ಸ್ಮಾರ್ಟ್ ಬಸ್‌ ನಿಲ್ದಾಣ ನಿರ್ಮಾಣ ಶುರು

ಅಂಗಡಿಗಳ ತೆರವು-ಖಾಸಗಿ ಬಸ್‌ ನಿಲ್ದಾಣ ಹೈಸ್ಕೂಲ್‌ ಮೈದಾನಕ್ಕೆ ಶಿಫ್ಟ್‌

Team Udayavani, Dec 6, 2019, 12:28 PM IST

6-December-7

ದಾವಣಗೆರೆ: ಅಂತೂ ಇಂತೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ ಸ್ಮಾರ್ಟ್‌ಸಿಟಿ ಯೋಜನೆಯಡಿ 28.5 ಕೋಟಿ ವೆಚ್ಚದಲ್ಲಿ ಖಾಸಗಿ ಬಸ್‌ ನಿಲ್ದಾಣ ಕಾಮಗಾರಿಗೆ ಮುಹೂರ್ತ ಕೂಡಿ ಬಂದಿದೆ.

ಹಾಗಾಗಿ ಖಾಸಗಿ ಬಸ್‌ ನಿಲ್ದಾಣ ಸಹ ಹೈಸ್ಕೂಲ್‌ ಫೀಲ್ಡ್‌ಗೆ ಶಿಫ್ಟ್‌ ಆಗಿದೆ. ಸ್ಮಾರ್ಟ್‌ಸಿಟಿ ಯೋಜನೆಗೆ ಅನುಗುಣವಾಗಿ ಖಾಸಗಿ ಬಸ್‌ ನಿಲ್ದಾಣವನ್ನು ಸ್ಮಾರ್ಟ್‌ ನಿಲ್ದಾಣವನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ 28.5 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಸ್ಮಾರ್ಟ್‌ಸಿಟಿ ಯೋಜನೆ ಪ್ರಕಾರ ಜೂನ್‌ ನಲ್ಲೇ ಖಾಸಗಿ ಬಸ್‌ ನಿಲ್ದಾಣ ಕಾಮಗಾರಿ ಪ್ರಾರಂಭವಾಗಬೇಕಿತ್ತು. ಸರ್ಕಾರಿ ಹೈಸ್ಕೂಲ್‌ ಮೈದಾನದಲ್ಲಿ 3 ಕೋಟಿ ವೆಚ್ಚದಲ್ಲಿ ತಾತ್ಕಾಲಿಕ ಬಸ್‌ ನಿಲ್ದಾಣವನ್ನೂ ನಿರ್ಮಾಣ ಮಾಡಲಾಗಿತ್ತಾದರೂ ಅನೇಕ ಕಾರಣದಿಂದ ಖಾಸಗಿ ಬಸ್‌ ನಿಲ್ದಾಣ ಶಿಫ್ಟ್‌ ಆಗಿರಲಿಲ್ಲ.

ಇದ್ದಕ್ಕಿದ್ದಂತೆ ಬುಧವಾರದಿಂದ ಖಾಸಗಿ ಬಸ್‌ ನಿಲ್ದಾಣ ಶಿಫ್ಟ್‌ ಆಗಿದೆ. ಬಸ್‌ ನಿಲ್ದಾಣಕ್ಕೆ ಬಂದು, ಹೋಗುತ್ತಿದ್ದಂತಹ ನೂರಾರು ಖಾಸಗಿ ಬಸ್‌ ಗಳು ಈಗ ಸರ್ಕಾರಿ ಹೈಸ್ಕೂಲ್‌ ಮೈದಾನಕ್ಕೆ ಬಂದು-ಹೋಗುತ್ತಿವೆ. ತಾತ್ಕಾಲಿಕ ಬಸ್‌ ನಿಲ್ದಾಣದಲ್ಲಿ 98 ಮಳಿಗೆ ನಿರ್ಮಾಣ ಮಾಡಲಾಗಿದೆ. ಕೆಲವುಗಳಲ್ಲಿ ವ್ಯಾಪಾರ-ವಹಿವಾಟು ಪ್ರಾರಂಭವಾಗಿದೆ.

