ಕೋರ್ಟ್‌ ಕಲಾಪ ಬಹಿಷ್ಕಾರ ಕಾನೂನು ಬಾಹಿರ

ವಕೀಲರಿಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಕಿವಿಮಾತು

Team Udayavani, Nov 17, 2019, 11:21 AM IST

17-November-3

ದಾವಣಗೆರೆ: ವಕೀಲರು ಸಣ್ಣ ಪುಟ್ಟ ಕಾರಣಗಳಿಗಾಗಿ ನ್ಯಾಯಾಲಯದ ಕಲಾಪ ಬಹಿಷ್ಕರಿಸುವುದು ಸಮಂಜಸವಲ್ಲ ಎಂದು ರಾಜ್ಯ ಹೈಕೋರ್ಟ್‌ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಹೇಳಿದ್ದಾರೆ.

ಶನಿವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಾಂಸ್ಕೃತಿಕ ಸಭಾಂಗಣದಲ್ಲಿ ವಕೀಲರನ್ನುದ್ದೇಶಿಸಿ ಮಾತನಾಡಿದ ಅವರು, ಸಮಸ್ಯೆ ಹಾಗೂ ಬೇಡಿಕೆ ಈಡೇರಿಕೆಗೆ ಪ್ರತಿಭಟನೆ ಮಾಡುವುದು ತಪ್ಪಲ್ಲ, ಆದರೆ, ನ್ಯಾಯಾಲಯ ಬಹಿಷ್ಕರಿಸಕೂಡದೆಂದು ಸರ್ವೋಚ್ಛ ನ್ಯಾಯಾಲಯ ಕೂಡ ಆದೇಶಿಸಿದೆ. ಆದರೂ ವಕೀಲರು ಯಾವುದೋ ಕಾರಣದಿಂದಾಗಿ ನ್ಯಾಯಾಲಯದ ಕಲಾಪ ಬಹಿಷ್ಕರಿಸುವುದು ಸರಿಯಲ್ಲ ಎಂದರು.

ಕಳೆದ ಹಲವು ವರ್ಷಗಳಲ್ಲಿ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ 300 ದಿನ ನ್ಯಾಯಾಲಯದ ಕಲಾಪ ಬಹಿಷ್ಕರಿಸಲಾಗಿದೆ. ಇದರಿಂದ ನ್ಯಾಯದ ನಿರೀಕ್ಷೆಯಲ್ಲಿರುವ ನೊಂದವರಿಗೆ ತೊಂದರೆಯಾಗಲಿದೆ. ನ್ಯಾಯಾಂಗ ವ್ಯವಸ್ಥೆ ಸದಾ ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ವಕೀಲ ವೃತ್ತಿಯೂ ಇರುವುದು ಸಾಮಾನ್ಯ ಜನತೆಗೆ ನ್ಯಾಯ ಒದಗಿಸುವುದಕ್ಕಾಗಿಯೇ. ಆದ್ದರಿಂದ ಸಣ್ಣ ಸಣ್ಣ ಕಾರಣಗಳಿಗಾಗಿ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಸದೇ ಪ್ರಕರಣಗಳ ಶೀಘ್ರ ವಿಲೇವಾರಿ ಮೂಲಕ ನ್ಯಾಯದಾನಕ್ಕೆ ಸಹಕರಿಸಬೇಕು ಎಂದು ಕಿವಿಮಾತು ಹೇಳಿದರು.

