ಇಂಗ್ಲಿಷ್‌ ಸಾಹಿತ್ಯ ಸಮಾಜದ ವಾಸ್ತವತೆ ಸಾರಲಿ: ಪ್ರೊ| ಕಣ್ಣನ್‌

ಸಾಹಿತ್ಯಕ್ಕಿದೆ ಮನುಷ್ಯನ ಜೀವನ ಬದಲಾಯಿಸುವಂತಹ ಶಕ್ತಿ

Team Udayavani, Apr 26, 2019, 1:20 PM IST

26-April-21

ದಾವಣಗೆರೆ: ದಾವಿವಿ ಇಂಗ್ಲಿಷ್‌ ಅಧ್ಯಯನ ವಿಭಾಗ ಆಯೋಜಿಸಿರುವ ವಿಚಾರ ಸಂಕಿರಣದ ಮೊದಲ ದಿನ ಗುರುವಾರದ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ| ಎಸ್‌.ವಿ. ಹಲಸೆ ಸಂಶೋಧನಾ ಲೇಖನಗಳ ಕಿರು ಹೊತ್ತಿಗೆ ಬಿಡುಗಡೆ ಮಾಡಿದರು.

ದಾವಣಗೆರೆ: ಪ್ರಸ್ತುತ ಕಾಲಘಟ್ಟದಲ್ಲಿ ರಚನೆಯಾಗುತ್ತಿರುವ ಇಂಗ್ಲಿಷ್‌ ಸಾಹಿತ್ಯ ಸಮಾಜದ ವಾಸ್ತವತೆ ಸಾರುವಂತಿರಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ| ಪಿ. ಕಣ್ಣನ್‌ ತಿಳಿಸಿದ್ದಾರೆ.

