ಪರಿಸರ ರಕ್ಷಣೆ ನಮ್ಮ ಆದ್ಯ ಕರ್ತವ್ಯ


Team Udayavani, Jun 6, 2019, 10:06 AM IST

06-June-4

ದಾವಣಗೆರೆ: ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಟ್ಟ ಸಂದರ್ಭ.

ದಾವಣಗೆರೆ: ವಾಯುಮಾಲಿನ್ಯದ ಪ್ರಮಾಣದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೇ ವಿಶ್ವ ಪರಿಸರ ದಿನದ ಮೂಲ ಮತ್ತು ಮುಖ್ಯ ಉದ್ದೇಶ ಎಂದು ಜಿಲ್ಲಾ ಪರಿಸರ ಅಧಿಕಾರಿ ಕೆ.ಬಿ. ಕೊಟ್ರೇಶ್‌ ತಿಳಿಸಿದ್ದಾರೆ.

ಬುಧವಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಸಂರಕ್ಷಣಾ ವೇದಿಕೆ, ವಿಜ್ಞಾನ ಪರಿಷತ್‌, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ವಿಶ್ವೇಶ್ವರಯ್ಯ ಉದ್ಯಾನವನದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯಲ್ಲಿ ಮಾತನಾಡಿದ ಅವರು, ಪರಿಸರದ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಮಾತ್ರವಲ್ಲ, ಆದ್ಯ ಕರ್ತವ್ಯವೂ ಹೌದು ಎಂದರು.

ಪ್ರತಿ ನಿತ್ಯ ವಾಹನಗಳ ಬಳಕೆಯಿಂದಾಗಿ ಶೇ. 40ರಷ್ಟು ವಾಯುಮಾಲಿನ್ಯ ಉಂಟಾಗುತ್ತದೆ. ಅಗತ್ಯಕ್ಕೆ ಅನುಗುಣವಾಗಿ ವಾಹನಗಳ ಬಳಕೆ ಮಾಡುವ ಮೂಲಕ ವಾಯುಮಾಲಿನ್ಯ ತಡೆಗಟ್ಟುವಂತಾಗಬೇಕು. ಇಲ್ಲದೇ ಹೋದಲ್ಲಿ ಮುಂಬರುವ ಗಂಭೀರ ಪರಿಸ್ಥಿತಿ ಎದುರಿಸಬೇಕಾದೀತು ಎಂದು ತಿಳಿಸಿದರು.

ರಸ್ತೆಯಲ್ಲಿನ ಧೂಳು ಆರೋಗ್ಯದ ಮೇಲೆ ಸಾಕಷ್ಟು ದುಷ್ಪ‌ರಿಣಾಮ ಉಂಟು ಮಾಡುತ್ತದೆ. ರಸ್ತೆಯ ಅಕ್ಕಪಕ್ಕದ ಕಸ ಮತ್ತು ಮನೆಯಲ್ಲಿನ ತ್ಯಾಜ್ಯಗಳನ್ನು ಕ್ರೋಡೀಕರಿಸಿಕೊಂಡು ಹೊರಗಡೆ ಸಾಗಿಸಬೇಕು. ಚರಂಡಿ ಸ್ವಚ್ಛಗೊಳಿಸಬೇಕು. ಆಧುನಿಕ ತಂತ್ರಜ್ಞಾನದ ಮೂಲಕ ಕಾರ್ಖಾನೆಗಳಿಂದ ಬರುವ ಹೊಗೆಯನ್ನು ಶುದ್ಧೀಕರಿಸಿ, ಹೊರಗಡೆ ಬಿಡುವಂತೆ ಆಗಬೇಕು ಎಂದು ತಿಳಿಸಿದರು.

ಜೆ.ಎಚ್. ಪಟೇಲ್ ಕಾಲೇಜು ಕಾರ್ಯದರ್ಶಿ ದೊಗ್ಗಳ್ಳಿ ಗೌಡ್ರು ಪುಟ್ಟರಾಜು ಮಾತನಾಡಿ, ಹಿಂದಿನ ಕಾಲದಿಂದ ಉಡುಗೊರೆಯಾಗಿ ಬಂದಿರುವಂತಹ ಉತ್ತಮ ಪರಿಸರವನ್ನು ಉಳಿಸಿಕೊಂಡು ಹೋಗುವುದಕ್ಕೆ ಆಗುತ್ತಿಲ್ಲ. ಪರಿಸರ ಉಳಿವಿನ ಬಗ್ಗೆ ಹಿರಿಯರು ಚಿಂತನೆ ಮಾಡಬೇಕು. ನಮ್ಮ ಮುಂದಿನ ಯುವ ಪೀಳಿಗೆಗೆ ಪರಿಸರವೇ ಇಲ್ಲದಂತೆ ನಾಶ ಮಾಡಲಾಗುತ್ತಿದೆ. ಮಕ್ಕಳು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಆಶಿಸಿದರು.

ವಿಜ್ಞಾನ ಪರಿಷತ್‌ ಜಿಲ್ಲಾ ಅಧ್ಯಕ್ಷ ಡಾ|ಬಿ.ಇ. ರಂಗಸ್ವಾಮಿ ಮಾತನಾಡಿ, 1972ರಲ್ಲಿ ಯೂರೋಪ್‌ನಲ್ಲಿ ಪರಿಸರ ಕುರಿತು 143 ದೇಶಗಳ ಸಭೆಯಲ್ಲಿ ಪರಿಸರ ದಿನಾಚರಣೆಯ ತೀರ್ಮಾನ ಕೈಗೊಳ್ಳಲಾಯಿತು. 1974ರ ಜೂ.5ರಂದು ವಿಶ್ವ ಪರಿಸರ ದಿನಾಚರಣೆ ಆಚರಣೆೆ ಪ್ರಾರಂಭವಾಗಿದೆ. 1987ರಿಂದ ಪ್ರತಿ ವಿಶ್ವ ಪರಿಸರ ದಿನಾಚರಣೆ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ವರ್ಷ ವಿವಿಧ ದೇಶಗಳಲ್ಲಿ 5 ಲಕ್ಷ ಮಕ್ಕಳು ವಾಯುಮಾಲಿನ್ಯದಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಭಾರತದಲ್ಲಿ ಶೇ.15ರಷ್ಟು ಒಳಾಂಗಣ, ಶೇ.35ರಷ್ಟು ಹೊರಾಂಗಣದ ವಾಯುಮಾಲಿನ್ಯಕ್ಕೆ ಒಳಗಾಗುತ್ತಿದ್ದಾರೆ. ಮಕ್ಕಳಿಗೆ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.

ಪರಿಸರ ಪ್ರೇಮಿ ಕೆ.ಟಿ. ಗೋಪಾಲಗೌಡರು ಮಾತನಾಡಿ, ವಾಹನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಶುದ್ಧಗಾಳಿ ಪಡೆಯುವುದಕ್ಕಾಗಿ ಹೆಚ್ಚಾಗಿ ಗಿಡ-ಮರಗಳನ್ನ ಬೆಳೆಸಬೇಕು. ಮರಗಳನ್ನು ಕಡಿಯುವ ಬದಲು ಬೆಳೆಸುವ ಕಾರ್ಯ ಮಾಡಬೇಕು ಎಂದು ಮನವಿ ಮಾಡಿದರು.

ಪತ್ರಕರ್ತ ಎಂ.ಬಿ. ನವೀನ್‌ ಮಾತನಾಡಿ, ಪರಿಸರದ ಅಸ್ತಿತ್ವವಿಲ್ಲದೆ ಯಾರ ಅಸ್ತಿತ್ವವೂ ಇಲ್ಲ. ಪರಿಸರ ದಿನಾಚರಣೆ ಎನ್ನುವುದು ಒಂದು ದಿನಕ್ಕೆ ಸೀಮಿತವಾಗದೆ ನಿತ್ಯದ ಕಾಯಕವಾದಾಗ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಗಿರೀಶ್‌ ಎಸ್‌. ದೇವರಮನೆ, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಬೆಳಕೆರೆ, ಅಮೃತ ಯುವಕ ಸಂಘದ ಅಧ್ಯಕ್ಷ ಆರ್‌.ಬಿ.ಹನುಮಂತಪ್ಪ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗಭೂಷಣ್‌, ಡಾ| ಪಿ.ಎಸ್‌.ಅಶ್ವಿ‌ನ್‌, ನಾಗರಾಜ್‌ ಭಾನುವಳ್ಳಿ, ವಿಜ್ಞಾನ ಪರಿಷತ್‌ ಕಾರ್ಯದರ್ಶಿ ಎಂ. ಗುರುಸಿದ್ದಸ್ವಾಮಿ ಇತರರು ಇದ್ದರು. 180ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.