ಸಮವಸ್ತ್ರ -ಸುರಕ್ಷಾ ಪರಿಕರ ಬಳಕೆ ಕಡ್ಡಾಯ

ಕೆಲಸದ ವೇಳೆ ಬಳಸದಿದ್ಧರೆ ಸ್ಥಳದಲ್ಲೇ ವಜಾಪೌರಕಾರ್ಮಿಕರಿಗೆ ಜಿಲ್ಲಾಧಿಕಾರಿ ಬೀಳಗಿ ಎಚ್ಚರಿಕೆ

Team Udayavani, Jan 11, 2020, 12:20 PM IST

11-January-4

ದಾವಣಗೆರೆ: ಪೌರಕಾರ್ಮಿಕರು ಸಮವಸ್ತ್ರ ಮತ್ತು ಸುರಕ್ಷಾ ಪರಿಕರಗಳನ್ನು ಬಳಸದೇ ಕೆಲಸ ಮಾಡುವುದು ಕಂಡು ಬಂದರೆ ಅಂತಹವರನ್ನು ಸ್ಥಳದಲ್ಲೇ ಕೆಲಸದಿಂದ ವಜಾಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಸಿದ್ದಾರೆ.

ಶುಕ್ರವಾರ, ತಮ್ಮ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುವೆಲ್‌ ಸ್ಕ್ಯಾವೆಂಜರ್ ನಿಯೋಜನೆ ನಿಷೇಧ ಮತ್ತು ಅವರ ಪುನರ್ವಸತಿ ಅಧಿ ನಿಯಮ-2019ರ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ನೀಡಲಾಗಿರುವ ಸುರಕ್ಷತಾ ಪರಿಕರಗಳಾದ ಗಂಬೂಟ್ಸ್‌, ಹ್ಯಾಂಡ್‌ಗ್ಲೌಸ್‌ ಗಳನ್ನು ಕಡ್ಡಾಯವಾಗಿ ಬಳಸಬೇಕು. ಅವರ ಆರೋಗ್ಯ ಹಿತದೃಷ್ಟಿಯಿಂದ ಅವುಗಳನ್ನು ಉಪಯೋಗಿಸಬೇಕು. ಪರಿಕರಗಳನ್ನು ಬಳಸದೇ ಸ್ವಚ್ಛತೆ ಕೆಲಸ ಮಾಡುತ್ತಿರುವುದು ಕಂಡು ಬಂದರೆ ಅವರ ವಿರುದ್ಧ ಕ್ರಮ ಕೈಗೊಂಡು ಅವರನ್ನು ಕೆಲಸದಿಂದ ವಜಾ ಗೊಳಿಸಲಾಗುವುದು. ಇದಕ್ಕೆ ಯಾರೂ ವಿರೋಧ ಮಾಡುವಂತಿಲ್ಲ ಎಂದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮ್ಯಾನ್ಯುವೆಲ್‌ ಸ್ಕ್ಯಾವೆಂಜರ್ ಸಮೀಕ್ಷೆ ನಡೆಯುತ್ತಿದ್ದು, ಒಟ್ಟು ಮ್ಯಾನ್ಯುವೆಲ್‌ ಸ್ಕ್ಯಾವೆಂಜರ್ಗಳ ಪಟ್ಟಿಯನ್ನು ಜ.16ರೊಳಗೆ ತಮ್ಮ ಕಚೇರಿಗೆ ತಲುಪಿಸಬೇಕೆಂದು ತಾಲೂಕು ಸ್ಥಳೀಯ ಸಂಸ್ಥೆಗಳ ಅಧಿ ಕಾರಿಗಳಿಗೆ ಅವರು ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಾನಂದ ಕುಂಬಾರ್‌ ಮಾತನಾಡಿ, ಈವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 156 ಕುಟುಂಬಗಳಿಗೆ ಸ್ವಯಂ ಘೋಷಣೆಯೊಂದಿಗೆ ಮ್ಯಾನ್ಯುವೆಲ್‌ ಸ್ಕ್ಯಾವೆಂಜರ್ ಗುರುತಿನ ಚೀಟಿ ನೀಡಲಾಗಿದೆ. ಪಾಲಿಕೆಯಿಂದ ಮ್ಯಾನ್ಯುವೆಲ್‌ ಘೋವೆಂಜರ್ ವಿಶೇಷ ಮರು ಸಮೀಕ್ಷೆ ಕೈಗೊಳ್ಳಲಾಗಿದೆ. ಮ್ಯಾನ್ಯುವೆಲ್‌ ಸ್ಕ್ಯಾವೆಂಜರ್ ಸ್ವ-ಉದ್ಯೋಗಕ್ಕಾಗಿ ಪಾಲಿಕೆ 25 ಲಕ್ಷ ರೂ. ಮೀಸಲಿಟ್ಟಿದೆ. ಸಮೀಕ್ಷೆಯಂತೆ ನಗರದಲ್ಲಿ ಯಾವುದೇ ಇನ್‌ಸ್ಯಾನಿಟರಿ ಲೆಟ್ರಿನ್‌ಗಳು (ತೆರೆದ ಮಲ ಗುಂಡಿ) ಇಲ್ಲ ಎಂದು ತಿಳಿಸಿದರು.

