ಓದು-ಕಲಿಕೆ ಅಭ್ಯಾಸಕ್ಕೆ ಸೀಮಿತ ಸಲ್ಲ: ಶ್ರೀ


Team Udayavani, Nov 9, 2019, 11:28 AM IST

9-November-4

ದಾವಣಗೆರೆ: ಓದು, ಕಲಿಕೆ ಕೇವಲ ಅಭ್ಯಾಸಕ್ಕೆ ಸೀಮಿತ ಆಗಬಾರದು. ಅದು ಜ್ಞಾನಾರ್ಜನೆ ಮತ್ತು ಸಮಾಜದ ಉನ್ನತಿಗೆ ಪೂರಕವಾಗಿರಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಜಗದ್ಗುರು ಶ್ರೀ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪ್ರತಿಪಾದಿಸಿದ್ದಾರೆ.

ಶುಕ್ರವಾರ, ದಾವಣಗೆರೆ ವಿಶ್ವವಿದ್ಯಾನಿಲಯದ ಕನ್ನಡಅಧ್ಯಯನ ವಿಭಾಗ ಏರ್ಪಡಿಸಿದ್ದ ಮಧ್ಯಕರ್ನಾಟಕದ ಕನ್ನಡ ಸಾಹಿತ್ಯ: ತಾತ್ವಿಕ ನೆಲೆಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಪ್ರಸಾರಾಂಗ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯಗಳು ಜ್ಞಾನದಾಸೋಹದ ಕಾರ್ಯ ಮಾಡಬೇಕು. ವಿದ್ಯೆ, ವಿನಯವನ್ನು ಕಲಿಸಿ, ಭವಿಷ್ಯ ರೂಪಿಸಬೇಕು. ಆಗಲೇ ಶಿಕ್ಷಣದ ಮೂಲ ಉದ್ದೇಶ ಸಾರ್ಥಕವೆನಿಸುತ್ತದೆ ಎಂದರು.

ಸಂವಾದ, ಗೋಷ್ಠಿ, ಚರ್ಚೆಯಲ್ಲಿ ವಿದ್ವಾಂಸರು ನಡೆಸಿದ ವಿಭಿನ್ನ ವಿಷಯಗಳ ಚಿಂತನ-ಮಂಥನದಿಂದ ಆವಿಷ್ಕಾರ ಹೊರ ಬರುತ್ತದೆ. ಅದನ್ನು ಸಂಗ್ರಹಿಸುವ, ಅಭಿವೃದ್ಧಿಪಡಿಸುವ ಅಥವಾ ವಿಭಿನ್ನ ಆಯಾಮಕ್ಕೆ ಒಯ್ಯುವ ಕೆಲಸವನ್ನು ವಿಶ್ವವಿದ್ಯಾನಿಲಯಗಳು ಮಾಡಬೇಕು. ಹಾಗಾದಾಗ ಮಾತ್ರ ವಿದ್ಯಾರ್ಥಿಗಳ ಜ್ಞಾನಾರ್ಜನೆ, ವೈಚಾರಿಕ ಆಲೋಚನೆ ಮತ್ತು ಸಮಷ್ಠಿ ಬೆಳವಣಿಗೆ ಸಾಧ್ಯ. ಅಲ್ಲದೆ, ಜಾಗತಿಕ ಮಟ್ಟದ ಪೈಪೋಟಿಯಲ್ಲಿ ಅಸ್ತಿತ್ವ ಕಂಡುಕೊಳ್ಳಲು ಅವಕಾಶವಾಗುತ್ತದೆ ಎಂದು ತಿಳಿಸಿದರು.

ಒಳ್ಳೆಯ ವಿಚಾರವನ್ನು ಯಾವುದೇ ಭೇದವಿಲ್ಲದೆ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇದಕ್ಕೆ ಯಾವುದೇ ವಯೋಮಾನದ ಮಾನದಂಡ ಇರಬಾರದು. ವ್ಯಕ್ತಿ ಯಾರೇ ಆಗಿದ್ದರೂ ಪ್ರಾಂಜಲ ಮನಸ್ಸಿನಿಂದ ಸ್ವೀಕರಿಸಬೇಕು.ಆಗಲೇ ಪರಿವರ್ತನೆ ಕಾಣಬಹುದು ಎಂದು ಅವರು ಹೇಳಿದರು.

