ವೈ.ರಾಮಪ್ಪ ವಿರುದ್ಧ ಪ್ರತಿಭಟನೆಯ ಕಿಡಿ

•ಲಿಂಗಾಯತ ವೀರಶೈವ ಸಮಾನ ಮನಸ್ಕ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ•ಪ್ರತಿಕೃತಿ ದಹನ

Team Udayavani, Apr 26, 2019, 12:59 PM IST

26-April-19

ದಾವಣಗೆರೆ: ಲಿಂಗಾಯತ ವೀರಶೈವ ಸಮಾನ ಮನಸ್ಕರ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ.

ದಾವಣಗೆರೆ: ಲಿಂಗಾಯತ ವೀರಶೈವ ಸಮಾಜ ಹಾಗೂ ಈಶ್ವರ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷ ಡಾ| ವೈ. ರಾಮಪ್ಪ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಲಿಂಗಾಯತ ವೀರಶೈವ ಸಮಾನ ಮನಸ್ಕರ ವೇದಿಕೆ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್‌ ವೃತ್ತದಲ್ಲಿನ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜಯದೇವ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ಜಯದೇವ ವೃತ್ತದಲ್ಲಿ ಡಾ| ವೈ. ರಾಮಪ್ಪ ಪ್ರತಿಕೃತಿ, ಟೈರ್‌ ಸುಡುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ನೇರ್ಲಿಗೆ ಗ್ರಾಮದ ಬಸ್‌ ನಿಲ್ದಾಣದಲ್ಲಿ ಡಾ| ವೈ. ರಾಮಪ್ಪ ಲಿಂಗಾಯತ ವೀರಶೈವ ಸಮಾಜದವರನ್ನು ಅಶ್ಲೀಲವಾಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಎಲ್ಲಾ ಸಂದರ್ಭದಲ್ಲಿ ನೀವೇ ರಾಜಕೀಯ ಮಾಡಬೇಕೇ, ನಿಮಗಷ್ಟೇ ಶಿವ-ಈಶ್ವರ ಇದ್ದಾನೆಯೇ ಹಾಗೂ ಈಶ್ವರ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರುವುದು ಅತ್ಯಂತ ಖಂಡನೀಯ ಎಂದು ದೂರಿದರು.

ಲಿಂಗಾಯತ ಸಮಾಜದ ಮುಖಂಡರಿಗೆ ಬೆದರಿಕೆ ಒಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ರಕ್ತಪಾತವಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಡಾ| ವೈ. ರಾಮಪ್ಪ ಹಿಂದೆಯೂ ಅನೇಕ ಬಾರಿ ಲಿಂಗಾಯತ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ವೀರಶೈವ ಲಿಂಗಾಯತ ಸಮಾಜದವರ ಮತಗಳ ಮೂಲಕವೇ ಜಿಲ್ಲಾ ಪಂಚಾಯತ್‌ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದವರಿಗೆ ಸೇರಿದ ವಿದ್ಯಾಸಂಸ್ಥೆಯಲ್ಲೇ ಕೆಲಸ ಮಾಡಿರುವ ಡಾ| ರಾಮಪ್ಪ ಸಮಾಜದ ವಿರುದ್ಧವೇ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿರುವುದು, ರಕ್ತಪಾತ ಆಗುತ್ತದೆ ಎಂಬ ಬೆದರಿಕೆ ಹಾಕಿರುವುದನ್ನು ಸಹಿಸಲಿಕ್ಕೆ ಆಗುವುದೇ ಇಲ್ಲ ಎಂದು ಎಚ್ಚರಿಸಿದರು.

ವೀರಶೈವ ಲಿಂಗಾಯತ ಸಮಾಜ ಎಲ್ಲಾ ಸಮಾಜದವರನ್ನು ಅಪ್ಪಿಕೊಂಡು, ಒಪ್ಪಿಕೊಂಡು ಹೋಗುವ ಸಮಾಜ. ಯಾವ ಸಮಾಜದ ವಿರುದ್ಧವೂ ಹೋರಾಟ, ದ್ವೇಷ ಸಾಧಿಸಲು ಹೋಗುವುದಿಲ್ಲ. ಅಂತಹ ಶಾಂತಿಯುತ ಸಮಾಜದ ಬಗ್ಗೆ ಅಗೌರವ, ಅವಹೇಳನಕಾ ರಿಯಾಗಿ ಮಾತನಾಡುವುದನ್ನೂ ಸಹಿಸುವುದಿಲ್ಲ. ಹುತ್ತಕ್ಕೆ ಕೈ ಹಾಕಿದರೆ ಹಾವು ಬರುತ್ತದೆ. ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಮಾತನಾಡಿದರೆ ಬೇರೆಯದ್ದೇ ಪರಿಣಾಮ ಉಂಟಾಗುತ್ತದೆ ಎಂದು ಎಚ್ಚರಿಸಿದರು.

ವೀರಶೈವ-ಲಿಂಗಾಯತ ಸಮಾಜದ ಮುಖಂಡರು ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಯಕೊಂಡ ಠಾಣೆಯಲ್ಲಿ ಜಾತಿನಿಂದನೆ ದೂರು ಸಹ ದಾಖಲಿಸಿದ್ದಾರೆ. ಕೂಡಲೇ ಡಾ| ವೈ. ರಾಮಪ್ಪ ದಾಖಲಿಸಿರುವ ಜಾತಿ ನಿಂದನೆ ಕೇಸ್‌ ವಾಪಸ್‌ ಪಡೆದು 24 ಗಂಟೆಯಲ್ಲಿ ಬಹಿರಂಗ ಕ್ಷಮೆ ಕೋರಬೇಕು. ಇಲ್ಲದೇ ಹೋದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ವೇದಿಕೆಯ ಹೊನ್ನೂರು ಮುನಿಯಪ್ಪ, ದೇವರಮನೆ ಶಿವಕುಮಾರ್‌, ಬಸವರಾಜ್‌ ಶಿವಗಂಗಾ, ಹೆಮ್ಮನಬೇತೂರು ಶಶಿಧರ್‌, ಲೋಕಿಕೆರೆ ನಾಗರಾಜ್‌, ಚಿಕ್ಕನಹಳ್ಳಿ ಸುರೇಶ್‌, ಆಲೂರು ಚನ್ನಬಸಪ್ಪ, ರಮೇಶ್‌, ಅಣಬೇರು ಗಂಗಾಧರ, ಶ್ಯಾಗಲೆ ಜಯಕುಮಾರ್‌, ಸಿದ್ದೇಶ್‌, ಎಂ. ನಾಗರಾಜ್‌, ಸತೀಶ್‌, ಹೊನ್ನೂರು ವೀರೇಶ್‌, ನುಗ್ಗೇಹಳ್ಳಿ ರವಿಕುಮಾರ್‌, ಶ್ರೀನಿವಾಸ್‌, ದಾಕ್ಷಾಯಣಮ್ಮ, ಶೀಲಾಕುಮಾರಿ, ಸಾದಿಕ್‌ ಉಲ್ಲಾ ಖಾನ್‌ ಇತರರು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.