ಬೀರೇಶ್ವರ ದೇವಸ್ಥಾನ ಜಾಗ ಕಬಳಿಕೆ ಆರೋಪ ಸುಳ್ಳು

ಶ್ರೀ ಬೀರೇಶ್ವರ ದೇವಸ್ಥಾನ ಪುರಾತನವಾದದ್ದಲ್ಲ-1958ರ ನಂತರ ಕಟ್ಟಿಸಿದ್ದು ಮುಜರಾಯಿ ಇಲಾಖೆ ದೇವಾಲಯ ಇದು

Team Udayavani, Jul 12, 2019, 4:39 PM IST

12-JUly-39

ದಾವಣಗೆರೆ: ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ ಪದಾಧಿಕಾರಿಗಳ ಸುದ್ದಿಗೋಷ್ಠಿ.

ದಾವಣಗೆರೆ: ಹಳೆ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಶ್ರೀ ಬೀರೇಶ್ವರ ದೇವಸ್ಥಾನದ ಜಾಗವನ್ನು ಮಾಜಿ ಶಾಸಕ ಕೆ. ಮಲ್ಲಪ್ಪ ಕಬಳಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಪೂಜಾರ ವಂಶಸ್ಥರು ಮಾಡಿರುವಂತಹ ಆರೋಪ ಸತ್ಯಕ್ಕೆ ದೂರವಾದ ವಿಚಾರ ಎಂದು ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಕೆಂಗೋ ಹನುಮಂತಪ್ಪ ತಿಳಿಸಿದ್ದಾರೆ.

ಮಾಜಿ ಶಾಸಕ ಕೆ.ಮಲ್ಲಪ್ಪ ಅವರು ಅಭಿವೃದ್ಧಿ ಟ್ರಸ್ಟ್‌ ಮಾಡದೇ ಹೋಗಿದ್ದರೆ ಇಷ್ಟೊತ್ತಿಗೆ ದೇವಸ್ಥಾನದ ಜಾಗ ಯಾರ ಯಾರೋ ಪಾಲಾಗುತ್ತಿತ್ತು. ಅವರು ಟ್ರಸ್ಟ್‌ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮಳಿಗೆಗಳ ಬಾಡಿಗೆಯನ್ನೂ ಯಾರೂ ಸಹ ದುರುಪಯೋಗಪಡಿಸಿಕೊಂಡಿಲ್ಲ. ಪೂಜಾರ್‌ ವಂಶಸ್ಥರ ಆರೋಪದಲ್ಲಿ ಯಾವುದೇ ಹುರುಳು ಇಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪೂಜಾರ್‌ ವಂಶಸ್ಥರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿರುವಂತೆ ತಲ ತಲಾಂತರದಿಂದ ಪೂಜಾರಿಕೆ ಮಾಡಿಕೊಂಡು ಬರುತ್ತಿಲ್ಲ. 1958ರ ಈಚೆಗೆ ದೇವಸ್ಥಾನ ಕಟ್ಟಿಸಿದ ಮೇಲೆಯೇ ಮಾಜಿ ಶಾಸಕ ಕೆ. ಮಲ್ಲಪ್ಪ ಅವರೇ ಪೂಜಾರ್‌ ವಂಶಸ್ಥರಿಗೆ ದೇವಸ್ಥಾನದ ಪೂಜೆ, ದೇವಸ್ಥಾನ ಹಿಂಭಾಗದಲ್ಲೇ ಮನೆ ಕಟ್ಟಿಕೊಂಡು ಜೀವನ ಮಾಡಿಕೊಂಡು ಹೋಗುವ ಅವಕಾಶ ಮಾಡಿಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಜಾಗ ಕಬಳಿಸುವ ಯತ್ನ ನಡೆಸಿಲ್ಲ. ಯಾರು ಸಹಾಯ ಮಾಡಿದ್ದಾರೋ ಅವರ ಮೇಲೆಯೇ ಆರೋಪ ಮಾಡುವುದು ಅತ್ಯಂತ ಖಂಡನೀಯ. ಇಡೀ ಸಮಾಜ ಕೆ. ಮಲ್ಲಪ್ಪ ವಿರುದ್ಧ ಮಾಡಿರುವ ಆರೋಪವನ್ನು ಖಂಡಿಸುತ್ತದೆ ಎಂದು ತಿಳಿಸಿದರು.