ಕರ್ನಾಟಕ ಸಾಹಿತ್ಯಅಕಾಡೆಮಿ ಅಧ್ಯಕ್ಷ ಡಾ| ಬಿ.ವಿ. ವಸಂತಕುಮಾರ ಮಾತನಾಡಿ, ಮಧ್ಯ ಕರ್ನಾಟಕದ ವ್ಯಾಪ್ತಿ ಬಹಳ ದೊಡ್ಡದು.ಇಲ್ಲಿಯ ಸಾಹಿತ್ಯ, ಇತಿಹಾಸ, ಸಂಸ್ಕೃತಿ, ಭಾಷೆ,..ಹೀಗೆ ಎಲ್ಲವೂ ತಮ್ಮದೇ ಆದ ವಿಶಿಷ್ಟ ಮಾನ್ಯತೆ ಪಡೆದಿವೆ. ಅವುಗಳ ಸ್ಪಷ್ಟ ಪರಿಕಲ್ಪನೆಯ ಅರಿವು ಮೂಡಿಸುವ, ಅಕ್ಷರಜ್ಞಾನದ ಜೊತೆಗೆ ವಿಚಾರಗಳ ತಿಳಿಸುವ ಅಗತ್ಯವಿದೆ ಎಂದು ತಿಳಿಸಿದರು.

ಮಧ್ಯಕರ್ನಾಟಕ ಭಾಗದ ಸಾಹಿತ್ಯ, ತಾತ್ವಿಕತೆ, ಸಂಸ್ಕೃತಿ, ಸಂಪ್ರದಾಯಗಳ ವರ್ತಮಾನದ ತವಕ, ತಲ್ಲಣಗಳಿಗೆ, ಸಮಸ್ಯೆಗಳಿಗೆ ವಿಚಾರ ಸಂಕಿರಣ ಪರಿಹಾರ ಒದಗಿಸುವಂತಾದರೆ ಉದ್ದೇಶ ಸಾರ್ಥಕತೆ ಪಡೆಯುತ್ತದೆ ಎಂದು ಹೇಳಿದರು.

ಅರಣ್ಯ ಮತ್ತು ಹಳ್ಳಿಗಳು ಭಾರತೀಯ ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಉಳಿಸಿ ಬೆಳೆಸಿದ ವಿಶ್ವವಿದ್ಯಾನಿಲಯಗಳು. ಇವು ನೀಡುವ ಜ್ಞಾನ, ಬದುಕಿನ ಮೌಲ್ಯಗಳನ್ನು ಜಗತ್ತಿನ ಯಾವ ವಿಶ್ವವಿದ್ಯಾಲಯಗಳಿಂದಲೂ ಪಡೆಯಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ|
ಸ.ಚಿ.ರಮೇಶ್‌ ಮಾತನಾಡಿ, ಜ್ಞಾನದ ಅರಿವು ವಿಸ್ತಾರದ ಜೊತೆಗೆ ಜನರ ಸಾಮಾಜಿಕ ಮೌಲ್ಯಗಳನ್ನು, ಸಮಷ್ಠಿ ಪ್ರಜ್ಞೆಯನ್ನು ಬೆಳೆಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ. ಜತೆಗೆ ಮಕ್ಕಳ ಜ್ಞಾನಾಸಕ್ತಿ, ಕಲಿಕೆಯ ಮನೋಭಾವಗಳೂ ಅತಿ ಮುಖ್ಯ.

ವಿದ್ಯಾರ್ಥಿಗಳು ಜ್ಞಾನದಾಹಿಗಳಾಗಬೇಕು. ಪುಸ್ತಕ ಓದುವ, ಬರೆಯುವ ಹವ್ಯಾಸ ರೂಢಿಸಿಕೊಂಡಾಗ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯಎಂದರು.

ಇದೇ ಸಂದರ್ಭದಲ್ಲಿಎನ್‌.ಎಸ್‌. ವೀರೇಶ್‌ ಅವರ ನಾಲ್ಕು ಪುಸ್ತಕಗಳ ಬಿಡುಗಡೆ ಮಾಡಲಾಯಿತು. ಕುಲಸಚಿವ ಪ್ರೊ| ಬಸವರಾಜ ಬಣಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರೀಕ್ಷಾಂಗ ಕುಲಸಚಿವೆ ಪ್ರೊ| ಗಾಯತ್ರಿ ದೇವರಾಜ್‌, ಹಣಕಾಸು ಅಧಿಕಾರಿ ಪ್ರೊ| ಗೋಪಾಲ ಎಂ.ಅಡವಿರಾವ್‌, ಕಲಾ ನಿಕಾಯದ ಡೀನ್‌ ಪ್ರೊ| ಕೆ.ಬಿ. ರಂಗಪ್ಪ, ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯ ಕೊಂಡಜ್ಜಿ ಜಯಪ್ರಕಾಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.