ಬುಧವಾರ ಖಾಸಗಿ ಬಸ್‌ ನಿಲ್ದಾಣ ಶಿಫ್ಟ್‌ ಆಗುತ್ತಿರುವ ವಿಷಯ ಗೊತ್ತಾಗದೆ ಬಸ್‌ನವರು ಮಾತ್ರವಲ್ಲ, ಜನರು ಸಹ ತೀವ್ರ ತೊಂದರೆ ಅನುಭವಿಸಬೇಕಾಯಿತು. ಊರುಗಳಿಗೆ ಹೋಗಬೇಕಾದವರು, ಬೇರೆ ಊರುಗಳಿಂದ ಬಂದವರಿಗೆ ಗೊಂದಲ ಉಂಟಾಗಿತ್ತು. ಏಕಾಏಕಿ ಬಸ್‌ ನಿಲ್ದಾಣ ಬದಲಾಗಿದ್ದರಿಂದ ಎಲ್ಲರಿಗೂ ಒಂದಲ್ಲ ಒಂದು ರೀತಿ ತೊಂದರೆ ಆಗಿತ್ತು. ಗುರುವಾರ ಪರಿಸ್ಥಿತಿ ಸುಧಾರಿಸಿದೆ. ಜನರು ನಿಧಾನವಾಗಿ ತಾತ್ಕಾಲಿಕ ಬಸ್‌ ನಿಲ್ದಾಣ ವಾತಾವರಣಕ್ಕೆ ಹೊಂದಿಕೊಳ್ಳುತ್ತಿದ್ದಾರೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಸ್ಮಾರ್ಟ್‌ ಬಸ್‌ ನಿಲ್ದಾಣ ಮೂರು ಅಂತಸ್ತಿನ ಜೊತೆಗೆ ಅಗತ್ಯ ವ್ಯಾಪಾರ-ವಹಿವಾಟು, ವಾಣಿಜ್ಯ ಮಳಿಗೆ, ಹೋಟೆಲ್‌ ಇತರೆ ಸೌಲಭ್ಯ ಹೊಂದಲಿದೆ. ಬಸ್‌ ಗಳ ಸಂಚಾರದ ಮಾಹಿತಿ ಇತರೆ ಅತ್ಯಾಧುನಿಕ ಸೌಲಭ್ಯದ ಸ್ಪರ್ಶ ಪಡೆಯಲಿದೆ. ಒಟ್ಟಾರೆಯಾಗಿ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಬಸ್‌ ಸ್ಟ್ಯಾಂಡ್ ಆಗಲಿದೆ.

ಖಾಸಗಿ ಬಸ್‌ ನಿಲ್ದಾಣ ಮಾತ್ರವಲ್ಲ, ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣವೂ ಸ್ಮಾರ್ಟ್‌ಸಿಟಿ ಯೋಜನೆಯಡಿ ಸ್ಮಾರ್ಟ್‌ ಆಗಲಿದೆ. 100ಕೋಟಿ ಅನುದಾನದಲ್ಲಿ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣ ನಿರ್ಮಾಣದ ರೂಪುರೇಷೆ ಸಿದ್ಧವಾಗಿದೆ.

ಕೆಎಸ್ಸಾರ್ಟಿಸಿ ಬಸ್‌ಗಳು ಸಹ ಹೈಸ್ಕೂಲ್‌ ಮೈದಾನಕ್ಕೆ ಬಂದು-ಹೋಗಲಿವೆ. ಒಂದು ಕಡೆ ಖಾಸಗಿ, ಇನ್ನೊಂದು ಕಡೆ ಕೆಎಸ್ಸಾರ್ಟಿಸಿ ಬಸ್‌ಗಳು ಹೈಸ್ಕೂಲ್‌ ಮೈದಾನಕ್ಕೆ ದಾಂಗುಡಿಯಿಡುವುದರಿಂದ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ.

ಸರ್ಕಾರಿ ಹೈಸ್ಕೂಲ್‌, ಪಿಯು ಕಾಲೇಜು ಮತ್ತು ಡಯಟ್‌ ಕಾಲೇಜುಗಳ ವಿದ್ಯಾರ್ಥಿಗಳು ಸಂತೆಯ ಗದ್ದಲದಲ್ಲಿ ಕಲಿಯುವಂತಹ ಅನಿವಾರ್ಯತೆ ನಿರ್ಮಾಣವಾಗಲಿದೆ. ಕೆಲವೇ ದಿನಗಳಲ್ಲಿ ಪರೀಕ್ಷಾ ಕಾಲ… ಆಗ ಇನ್ನೂ ಹೆಚ್ಚಿನ ಸಮಸ್ಯೆ ಶತಃಸಿದ್ಧ. ಹಾಗಾಗಿ ಸ್ಮಾರ್ಟ್‌ಸಿಟಿ ಯೋಜನೆ ಅಧಿಕಾರಿಗಳು, ಜನಪ್ರತಿನಿಧಿಗಳು ಎರಡು ಬಸ್‌ ನಿಲ್ದಾಣಗಳ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸುವತ್ತ ಚಿತ್ತ ಹರಿಸಲೇಬೇಕಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.