ಪೂಜಾರ್‌ ವಂಶಸ್ಥರಿಗೆ ದೇವಸ್ಥಾನದ ಪೂಜೆ ಮಾಡಿಕೊಂಡು ಹೋಗಲು ಮಾತ್ರವೇ ಅವಕಾಶ ಇದೆ. ಮೇಲಾಗಿ ಶ್ರೀ ಬೀರೇಶ್ವರ ದೇವಸ್ಥಾನ ಮುಜುರಾಯಿ ಇಲಾಖೆಗೆ ಸೇರಿರುವಾಗ ಜಾಗ ನಮ್ಮದು ಎಂದು ಹೇಳಲಿಕ್ಕೂ ಬರುವುದೇ ಇಲ್ಲ. ಹಾಗೇನಾದರೂ ಇದ್ದರೆ ಕಾನೂನು ಮೂಲಕ ಪಡೆದುಕೊಳ್ಳಲಿಕ್ಕೆ ಯಾರೂ ಬೇಡ ಅನ್ನುವುದಿಲ್ಲ. ಈಗಿರುವ ಪೂಜಾರಿ ಅವರನ್ನ ವಜಾ ಮಾಡಬೇಕು ಎಂದು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್‌ ಅವರಿಗೆ ಮನವಿ ಸಹ ಮಾಡಲಾಗಿದೆ. ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

2012ರಲ್ಲಿ ಶ್ರೀ ಬೀರೇಶ್ವರ ದೇವಸ್ಥಾನದ ಜಾಗ ಉಳಿಸಿಕೊಳ್ಳಲು ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ ಮಾಡಿಕೊಂಡು ಹೋರಾಟ ಮಾಡಿದ ಸಂದರ್ಭ ಒಳಗೊಂಡಂತೆ ಒಮ್ಮೆಯೂ ಪೂಜಾರ್‌ ವಂಶಸ್ಥರು ಜಾಗ ನಮ್ಮದು ಎಂದು ಹೇಳಿಲ್ಲ. ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ನವರನ್ನೂ ಕೇಳಿಲ್ಲ. ನಾವು ಸಹ ಅವರಿಗೆ ಮನೆ ಬಿಡುವಂತೆಯೂ ಹೇಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪೂಜಾರ್‌ ಅಜ್ಜಪ್ಪ ಮಾತನಾಡಿ, ಈಗ ಶ್ರೀ ಬೀರೇಶ್ವರ ದೇವಸ್ಥಾನ ಪೂಜೆ ಮಾಡುತ್ತಿರುವವರು ಹಿಂದಿನಿಂದಲೂ ಪೂಜೆ ಮಾಡಿಕೊಂಡು ಬಂದಿಲ್ಲ. ನಮ್ಮ ಮನೆತನದವರು ದುರ್ಗಾಂಬಿಕಾ ದೇವಸ್ಥಾನದ ಬಳಿ ಇರುವ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದೆವು. ಈಗ ಇರುವಂತೆ ಶ್ರೀ ಬೀರೇಶ್ವರ ದೇವಸ್ಥಾನ ಇರಲಿಲ್ಲ. ಮಣ್ಣಿನ ಗುಡ್ಡೆಯಂತೆ ದೇವಸ್ಥಾನ ಇತ್ತು. ದೂರದಿಂದ ಬಂದು ಪೂಜೆ ಮಾಡುವುದು ಆಗುವುದಿಲ್ಲ. ಹಾಗಾಗಿ ನೀವೇ ಪೂಜೆ ಮಾಡಿಕೊಂಡು ಹೋಗಿ ಎಂದು ಅವಕಾಶ ಮಾಡಿಕೊಡಲಾಗಿದೆಯೇ ಹೊರತು ಅವರು ಹೇಳಿಕೊಂಡಿರುವಂತೆ ನೂರಾರು ವರ್ಷಗಳಿಂದ ಪೂಜೆ ಮಾಡಿಕೊಂಡು ಬಂದಿಲ್ಲ. ಈಗ ಪೂಜೆ ಮಾಡುತ್ತಿರುವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ನ ಬಳ್ಳಾರಿ ಷಣ್ಮುಖಪ್ಪ, ಜೆ.ಕೆ. ಕೊಟ್ರಬಸಪ್ಪ, ಪೈಲ್ವಾನ್‌ ಸಂಗಪ್ಪ, ಗೌಡ್ರ ಚನ್ನಬಸಪ್ಪ, ಬಿ.ಎಚ್. ಪರಶುರಾಮಪ್ಪ, ಎಸ್‌.ಎಸ್‌. ಗಿರೀಶ್‌, ಮಾಜಿ ಮೇಯರ್‌ಗಳಾದ ಎಚ್.ಬಿ. ಗೋಣೆಪ್ಪ, ಎಚ್.ಎನ್‌. ಗುರುನಾಥ್‌, ನಗರಸಭೆ ಮಾಜಿ ಸದಸ್ಯ ಎನ್‌.ಜೆ. ನಿಂಗಪ್ಪ, ಕುಂಬಳೂರು ವಿರುಪಾಕ್ಷಪ್ಪ, ಜಮ್ನಳ್ಳಿ ನಾಗರಾಜ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.