- Friday 06 Dec 2019
ಕಾಪಾಡಬೇಕಿದೆ ಜನಸಂಖ್ಯಾ ಸಮತೋಲನ
ವಿಶ್ವ ಜನಸಂಖ್ಯಾ ದಿನಾಚರಣೆ•ಮಾನವ ಸಂಪನ್ಮೂಲ ಸದ್ಬಳಕೆಯಾಗಲಿ•ಜಾಗೃತಿ ಅಗತ್ಯ
Team Udayavani, Jul 12, 2019, 10:14 AM IST
ದಾವಣಗೆರೆ: ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ.
ದಾವಣಗೆರೆ: ಉತ್ತಮ ಶಿಕ್ಷಣ ಮತ್ತು ಬಡತನ ನಿರ್ಮೂಲನೆ ಮೂಲಕ ಜನಸಂಖ್ಯಾ ಸಮತೋಲನ ಕಾಪಾಡಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಬಸವರಾಜ್ ಅಭಿಪ್ರಾಯಪಟ್ಟರು.
ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಕೊರತೆ ಮತ್ತು ಬಡತನವೇ ಜನಸಂಖ್ಯಾ ಸ್ಫೊಧೀಟಕ್ಕೆ ಮುಖ್ಯ ಕಾರಣ ಎಂದರು.
ಬಡವರ್ಗದವರು ಸಹ ತಾವು ಎಲ್ಲರಿಗಿಂತ ಉನ್ನತವಾಗಿ, ಘನತೆಯಿಂದ ಬದುಕಬೇಕೆಂಬ ಮನೋಭಾವ ಹೊಂದಿದ್ದು ತಮ್ಮ ಮಕ್ಕಳನ್ನು ಕಾನ್ವೆಂಟ್ಗಳಿಗೆ ಕಳುಹಿಸುತ್ತಿದ್ದಾರೆ. ಕಾನ್ವೆಂಟ್ಗಳಲ್ಲಿನ ದುಬಾರಿ ಡೊನೇಷನ್, ಫೀ ನೋಡಿ ಕಡಿಮೆ ಮಕ್ಕಳನ್ನು ಮಾಡಿಕೊಳ್ಳುತ್ತಿದ್ದಾರೆ. ಕಾನ್ವೆಂಟ್ ಶಿಕ್ಷಣ ಕೂಡ ಜನಸಂಖ್ಯಾ ನಿಯಂತ್ರಣಕ್ಕೆ ಪರೋಕ್ಷವಾಗಿ ಕಾರಣವಾಗುತ್ತಿದೆ. ಇದು ಆರೋಗ್ಯಕರ ಬೆಳವಣಿಗೆ ಅಲ್ಲದಿದ್ದರೂ, ಜನಸಂಖ್ಯೆ ನಿಯಂತ್ರಣದಲ್ಲಿ ಪಾತ್ರ ವಹಿಸಿದೆ ಎಂದರು.
ಗುಣಾತ್ಮಕತೆಯಿಂದ ಕೂಡಿದ ಜನಸಂಖ್ಯೆ ಕೆಟ್ಟದ್ದಲ್ಲ. ಆದರೆ, ನಮ್ಮಲ್ಲಿನ ಮಾನವ ಸಂಪನ್ಮೂಲ ಸರಿಯಾದ ರೀತಿಯಲ್ಲಿ ಬಳಕೆ ಆಗಬೇಕು. ಜನಸಂಖ್ಯಾ ಸಮತೋಲನ ಕಾಪಾಡಿಕೊಳ್ಳಬೇಕಿದೆ. ಭಾರತ ಇಡೀ ಜಗತ್ತಿಗೇ ಜನಸಂಖ್ಯೆಯನ್ನು ರಫ್ತು ಮಾಡುತ್ತಿದೆ. ಉತ್ತಮ ಇಂಜಿನಿಯರ್, ವೈದ್ಯರು, ಕುಶಲಕರ್ಮಿಗಳನ್ನು ನಾವು ವಿವಿಧ ದೇಶಗಳಿಗೆ ರಫ್ತು ಮಾಡುವ ಮೂಲಕ ಗುಣಮಟ್ಟದ ಸಂಪನ್ಮೂಲವನ್ನು ನೀಡುತ್ತಿದ್ದೇವೆ. ಆದ್ದರಿಂದಲೇ ಅನೇಕ ಕಡೆ ಕೇವಲ ತಂದೆ-ತಾಯಿಗಳು ಮನೆಯಲ್ಲಿರುತ್ತಾರೆ. ಮಕ್ಕಳೆಲ್ಲಿ ಎಂದು ಕೇಳಿದರೆ, ಅಮೇರಿಕಾ, ಇಂಗ್ಲೆಂಡ್ ಹೋಗಿದ್ದಾರೆಂದು ಹೇಳುತ್ತಾರೆ. ಇದೇ ಪರಿಸ್ಥಿತಿ ಮುಂದುವರೆಯುತ್ತಾ ಹೋದರೆ ಮುಂದೊಂದು ದಿನ ಭಾರತ ದೇಶ ವೃದ್ಧಾಶ್ರಮ ಆಗುವುದರಲ್ಲಿ ಸಂಶಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರ ಯುವಜನತೆಗೆ ಉತ್ತಮ ಸವಲತ್ತುಗಳು, ಉದ್ಯೋಗಾವಕಾಶ ನೀಡಿ ಇಲ್ಲಿಯೇ ನಮ್ಮ ನೆಲದ ನೈಸರ್ಗಿಕ ಸಂಪನ್ಮೂಲ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕಿದೆ. ಸರ್ವರಿಗೂ ಶಿಕ್ಷಣ, ಬಡತನ ನಿರ್ಮೂಲನಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ| ತು.ಕ. ಶಂಕರಯ್ಯ ಮಾತನಾಡಿ, ವಿದ್ಯಾರ್ಥಿಗಳೇ ದೇಶದ ಸರ್ವತೋಮುಖ ಬೆಳವಣಿಗೆಯ ರಾಯಭಾರಿಗಳು. 1930 ರಲ್ಲಿ ದ.ರಾ. ಬೇಂದ್ರೆಯವರು ಮಕ್ಕಳಿರಲವ್ವ 33 ಕೋಟಿ ಎನ್ನುತ್ತಿದ್ದರು. ಆದರೆ, ಈಗ ಸಂಖ್ಯೆ ಮಿತಿ ಮೀರಿದೆ. ಮಿತಿಯಿಲ್ಲದ ಜನಸಂಖ್ಯೆಯಿಂದ ಅಭಿವೃದ್ಧಿ ಕುಂಠಿತವಾಗುತ್ತದೆ. ಅನೇಕ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಎಲ್ಲರಲ್ಲೂ ಜನಸಂಖ್ಯಾ ನಿಯಂತ್ರಣದ ಕುರಿತು ತಿಳಿವಳಿಕೆ ಹೆಚ್ಚಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್.ತ್ರಿಪುಲಾಂಭ ಮಾತನಾಡಿ, ಜನಸಂಖ್ಯೆ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಪಾತ್ರ ಮುಖ್ಯ. ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಒದಗಿಸಲಾಗುತ್ತಿರುವ ಜನನ ನಿಯಂತ್ರಣ ಮಾರ್ಗಗಳನ್ನು ಅನುಸರಿಸುವ ಮೂಲಕ ಜನಸಂಖ್ಯೆ ನಿಯಂತ್ರಣಕ್ಕೆ ಸಹರಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ| ಯು. ಸಿದ್ದೇಶಿ, ಆರ್ಸಿಎಚ್ಒ ಡಾ| ಶಿವಕುಮಾರ್, ಡಾ| ಎಸ್.ಮೀನಾಕ್ಷಿ, ಡಾ| ಮುರಳೀಧರ, ಡಾ| ವೆಂಕಟೇಶ್ ಇತರರು ಇದ್ದರು. ರಾಚಪ್ಪ ಕುಪ್ಪಸ್ತ ಸ್ವಾಗತಿಸಿದರು. ಡಾ| ಗಂಗಾಧರ ಹಿರೇಮಠ ನಿರೂಪಿಸಿದರು. ಆನಂದಮೂರ್ತಿ ವಂದಿಸಿದರು
ಈ ವಿಭಾಗದಿಂದ ಇನ್ನಷ್ಟು
-
ಹೆಬ್ರಿ: ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ ಹಾಗೂ ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಕಳೆದ 10 ತಿಂಗಳಿನಿಂದ ಸುಮಾರು 600 ಫಲಾನುಭವಿಗಳಿಗೆ ಮಾಸಾಶನ ಬಾರದೆ ಆತಂಕಕ್ಕೀಡಾಗಿದ್ದಾರೆ. ವೃದ್ಧಾಪ್ಯ,...
-
19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ...
