನಂತರ ವಿದ್ಯುನ್ಮಾನ ಮತ ಯಂತ್ರಗಳ ಮತ ಎಣಿಕಾ ಕಾರ್ಯ ಬೆಳಗ್ಗೆ 8.30ಕ್ಕೆ ಪ್ರಾರಂಭವಾಗಲಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಪ್ರತಿ ವಿಧಾನ ಸಭಾ ಕ್ಷೇತ್ರವಾರು 5 ವಿವಿ ಪ್ಯಾಟ್‌ಗಳನ್ನು ಚುನಾವಣಾ ವೀಕ್ಷಕರು, ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಲಾಟರಿ ಮೂಲಕ ಆಯ್ಕೆಯಾದ ಮತಗಟ್ಟೆಗಳ ವಿವಿ ಪ್ಯಾಟ್‌ಗಳನ್ನ ಒಂದಾದ ನಂತರ ಒಂದರಂತೆ ಎಣಿಕೆ ಮಾಡಬೇಕಾಗುವುದರಿಂದ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಲಭ್ಯವಾಗಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಜಿ.ಎನ್‌. ಶಿವಮೂರ್ತಿ ತಿಳಿಸಿದರು.

15 ಟೇಬಲ್, 376 ಸಿಬ್ಬಂದಿ
ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ 14 ಟೇಬಲ್ ಹಾಗೂ ವಿವಿ ಪ್ಯಾಟ್ ಚೀಟಿಗಳ ಎಣಿಕೆಗೆ ಪ್ರತ್ಯೇಕ ಒಂದು ಟೇಬಲ್ ಸೇರಿ 15 ಟೇಬಲ್ ವ್ಯವಸ್ಥೆ ಮಾಡಲಾಗಿದೆ. 8 ವಿಧಾನಸಭಾ ಕ್ಷೇತ್ರಕ್ಕೆ ಒಟ್ಟಾರೆಯಾಗಿ 120 ಟೇಬಲ್, ತಲಾ 120 ಮತ ಎಣಿಕಾ ಮೇಲ್ವಿಚಾರಕರು, ಮತ ಎಣಿಕಾ ಸಹಾಯಕರು, ಮೈಕ್ರೋ ವೀಕ್ಷಕರು ಹಾಗೂ 16 ಜನ ಕಾಯ್ದಿರಿಸಿದ ಸಿಬ್ಬಂದಿ ಸೇರಿ 376 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಮತ ಎಣಿಕಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ ಜಿಲ್ಲಾ ಚುನಾವಣಾಧಿಕಾರಿ ಜಿ.ಎನ್‌. ಶಿವಮೂರ್ತಿ ತಿಳಿಸಿದರು.

ಶೇ.72.94 ಮತದಾನ
ಕಳೆದ ಏ.23ರಂದು ನಡೆದ ಚುನಾವಣೆಯಲ್ಲಿ ಶೇ.72.94ರಷ್ಟು ಮತದಾನವಾಗಿದೆ. 8,24,331 ಪುರುಷರು, 8,10,400 ಮಹಿಳೆಯರು ಹಾಗೂ 129 ಇತರರು ಒಳಗೊಂಡಂತೆ ಒಟ್ಟು 16,34,860 ಮತದಾರರಲ್ಲಿ 11,92,162 ಮತದಾರರು 1,949 ಮತಗಟ್ಟೆಗಳಲ್ಲಿ ಮತ ಚಲಾಯಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.