ಮ್ಯಾನ್ಯುವೆಲ್‌ ಸ್ಕ್ಯಾವೆಂಜರ್ ಸಮಿತಿ ಸದಸ್ಯ ವಾಸುದೇವ ಮಾತನಾಡಿ, ಪಾಲಿಕೆ ನೀಡಿರುವ ಗುರುತಿನ ಚೀಟಿಯಿಂದ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಈಗ ಗುರುತಿಸಿರುವ 150
ಕುಟುಂಬದಲ್ಲಿ ಕನಿಷ್ಠ ಒಬ್ಬರಿಗಾದರೂ ಪಾಲಿಕೆಯಲ್ಲಿ ಟೆಂಡರ್‌ ಆಧಾರದ ಮೇಲೆ ಕೆಲಸ ಕೊಡಿಸಬೇಕು. ಟೆಂಡರುದಾರರ ಟೆಂಡರ್‌ ಅವಧಿ ಈಗಾಗಲೇ ಮುಗಿದಿದ್ದು, ಮುಂದಿನ ಟೆಂಡರ್‌ ಕರೆಯಬೇಕು ಎಂದರು.

ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಈಗಾಗಲೇ ಟೆಂಡರ್‌ ಅವಧಿ ಮುಗಿದಿದ್ದರೆ. ಹೊಸ ಟೆಂಡರ್‌ ಕರೆಯಬೇಕು ಮತ್ತು ಮಧ್ಯದಲ್ಲಿ ಯಾರಾದರೂ ಟೆಂಡರ್‌ ವಾಪಸ್‌ ತೆಗೆದುಕೊಂಡರೆ ಅಂತಹ ಟೆಂಡರ್‌ದಾರರನ್ನು ಬ್ಲಾಕ್‌ ಲಿಸ್ಟ್‌ ಮಾಡುವಂತೆ ಸೂಚಿಸಿದರು.
ಡಿಸ್ಟಿಕ್‌ ವಿಜೆಲೆನ್ಸ್‌ ಕಮಿಟಿ ಸದಸ್ಯ ಬಾಬಣ್ಣ ಮಾತನಾಡಿ, ಎನ್‌ಎಸ್‌ಕೆಎಫ್‌ಡಿಸಿ ಅರ್ಜಿಗಳನ್ನು ದೆಹಲಿಗೆ ಕಳುಹಿಸಿಕೊಡುವ ಕೊನೆಯ ದಿನಾಂಕ ತಿಳಿಸಬೇಕು. ಆಯ-ವ್ಯಯ ತಯಾರಿಸುವ ಸಂದರ್ಭದಲ್ಲಿ ಮ್ಯಾನ್ಯುವೆಲ್‌ ಸ್ಕ್ಯಾವೆಂಜರ್ಸ್ ಗಾಗಿ ಅನುದಾನ ಮೀಸಲಿಡಬೇಕಲ್ಲದೆ, ನಿಟ್ಟುವಳ್ಳಿಯ ಎ.ಕೆ. ಕಾಲೋನಿಯಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಿರುವುದರಿಂದ ಹೆಲ್ತ್‌ ಕ್ಯಾಂಪ್‌ ಆಯೋಜಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಮ್ಯಾನ್ಯುವೆಲ್‌ ಸ್ಕ್ಯಾವೆಂಜರ್ ಸಮೀಕ್ಷೆ ನಡೆಸಬೇಕು ಎಂದರು.

ಆಗ, ಜಿಲ್ಲಾ ಧಿಕಾರಿಗಳು, ಜ.26 ರೊಳಗೆ ನಿಟ್ಟುವಳ್ಳಿಯ ಎ.ಕೆ. ಕಾಲೋನಿಯಲ್ಲಿ ಹೆಲ್ತ್‌ ಕ್ಯಾಂಪ್‌ ಆಯೋಜಿಸಿ, ಆ ಭಾಗದ ಜನರ ಆರೊಗ್ಯ ತಪಾಸಣೆ ನಡೆಸುವಂತೆ ಜಿಲ್ಲಾ ಕುಟುಂಬ ಮತ್ತು ಕಲ್ಯಾಣಾಧಿಕಾರಿಗೆ ಸೂಚಿಸಿದರು. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವತಿಯಿಂದ ಪೌರಕಾರ್ಮಿಕರಿಗೆ ಜಾಗೃತಿ ಮೂಡಿಸಲು ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಏರ್ಪಡಿಸಲು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ, ಉಪ ಆಯುಕ್ತ ಗದುಗೇಶ್‌ ಸಿರ್ಸಿ, ಜಿಲ್ಲಾ ಕುಟುಂಬ ಮತ್ತು ಕಲ್ಯಾಣಾ ಧಿಕಾರಿ ಡಾ| ರಾಘವೇಂದ್ರ ಸ್ವಾಮಿ, ಸಪಾಯಿ ಕಾರ್ಮಚಾರಿ ಸಂಘದ ರಾಜ್ಯ ಸಮಿತಿಯ ಸಂಚಾಲಕ ಬಾಬುಲಾಲ್‌, ತಾಪಂ
ಕಾರ್ಯನಿರ್ವಹಣಾಧಿಕಾರಿ ದಾರುಕೇಶ್‌, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ದಾವಣಗೆರೆ ಸಫಾಯಿ ಕಾರ್ಮಚಾರಿ ಸಮಿತಿಯ ನೀಲಗಿರಿಯಪ್ಪ, ಮಂಜಮ್ಮ, ಗಂಗಮ್ಮ, ಇತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.