-
ಉಡುಪಿ: ಜಿಲ್ಲೆಯಲ್ಲಿ ಈ ಬಾರಿ ಸುರಿದ ಮಳೆಗೆ ಮುಂಗಾರು ಹಂಗಾಮಿನಲ್ಲಿ ಖಾರಿಫ್ನ ಭತ್ತದ ಇಳುವರಿಯೂ ಚೆನ್ನಾಗಿದೆ. ಅದೇ ಹುಮ್ಮಸ್ಸಿನಲ್ಲಿ ರೈತರು ಈಗ ಹಿಂಗಾರು ಹಂಗಾಮಿಗೆ...
-
ಸುಬ್ರಹ್ಮಣ್ಯ : ಮಲೆನಾಡು ಭಾಗದಲ್ಲಿ ರೈತರ ಬೆಳೆ ನಾಶ ಮಾಡಿ ಆರ್ಥಿಕ ಸಂಕಷ್ಟ ತಂದೊಡ್ಡುವ ಮಂಗಗಳ ಹಾವಳಿ ಬೇಸಿಗೆ ಆರಂಭದಲ್ಲೆ ಯಥೇತ್ಛವಾಗಿ ಕಾಡುತ್ತಿದೆ. ರೈತರ...
-
ಕುಂದಾಪುರ: ಕರಾವಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ಗೇಟ್ಗಳು ತೀರಾ ಸನಿಹದಲ್ಲಿದ್ದು, ಫಾಸ್ಟಾಗ್ ಮೂಲಕ ಸುಂಕ ವಸೂಲು ಮಾಡಿದರೆ ಹೊರೆಯಾಗಲಿದೆ. ಆದ್ದರಿಂದ...
ಹೊಸ ಸೇರ್ಪಡೆ
-
ಸುಮಾರು ನಾಲ್ಕೈದು ದಶಕಗಳ ಹಿಂದೆ ವೇಷಗಳ ಹಿಂಭಾಗದಲ್ಲಿ ಪಾಕು ಸೀರೆಯನ್ನು ಕಟ್ಟುವ ಕ್ರಮ ಇದ್ದಂತಿಲ್ಲ. ಕಿರೀಟ ವೇಷಗಳಿಗೆ ಕಿರೀಟದ ಕೆಳಭಾಗಕ್ಕೆ ಕಟ್ಟಿದ ಚೌರಿ...
-
ದಿ ಲೀಡರ್ ಒಂದು ಅಸಂಗತ ನಾಟಕ . ರೊಮೇನಿಯಾದ ಲೇಖಕ ಯುಜಿನೊ ಐನೆಸ್ಕೊ ಈ ನಾಟಕದ ಕತೃ. 1953ರಲ್ಲಿ ಬರೆದ ನಾಟಕವಿದು. ದೇಶ , ಕಾಲದ ಹಂಗಿಲ್ಲದೆ ನಿರಂತರವಾಗಿ ಹರಿಯುವ ಸೆಳೆತವೇ...
-
ಕಲಾವಿದನಾಗಿ, ಸಂಘಟಕನಾಗಿ ಯಕ್ಷಗಾನದ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ಚಿರಪರಿಚಿತರಾಗಿದ್ದ ಕಜೆ ಈಶ್ವರ ಭಟ್ಟರು 89ರ ಹರೆಯದಲ್ಲಿ ನಮ್ಮನ್ನು ಅಗಲಿದ್ದಾರೆ....
-
ಸನ್ನಿಧಿ ಟಿ.ರೈ ಪೆರ್ಲ ರಚಿಸಿದ ಎರಡನೇ ಯಕ್ಷಗಾನ ಪ್ರಸಂಗ ಸೂರ್ಯಪ್ರಭೆ. ಕತೆಯೊಂದರ ಆಧಾರದಲ್ಲಿ ರಚಿತವಾದ ಪುಟ್ಟ ಯಕ್ಷಗಾನ ಕೃತಿ ಇದು. ಇದರಲ್ಲಿ ಬರುವ ಪಾತ್ರಗಳು...
-
ನಡುತಿಟ್ಟು ಪರಂಪರೆಯ ಹಿರಿಯ ಸ್ತ್ರೀವೇಷದಾರಿ ಮೊಳಹಳ್ಳಿ ಕೃಷ್ಣ ನಾಯ್ಕರಿಗೆ ಅವರ ಹುಟ್ಟೂರು ಮೊಳಹಳ್ಳಿಯಲ್ಲಿ ಹುಟ್ಟೂರ ಅಭಿಮಾನಿಗಳು ಡಿ.7ರಂದು ಸಾರ್ವಜನಿಕ...