ಧರ್ಮ ಗ್ರಂಥಗಳಾದ ಭಗವದ್ಗೀತೆ, ಬೈಬಲ್‌, ಕುರಾನ್‌ ರೀತಿ ಸಂವಿಧಾನವೂ ಸಹ ನಮ್ಮ ಪವಿತ್ರ ಗ್ರಂಥ ಇದ್ದ ಹಾಗೆ. ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಸಹ ಕೂಡ ತಮ್ಮ ಭಾಷಣದಲ್ಲಿ ಪ್ರತಿಭಟನೆ ನಮ್ಮ ಹಕ್ಕು. ಆದರೆ ಕ್ಷುಲ್ಲಕ ಕಾರಣಗಳು ಮತ್ತು ಸಾರ್ವಜನಿಕರಿಗೆ ತೊಂದರೆ ಆಗದಂತೆ ಪ್ರತಿಭಟನೆ ಮಾಡಬೇಕೆಂದಿದ್ದಾರೆ. ಪ್ರತಿಭಟನೆ ಅಥವಾ ಬಹಿಷ್ಕರಿಸುವ ಹಕ್ಕು ವಕೀಲರಿಗಿದೆ. ಆದರೆ, ಅದು ಕಾನೂನು ಬಾಹಿರವಾಗಿರಬಾರದು. ಆದ್ದರಿಂದ ಬಹಿಷ್ಕಾರವನ್ನು ಒಂದು ಅಸ್ತ್ರವನ್ನಾಗಿ ಉಪಯೋಗಿಸದೇ ಜನಸಾಮಾನ್ಯರಿಗೆ ಶೀಘ್ರ ನ್ಯಾಯಸೇವೆ ಒದಗಿಸಬೇಕಿದೆ ಎಂದು ಪ್ರತಿಪಾದಿಸಿದರು.

ನ್ಯಾಯಾಧೀಶರು, ವಕೀಲರು ನ್ಯಾಯಾಂಗ ವ್ಯವಸ್ಥೆಯಲ್ಲಿ ಜಾತಿ ವ್ಯವಸ್ಥೆಗೆ ಮಾರು ಹೋಗಬಾರದು. ಕಕ್ಷಿದಾರರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ಹೊಂದಬೇಕು ಎಂದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ಉತ್ತಮ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಪ್ರಸ್ತುತ ದಾವಣಗೆರೆ ಜಿಲ್ಲಾ ನ್ಯಾಯಾಲಯಗಳಲ್ಲಿ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ 15 ಕೋಟಿ ರೂ. ಯೋಜನೆಗೆ ಶೀಘ್ರದಲ್ಲೇ ಮಂಜೂರಾತಿ ಸಿಗಲಿದೆ. ವಕೀಲರ ಭವನ ನಿರ್ಮಾಣಕ್ಕೆ ಪ್ರಸ್ತಾವನೆ ಬಂದಿದ್ದು ಅದನ್ನೂ ಆದಷ್ಟು ಬೇಗ ಮಂಜೂರು ಮಾಡಲಾಗುವುದು.

ನ.26ರಂದು ಸಂವಿಧಾನ ದಿನ ಆಗಿರುವುದರಿಂದ ಎಲ್ಲ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸಂವಿಧಾನ ದಿನ ಕಡ್ಡಾಯವಾಗಿ ಆಚರಿಸಬೇಕು. ಇದನ್ನು ರಾಷ್ಟ್ರಪತಿಗಳೇ ಸೂಚಿಸಿದ್ದಾರೆ ಎಂದರು. ಜನಸಾಮಾನ್ಯರಿಗೆ ಶೀಘ್ರ ನ್ಯಾಯದಾನದ ಉದ್ದೇಶದಿಂದ ಈ ವರ್ಷದ ಅಂತ್ಯಕ್ಕೆ ಎಲ್ಲ 10 ವರ್ಷ ಹಳೆಯ ಕ್ರಿಮಿನಲ್‌ ಮತ್ತು ಸಿವಿಲ್‌ ಪ್ರಕರಣ ಹಾಗೂ 2020ರ ಅಂತ್ಯಕ್ಕೆ 7 ವರ್ಷ ಹಳೆಯ ಪ್ರಕರಣಗಳನ್ನು ವಿಲೇವಾರಿಗೆ ಆದ್ಯತೆ ನೀಡಬೇಕಿದೆ. ಒಟ್ಟಾರೆ ಮುಂದಿನ ವರ್ಷಗಳಲ್ಲಿ ಕೆಳಹಂತದ ನ್ಯಾಯಾಲಯಗಳಲ್ಲಿ 5 ವರ್ಷದ ಹಳೆಯ ಯಾವುದೇ ಪ್ರಕರಣ ಇತ್ಯರ್ಥವಾಗದೇ ಬಾಕಿ ಉಳಿಯಬಾರದೆಂಬುದು ನಮ್ಮ ಗುರಿ. ಆ ನಿಟ್ಟಿನಲ್ಲಿ ಕರ್ನಾಟಕವನ್ನು ಬಾಕಿ ಪ್ರಕರಣ ಮುಕ್ತ ರಾಜ್ಯವಾಗಿಸಲು ನ್ಯಾಯಾಂಗ ವ್ಯವಸ್ಥೆಯೊಂದಿಗೆ ವಕೀಲರು ಕೈ ಜೋಡಿಸಬೇಕಿದೆ ಎಂದು ಮನವಿ ಮಾಡಿದರು.

