ಬೇರೆ ಕೆಲಸಕ್ಕೆ ಶಿಕ್ಷಕರು ಬೇಡ

ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಾಪಂ ಸಭೆಯಲ್ಲಿ ತೀರ್ಮಾನ

Team Udayavani, Sep 22, 2019, 11:38 AM IST

22-Sepectember-4

ದಾವಣಗೆರೆ: ಶಾಲಾ ಅವಧಿಯಲ್ಲಿ ಶಿಕ್ಷಕರನ್ನು ತರಬೇತಿ, ಸಮೀಕ್ಷೆ ಇತರೆ ಕಾರ್ಯಕ್ಕೆ ನಿಯೋಜಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಶನಿವಾರ ಮಮತಾ ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಶಾಲಾ ಅವಧಿಯಲ್ಲಿ ಸೂಕ್ತ ಪರ್ಯಾಯ ವ್ಯವಸ್ಥೆ ಇಲ್ಲದೆ ಶಿಕ್ಷಕರನ್ನು ವಿವಿಧ ತರಬೇತಿ, ಸಮೀಕ್ಷೆಗೆ ನಿಯೋಜನೆ ಮಾಡಲಾಗುತ್ತಿದೆ. ಇಬ್ಬರು-ಮೂವರು ಶಿಕ್ಷಕ-ಶಿಕ್ಷಕಿಯರನ್ನು ಏಕಕಾಲಕ್ಕೆ ನಿಯೋಜನೆ ಮಾಡುವುದರಿಂದ ತರಗತಿಗಳು ನಡೆಯದೇ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಆಗುತ್ತಿದೆ. ಸರ್ಕಾರದ ಕೆಲಸಕ್ಕೆ ಅಡ್ಡಿ ಮಾಡಬೇಕು ಎಂಬ ಇಚ್ಛೆ ಯಾರಿಗೂ ಇಲ್ಲ. ಶಾಲಾ ಅವಧಿಯ ಬದಲಿಗೆ ರಜಾ ಸಂದರ್ಭ ತರಬೇತಿ, ಸಮೀಕ್ಷೆಗೆ ಸೂಕ್ತ ಎಂದು ಮಾಜಿ ಉಪಾಧ್ಯಕ್ಷ ಬಿ.ಜಿ. ಸಂಗಜ್ಜಗೌಡ್ರು
ಅಭಿಪ್ರಾಯಪಟ್ಟರು.

ತೋಳಹುಣಸೆ ಕ್ಷೇತ್ರದ ಸದಸ್ಯ ಉಮೇಶ್‌ನಾಯ್ಕ ಮಾತನಾಡಿ, ಮಧ್ಯ ವಾರ್ಷಿಕ ಪರೀಕ್ಷೆ ಒಂದು ವಾರದ ಮುನ್ನ ಶಿಕ್ಷಕರಿಗೆ ತರಬೇತಿ ನೀಡುವುದರಿಂದ ಯಾವುದೇ ಪ್ರಯೋಜನವೇ ಇಲ್ಲ. ಡಯಟ್‌ ಮತ್ತು ಶಿಕ್ಷಣ ಇಲಾಖೆಗೆ ಸಂಬಂಧವೇ ಇಲ್ಲ ಎಂಬಂತೆ ತರಬೇತಿ ಆಯೋಜಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿ ಗ್ರಾಮದಲ್ಲೂ ಇದೇ ಸಮಸ್ಯೆ ಇದೆ. ಮಕ್ಕಳಿಗೆ ತೊಂದರೆ ಆಗುವುದನ್ನು ಸರ್ಕಾರ ಪರಿಗಣಿಸಿ, ಶಾಲಾ ಅವಧಿಯಲ್ಲಿ ಯಾವುದೇ ತರಬೇತಿ, ಸಮೀಕ್ಷೆಗೆ ಶಿಕ್ಷಕರ ನಿಯೋಜನೆ ಮಾಡಬಾರದು ಎಂದು ಸರ್ವ ಸದಸ್ಯರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು.

ಅಂತಿಮವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆ ನಿರ್ಧರಿಸಿತು. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಎನ್‌. ನಾಗರಾಜ್‌, ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಹೆಚ್ಚುವರಿ ಬಸ್‌ ಸೌಲಭ್ಯ ಒದಗಿಸಬೇಕು. ಬಸ್‌ಗಳು ವಿಶ್ವವಿದ್ಯಾಲಯದತನಕ ಹೋಗದೇ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ ಎಂದು ತಿಳಿಸಿದರು.

ಅಂಡರ್‌ ಬ್ರಿಡ್ಜ್ ಬಳಿ ಬಸ್‌ ತಿರುಗಿಸಿಕೊಳ್ಳಲಿಕ್ಕೆ ಆಗುವುದಿಲ್ಲ ಎಂದು ಕೆಎಸ್ಸಾರ್ಟಿಸಿ ಸಂಚಾರ
ನಿಯಂತ್ರಕ ಈಶ್ವರಪ್ಪ ಹೇಳಿದಾಗ, ನಾನೇ ಬಸ್‌ ಓಡಿಸುತ್ತೇನೆ. ಮೊದಲು ಸಮಸ್ಯೆ ಬಗೆಹರಿಸಿ
ಎಂದು ಸೂಚಿಸಿದರು. ಭಾನುವಾರದಿಂದಲೇ ಬೆಳವನೂರುಗೆ ಬಸ್‌ ಬಿಡಬೇಕು. ಇಲ್ಲದೇ
ಹೋದರೆ ಶಿರಮಗೊಂಡನಹಳ್ಳಿಯಲ್ಲಿ ಬಸ್‌ ತಡೆಯಲಾಗುವುದು ಎಂದು ಶಿರಮಗೊಂಡನಹಳ್ಳಿ ಸದಸ್ಯ ಎಂ. ಮಂಜಪ್ಪ ಎಚ್ಚರಿಸಿದರು. ಕಾಡಜ್ಜಿ, ನಾಗನೂರು ಇತರೆ ಗ್ರಾಮಾಂತರ ಭಾಗಕ್ಕೆ ಬಸ್‌ ಸೌಲಭ್ಯಕ್ಕೆ ಸದಸ್ಯರು ಒತ್ತಾಯಿಸಿದರು. ಉಪಾಧ್ಯಕ್ಷ ಎಚ್‌.ಆರ್‌. ಮರುಳಸಿದ್ದಪ್ಪ, ಪ್ರಭಾರಕಾರ್ಯ ನಿರ್ವಹಣಾಧಿಕಾರಿ ಬಿ.ಎಂ. ದಾರುಕೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.