ಗುರುವಾರ, ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್‌ ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಲಿಟ್ರೇಚರ್‌ ಇನ್‌ ಇಂಗ್ಲಿಷ್‌ -ಟ್ರೆಂಡ್ಸ್‌ ಆ್ಯಂಡ್‌ ಫಾಮ್ಸ್‌ರ್ ವಿಷಯ ಕುರಿತ ಅಂತಾರಾಷ್ಟ್ರೀಯ ಮಟ್ಟದ ಎರಡು ದಿನಗಳ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯಲ್ಲಿ ಮಾತನಾಡುವುದು ಅನಿವಾರ್ಯವಾಗಿದೆ. ಬ್ರಿಟೀಷರು ತಮ್ಮ ಭಾಷೆ ಹಾಗೂ ಸಂಸ್ಕೃತಿ ಎಲ್ಲೆಡೆ ವ್ಯಾಪಕವಾಗಿ ಹರಡಲು ಇಂಗ್ಲಿಷ್‌ ಭಾಷೆ ಚಾಲ್ತಿಗೆ ತಂದರು. ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಆ ಭಾಷೆಯ ಸಾಹಿತ್ಯದ ಅರಿವು ಸಹ ಪ್ರಮುಖವಾಗುತ್ತದೆ. ಆ ನಿಟ್ಟಿನಲ್ಲಿ ಇಂದು ರಚನೆಯಾಗುತ್ತಿರುವ ಇಂಗ್ಲಿಷ್‌ ಸಾಹಿತ್ಯ ಸಮಾಜದ ವಾಸ್ತವತೆ ಸಾರುವ ಮೂಲಕ ಯುವಜನತೆಯಲ್ಲಿ ಜಾಗೃತಿ ಮೂಡಿಸುವಂತಿರಬೇಕಿದೆ ಎಂದು ಹೇಳಿದರು. ಭಾರತದಲ್ಲಿ ಅನೇಕ ಸಾಹಿತಿಗಳು, ಕವಿಗಳು ಇಂಗ್ಲಿಷ್‌ ಸಾಹಿತ್ಯವನ್ನು ಬೆಳೆಸಿಕೊಂಡು ಬಂದಿದ್ದಾರೆ. ಅಮೇರಿಕನ್ನರು ಹಾಗೂ ಬುದ್ಧಿಜೀವಿಗಳನ್ನು ಮೆಚ್ಚಿಸಲು ಭಾರತದಲ್ಲಿ ಇಂಗ್ಲಿಷ್‌ ಸಾಹಿತ್ಯ ರಚಿಸುತ್ತಿದ್ದರೆ ವಿನಃ ಅನಕ್ಷರಸ್ಥರನ್ನು ಲೆಕ್ಕಿಸುತ್ತಿರಲಿಲ್ಲ. ಆದರೆ, ಕನ್ನಡದ ರಾಷ್ಟ್ರಕವಿ ಕುವೆಂಪುರವರು ಪಾಶ್ಚಿಮಾತ್ಯದ ಕಾವ್ಯಗಳನ್ನು ತರ್ಜುಮೆ ಮಾಡುವುದರೊಂದಿಗೆ ಅಲ್ಲಿರುವ ಸಂಸ್ಕೃತಿ ಹಾಗೂ ಭಾಷೆಯನ್ನು ಸಾಮಾನ್ಯ ಜನರಿಗೆ ತಿಳಿಸುವ ಪ್ರಯತ್ನ ಮಾಡಿದರು ಎಂದು ಅವರು ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ| ಎಸ್‌.ವಿ.ಹಲಸೆ ಮಾತನಾಡಿ, ಸಾಹಿತ್ಯಕ್ಕೆ ಮನುಷ್ಯನ ಜೀವನ ಬದಲಾಯಿಸುವಂತಹ ಶಕ್ತಿ ಇದೆ. ಸಾಹಿತ್ಯವಿಲ್ಲದೆ ಯಾವುದೇ ಕ್ಷೇತ್ರದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸಾಹಿತ್ಯದ ಅಭ್ಯಾಸದಿಂದ ನೋಡುವ ದೃಷ್ಟಿಕೋನ ಸಂಪೂರ್ಣವಾಗಿ ಬದಲಾದಲ್ಲಿ ಆಲೋಚಿಸುವ ಗುಣಮಟ್ಟವೂ ಸಹ ಬೆಳೆಯುತ್ತದೆ. ಸಾಹಿತ್ಯ ಕುರಿತು ಅನೇಕ ತಜ್ಞರು ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವ ಪ್ರೊ| ಬಸವರಾಜ ಬಣಕಾರ ಮಾತನಾಡಿ, ಆಂಗ್ಲ ಸಾಹಿತ್ಯ ಓದುವುದರಿಂದ ನಮ್ಮಲ್ಲಿನ ಕ್ರಿಯಾಶೀಲತೆ ಹೆಚ್ಚಿಸಿಕೊಳ್ಳಬಹುದು. ಆಂಗ್ಲ ಸಾಹಿತ್ಯದ ಅಧ್ಯಯನ ಜಾಗತಿಕ ಪರಿಸರದ ಅಭಿವೃದ್ಧಿಗೆ ಪ್ರಮುಖ ಕಾರಣವಾಗುತ್ತದೆ. ಆಂಗ್ಲ ಸಾಹಿತ್ಯ ಅಭ್ಯಸಿಸುವುದರಿಂದ ತಮ್ಮಲ್ಲಿರುವ ಕೌಶಲ್ಯ, ಸಾಮರ್ಥ್ಯ ವೃದ್ಧಿಯಾಗಲಿದೆ ಎಂದು ತಿಳಿಸಿದರು. ದಾವಣಗೆರೆ ವಿಶ್ವವಿದ್ಯಾನಿಲಯ ಕಲಾ ವಿಭಾಗದ ಮುಖ್ಯಸ್ಥ ಪ್ರೊ| ಬಿ.ಪಿ. ವೀರಭದ್ರಪ್ಪ, ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯ ಇಂಗ್ಲಿಷ್‌ ವಿಭಾಗದ ಪ್ರಾಧ್ಯಾಪಕ ಪ್ರೊ. ವಿ. ಎಫ್‌ ನಾಗಣ್ಣನವರ್‌ ಮತ್ತು ವಿಎಚ್ಎನ್‌ಎಸ್‌ಎನ್‌ ಕಾಲೇಜ್‌ನ ಇಂಗ್ಲಿಷ್‌ ವಿಭಾಗದ ಪ್ರಾಧ್ಯಾಪಕ ಪ್ರೊ| ಸ್ಯಾಮ್ಯುಯೆಲ್ ಕಿರುಬಕರ್‌ ಉಪಸ್ಥಿತರಿದ್ದರು.

ನಾಗರಿಕತೆ ಕಲಿಸಿದ ಇಂಗ್ಲಿಷ್‌
ಜಗತ್ತಿನೊಂದಿಗೆ ಸ್ಪರ್ಧಿಸಲು ಇಂಗ್ಲಿಷ್‌ ಭಾಷೆ ಜ್ಞಾನ ಅತ್ಯಗತ್ಯವೇ ಹೊರತು ಅದೇ ಜೀವನವಲ್ಲ. ಇಂಗ್ಲಿಷ್‌ ಭಾಷೆ ನಮಗೆ ನಾಗರಿಕತೆ ಕಲಿಸಿದೆ. ಬ್ರಿಟೀಷರು ರಾಜ್ಯಭಾರ ನಡೆಸಿರೋ ಪ್ರತಿಯೊಂದು ದೇಶದ ಪದಗಳನ್ನು ಅಳವಡಿಸಿಕೊಂಡು ಇಂಗ್ಲೀಷ್‌ ಭಾಷೆ ವಿಶ್ವದಾದ್ಯಂತ ಹೆಮ್ಮರವಾಗಿ ಬೆಳೆಯುತ್ತಿದೆ. ನಾವು ಇಂದು ನಮ್ಮ ಸಂಸ್ಕೃತಿ ಮರೆತು ಅವರ ಸಂಸ್ಕೃತಿಗೆ ಹೆಚ್ಚು ಪ್ರಭಾವಿತರಾಗಿದ್ದೇವೆ.
•ಪ್ರೊ| ಪಿ. ಕಣ್ಣನ್‌,
ದಾವಿವಿ ಕುಲಸಚಿವ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.