ನ್ಯಾಮತಿ ನಾಮಕೆವಾಸ್ತೆ ತಾಲೂಕು ಕೇಂದ್ರ!

2 ವರ್ಷವಾದರೂ ಇನ್ನೂ ಕಾಣದ ಸರ್ಕಾರಿ ಇಲಾಖಾ ಕಚೇರಿಗಳು ಸರ್ಕಾರಿ ಕೆಲಸಕ್ಕಾಗಿ ಇನ್ನೂ ಹೊನ್ನಾಳಿಗೆ ಅಲೆದಾಟ

Team Udayavani, Sep 28, 2019, 11:17 AM IST

28-Sepctember-3

ದಾವಣಗೆರೆ: ಅಂತು ಇಂತು ಕುಂತಿ ಮಕ್ಕಳಿಗೆ ರಾಜ್ಯ ದೊರೆಯಿತು ಎಂಬಂತೆ ಜಿಲ್ಲೆಯಲ್ಲಿ ಮತ್ತೆ ನ್ಯಾಮತಿ
ತಾಲೂಕು ಕೇಂದ್ರವೇನೋ ಆಗಿದೆ. ತಾಲೂಕು ಕೇಂದ್ರ ರಚನೆಯಾಗಿ ಎರಡು ವರ್ಷಗಳು ಕಳೆಯುತ್ತಾ ಬಂದರೂ ಅಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ ಎನ್ನುವ ಕೂಗು ಆ ಭಾಗದ ಜನರಲ್ಲಿದೆ.

ಅತಿ ದೊಡ್ಡ ಹೋಬಳಿ ಕೇಂದ್ರ ನ್ಯಾಮತಿ ಬ್ರಿಟಿಷರ ಆಳ್ವಿಕೆಯ 1870ರ ಕಾಲಾವಧಿಯಲ್ಲೇ ತಾಲೂಕು ಕೇಂದ್ರವಲ್ಲದೆ, ಪುರಸಭೆಯೂ ಆಗಿತ್ತು. ಈಗಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ತಾಲೂಕು ಆಡಳಿತ ಕಚೇರಿಯಾಗಿತ್ತು. ಕೆಲವಾರು ಆಡಳಿತಾತ್ಮಕ, ತಾಂತ್ರಿಕ ಕಾರಣದಿಂದ ನ್ಯಾಮತಿ ತಾಲೂಕು ಕೇಂದ್ರವನ್ನು ಹೊನ್ನಾಳಿಗೆ ಸ್ಥಳಾಂತರಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿದ್ದಾಗಲೇ 1974ರಿಂದ ನ್ಯಾಮತಿಯನ್ನು ಮತ್ತೆ ತಾಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ಅನೇಕ ಮುಖಂಡರು, ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಹೋರಾಟ ಆರಂಭವಾಗಿತ್ತು.

2001ರಲ್ಲಿ ನ್ಯಾಮತಿ ತಾಲೂಕು ಹೋರಾಟ ಸಮಿತಿ ರಚನೆಯ ನಂತರ ಹೋರಾಟ ತೀವ್ರತೆ ಪಡೆದು, 2004ರಲ್ಲಿ ಅಂದಿನ ಮುಖ್ಯಮಂತ್ರಿ ಎನ್‌. ಧರ್ಮಸಿಂಗ್‌ರಿಗೆ ಮನವಿ ಸಲ್ಲಿಸಲಾಯಿತು.

ಈ ನಡುವೆ ಗದ್ದಿಗೌಡರ್‌, ವಾಸುದೇವರಾವ್‌, ಹುಂಡೇಕಾರ್‌ ಸಮಿತಿಗಳ ವರದಿ ಸಹ ನ್ಯಾಮತಿ ತಾಲೂಕು ಕೇಂದ್ರಕ್ಕೆ ಪೂರಕವಾಗಿದ್ದವು. ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು ಸಮಿತಿ ರಚಿಸಿಕೊಂಡು ಹೋರಾಡಿದ್ದರಿಂದಲೇ ನ್ಯಾಮತಿ ಮತ್ತೆ ತಾಲೂಕು ಕೇಂದ್ರವಾಗಿದೆ.

ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಡಾ|
ಡಿ.ಬಿ.ಗಂಗಪ್ಪ, ಡಿ.ಜಿ.ಶಾಂತನಗೌಡ ಸೇರಿದಂತೆ ಇತರ ಮುಖಂಡರು ತಾಲೂಕು ರಚನೆಗೆ ಶ್ರಮಿಸಿದ್ದಾರೆ.

