ಯೋಗಮಯಿಗಳಾಗಿ ಆರೋಗ್ಯವಂತರಾಗಿ

ವಿಶ್ವ ಯೋಗ ದಿನಾಚರಣೆ•ಸಾವಿರಾರು ಯೋಗಾಸಕ್ತರು ಭಾಗಿ•ಸಾಮೂಹಿಕ ಯೋಗಾಭ್ಯಾಸ

Team Udayavani, Jun 22, 2019, 9:56 AM IST

22–June-3

ದಾವಣಗೆರೆ: ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ನಗರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಯೋಗಾಸಕ್ತರು ಭಾಗವಹಿಸಿ ಸಾಮೂಹಿಕವಾಗಿ ಯೋಗ ಮಾಡಿದರು.

ದಾವಣಗೆರೆ: ಮೋಡ ಮುಸುಕಿದ ವಾತಾರಣ… ಮಳೆಯ ಸಿಂಚನದ ಮುನ್ಸೂಚನೆ… ಬೀಸುತ್ತಿದ್ದ ತಂಗಾಳಿ… ಆಹ್ಲಾದಕರ ವಾತಾವರಣ…, ಮೈ-ಮನ ರೋಮಾಂಚನ ಉಂಟು ಮಾಡುವಂತೆ ಏಕಮುಖೇನ ಕೇಳಿ ಬಂದ ಓಂಕಾರ…ಏಕ ಕಾಲಕ್ಕೆ ಸಾವಿರಾರು ಯೋಗಬಂಧುಗಳಿಂದ ವಿವಿಧ ಆಸನಗಳ ಯೋಗ ಪ್ರದರ್ಶನ… ಜಗತ್ತಿಗೆ ಯೋಗದ ಸಂದೇಶ ಸಾರುವ ಸ್ತುತ್ಯಾರ್ಹ ಪ್ರಯತ್ನ…

ಇಂತಹ ಯೋಗಮಯ ವಾತಾವರಣ ಕಂಡು ಬಂದಿದ್ದು ಶುಕ್ರವಾರ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಆಯುಷ್‌, ಪೊಲೀಸ್‌, ಸಾರ್ವಜನಿಕ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಜಿಲ್ಲಾ ವರದಿಗಾರರ ಕೂಟ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪತಂಜಲಿ ಯೋಗ ಸಮಿತಿ ಮತ್ತು ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಆಶ್ರಯದಲ್ಲಿ ಏರ್ಪಡಿಸಿದ್ದ 5ನೇ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮ ಎಲ್ಲರಲ್ಲೂ ಯೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.

ಮಹತ್ತರ ಮತ್ತು ಮಹತ್ವದ ಯೋಗ ದಿನಕ್ಕೆ ಮುನ್ನುಡಿ ಬರೆದಿದ್ದು 89ರ ಹರೆಯದ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳು. ಸ್ವತಃ ಯೋಗಪಟುವಾಗಿರುವ ಪೇಜಾವರ ಶ್ರೀಗಳು ಯೋಗದ ಕೆಲ ಆಸನ ಪ್ರದರ್ಶನ ಮಾಡುವರು ಎಂಬ ನಿರೀಕ್ಷೆ ಇತ್ತು. ಆದರೆ. ಕೆಲ ಕಾರಣದಿಂದ ಪ್ರದರ್ಶನ ನೀಡದೇ ಇದ್ದರೂ ಯೋಗದ ಮಹತ್ವದ ಬಗ್ಗೆ ಸಂದೇಶ ನೀಡಿದರು. ಎಲ್ಲರೂ ಯೋಗಮಯಿಗಳಾಗಿ ಆರೋಗ್ಯವಂತ ಜೀವನ ನಡೆಸುವಂತೆ ಮನದುಂಬಿ ಆಶೀರ್ವದಿಸಿದರು.

ಕನ್ನಡ ಮಾಧ್ಯಮ ಖ್ಯಾತಿಯ ಬೆಂಗಳೂರಿನ ವೈದ್ಯಶ್ರೀ ಚನ್ನಬಸವಣ್ಣ ಯೋಗದ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಯೋಗಬಂಧುಗಳು ಸಾಮೂಹಿಕವಾಗಿ ಯೋಗ ಪ್ರದರ್ಶನದ ಮೂಲಕ ಗಮನ ಸೆಳೆದರು.