ದಾವಣಗೆರೆ ಜಿಲ್ಲಾ ನ್ಯಾಯಾಲಯ ತಾವು ಭೇಟಿ ನೀಡುತ್ತಿರುವ 14ನೇ ಜಿಲ್ಲಾ ನ್ಯಾಯಾಲಯವಾಗಿದೆ. ಜಿಲ್ಲಾ ನ್ಯಾಯಾಲಯಗಳ ಮೂಲ ಸೌಕರ್ಯ ತಮ್ಮ ಆದ್ಯತೆಯಾಗಿದೆ. ತಮ್ಮ ತಂದೆ ಸಹ ಜಿಲ್ಲಾ ನ್ಯಾಯಾಧೀಶರಾಗಿದ್ದರು. ತಾವು ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗುವ ಮುನ್ನ 16 ವರ್ಷ ಜಿಲ್ಲಾ ನ್ಯಾಯಾಲಯದಲ್ಲಿ ಕಲಿತಿದ್ದೇ ಹೆಚ್ಚು ಎಂದು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.

ಸನ್ಮಾನ, ಗೌರವಿಸುವ ಸಂದರ್ಭದಲ್ಲಿ ನೀಡುವ ಬೊಕ್ಕೆ, ಹಾರ, ಇತರೆ ವಸ್ತುಗಳನ್ನು ನಿರಾಕರಿಸುವೆ. ಏಕೆಂದರೆ ಅವುಗಳನ್ನು ತಯಾರಿಕೆಗೆ ಪರಿಸರ ಹಾಳಾಗಲಿದೆ. ಅರಣ್ಯ, ಪರಿಸರ ಸಂರಕ್ಷಣೆ ನ್ಯಾಯಾಂಗ ವ್ಯವಸ್ಥೆಯಲ್ಲಿರುವವರ ಜವಾಬ್ದಾರಿ ಹಾಗೂ ಕರ್ತವ್ಯಕೂಡ ಎಂದು ಹೇಳಿದರು. ರಾಜ್ಯ ಉಚ್ಛ ನ್ಯಾಯಾಲಯದ ಜನರಲ್‌ ರಿಜಿಸ್ಟ್ರಾರ್‌ ರಾಜೇಂದ್ರ ಬದಾಮಿಕರ್‌, ಇನ್‌ಫ್ರಾಸ್ಟ್ರಕ್ಚರ್‌ ರಿಜಿಸ್ಟ್ರಾರ್‌ ಎಂ.ಚಂದ್ರಶೇಖರ ರೆಡ್ಡಿ, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾ ಧೀಶ ಅಂಬಾದಾಸ್‌ ಜಿ ಕುಲಕರ್ಣಿ ವೇದಿಕೆಯಲ್ಲಿದ್ದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್‌.ಟಿ. ಮಂಜುನಾಥ್‌ ಸ್ವಾಗತಿಸಿದರು. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ದಿವಾಕರ್‌ ರಾಜ್ಯ ಮುಖ್ಯ ನ್ಯಾಯಮೂರ್ತಿಗಳ ಪರಿಚಯ ಮಾಡಿಕೊಟ್ಟರು. ಎಸ್‌.ಬಸವರಾಜು ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಮುಖ್ಯ ನ್ಯಾಯಮೂರ್ತಿಗಳು ಜಿಲ್ಲಾ ನ್ಯಾಯಾಲಯದಲ್ಲಿನ ಮೂಲ ಸೌಲಭ್ಯ ಪರಿಶೀಲಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.