2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಜಗದೀಶ್‌ ಶೆಟ್ಟರ್‌ ತಮ್ಮ ಬಜೆಟ್‌ನಲ್ಲಿ ಹೊಸ ತಾಲೂಕುಗಳ ರಚನೆಯಲ್ಲಿ ನ್ಯಾಮತಿ ಸಹ ಘೋಷಿಸಿದ್ದರು. ನ್ಯಾಮತಿ ತಾಲೂಕು ಕೇಂದ್ರವಾಗಿ ಘೋಷಿಸಲ್ಪಟ್ಟಿದ್ದರೂ ಅದು ಕಾರ್ಯರೂಪಕ್ಕೆ ಕಾಲ ಕೂಡಿ ಬರಲೇ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ನ್ಯಾಮತಿ ಸೇರಿದಂತೆ ಹಲವು ತಾಲೂಕುಗಳ ರಚನೆ ಘೋಷಿಸಿದ್ದರು.

2018 ಜ. 17ರಂದು ಸರ್ಕಾರದ ಆದೇಶದನ್ವಯ ತಹಶೀಲ್ದಾರ್‌, ಗ್ರೇಡ್‌-1 ತಹಶೀಲ್ದಾರ್‌, ಶಿರಸ್ತೇದಾರ್‌, ಪ್ರಥಮ, ದ್ವಿತೀಯ ದರ್ಜೆ ಸಹಾಯಕರು ಒಳಗೊಂಡಂತೆ ಒಟ್ಟಾರೆ 18 ಸಿಬ್ಬಂದಿ ನೇಮಕ ಪ್ರಕ್ರಿಯೆಗೆ ಚಾಲನೆ ದೊರೆಯಿತು. ನ್ಯಾಮತಿಯ ಹೃದಯ ಭಾಗದಲ್ಲಿದ್ದ ನಾಡಕಚೇರಿಯೇ ಈಗ ತಾಲೂಕು ಕಚೇರಿ ಆಗಿದೆ. ಉಪ ತಹಶೀಲ್ದಾರ್‌ ಈಗ ತಾತ್ಕಾಲಿಕ ತಹಶೀಲ್ದಾರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊನ್ನಾಳಿ ಕ್ಷೇತ್ರ ಶಿಕ್ಷಣಾಧಿಕಾರಿ ತಾತ್ಕಾಲಿಕ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನುಳಿದ ಕೆಲಸ ಕಾರ್ಯಗಳು ಸದ್ಯಕ್ಕೆ ಹೊನ್ನಾಳಿಯಿಂದಲೇ ನಡೆಯುತ್ತಿವೆ.

ಹೊಸ ಕಚೇರಿಗಳಿಗೆ ಜಾಗ ಹುಡುಕಾಟ ನಡೆದಿದೆ. ಎರಡು ತಿಂಗಳ ಹಿಂದೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನ್ಯಾಮತಿ ತಾಲೂಕಿಗೆ ವರ್ಗಾವಣೆಗೊಂಡಿದ್ದು, ಅವರಿಗೆ ಕಚೇರಿ ಇಲ್ಲದೆ ಗ್ರಾಮ ಪಂಚಾಯಿತಿಯ ಒಂದು ಕೊಠಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಹಶೀಲ್ದಾರ್‌, ತಾಪಂ ಇಓ ಹಾಗೂ ಬೆಸ್ಕಾಂ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಹೊರತು ಪಡಿಸಿದರೆ ಇತರೆ ಯಾವುದೇ ಇಲಾಖೆಯ ಅಧಿಕಾರಿ ತಾಲೂಕು ಕೇಂದ್ರದಲ್ಲಿಲ್ಲ.

ಎಲ್ಲಾ ಇಲಾಖೆಯ ಕೆಲಸ ಕಾರ್ಯಗಳಿಗೆ ಜನರು ಈಗಲೂ ಹೊನ್ನಾಳಿಗೇ ಹೋಗಬೇಕಿದೆ. ಮೂಲಗಳ ಪ್ರಕಾರ ನೂತನ ತಾಲೂಕಿಗೆ ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಬಿಡುಗಡೆಯಾಗಿಲ್ಲ.

ಕಂದಾಯ ಇಲಾಖೆ ಹಳೇ ದಾಖಲಾತಿಗಳು ಇನ್ನೂ ವರ್ಗಾವಣೆಯಾಗಬೇಕಿದೆ ಎಂಬುದಾಗಿ ತಹಶೀಲ್ದಾರ್‌ ಹೇಳುತ್ತಾರೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.