ಮಲಬದ್ಧತೆ ಒಳಗೊಂಡಂತೆ ಅನೇಕ ಆರೋಗ್ಯ ಸಮಸ್ಯೆಗೆ ನಿವಾರಣೆಗೆ ಮೂಲವಾಗಿರುವ ತಾಡಾಸನ, ಥೈರಾಯ್ಡ ಸಮಸ್ಯೆ ದೂರ ಮಾಡಲು ಸಹಾಯಕಾರಿಯಾಗುವ ಅರ್ಧ ಚಕ್ರಾಸನ, ಶ್ವಾಸಕೋಶದ ಕ್ರಿಯಾಶೀಲತೆ ಹೆಚ್ಚಿಸುವ ಅರ್ಧ ಉಚ್ಛಾಸನ, ಮಹಿಳೆಯರಲ್ಲಿ ಕಂಡು ಬರುವ ಗರ್ಭಕೋಶ ಸಮಸ್ಯೆ ನಿವಾರಣೆ ಮಾಡುವ ಬದ್ಧ ಕೋನಾಸನ, ಜೀರ್ಣಾಂಗ ಇತರೆ ಒಳ ಅಂಗಗಳ ಕಾರ್ಯಕ್ಷಮತೆ ಹೆಚ್ಚಿಸುವ ವಕ್ರಾಸನ, ಬೆನ್ನುನೋವುಳ್ಳವರಿಗೆ ರಾಮಬಾಣದಂತಿರುವ ಸೇತುಬಂಧಾಸನ, ನರವ್ಯೂಹದ ಚಲನಶೀಲತೆಗೆ ಕಾರಣವಾಗುವ ಮಕರಾಸನ, ಭುಜಂಗಾಸನ, ಶಲಭಾಸನ, ಉತ್ಥಾನಾಸನ, ಸಮಾನ, ಅಪಾನ, ಪ್ರಾಣ ಮುದ್ರೆ, ಪ್ರಾಣಾಯಾಮ…ದ ಪ್ರಾತ್ಯಕ್ಷಿಕೆ ನಡೆಯಿತು.

ಪ್ರಾತ್ಯಕ್ಷಿಕೆ ಕೊನೆಯಲ್ಲಿ ಸುಗಮ ಸಂಗೀತದಲ್ಲಿ ತಮ್ಮದೇ ಛಾಪು ಮೂಡಿಸಿರುವ ಡಾ| ಸಿ. ಅಶ್ವತ್‌ರವರ , ನೂರು ದೇವರುಗಳ ನೂಕಾಚೆ ದೂರ…. ಎಂಬ ಹಾಡಿಗೆ ಎಲ್ಲರೂ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಬಸವರಾಜ್‌, ಮಾಜಿ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು, ಮಾಜಿ ಉಪಾಧ್ಯಕ್ಷೆ ಗೀತಾ ಗಂಗಾಧರನಾಯ್ಕ, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ಬಿ.ಸಿ. ಉಮಾಪತಿ, ಪ್ರಧಾನ ಕಾರ್ಯದರ್ಶಿ ಎನ್‌. ವಾಸುದೇವರಾಯ್ಕರ್‌, ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಎಚ್.ಬಸವರಾಜೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಆರ್‌. ಪರಮೇಶ್ವರಪ್ಪ ಹಾಗೂ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌, ವಿಧಾನ ಪರಿಷತ್‌ ಮಾಜಿ ಮುಖ್ಯ ಸಚೇತಕ ಡಾ| ಎ.ಎಚ್. ಶಿವಯೋಗಿಸ್ವಾಮಿ ಇತರರು ವೈದ್ಯಶ್ರೀ ಚನ್ನಬಸವಣ್ಣನವರಿಗೆ ಸಾಥ್‌ ನೀಡುವ ಮೂಲಕ ಯೋಗ ದಿನದ ಸಾರ್ಥಕತೆ ಹೆಚ್ಚಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.