7ನೇ ಆರ್ಥಿಕ ಗಣತಿಗೆ ಎಲ್ಲರೂ ಸಹಕರಿಸಿ

ಗೊಂದಲ, ಆತಂಕ ಬೇಡ: ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ

Team Udayavani, Jan 1, 2020, 11:27 AM IST

1–January-3

ದಾವಣಗೆರೆ: ಮನೆ ಮನೆಗೆ ತೆರಳಿ ಗಣತಿದಾರರು ಕೈಗೊಳ್ಳಲಿರುವ 7ನೇ ಆರ್ಥಿಕ ಗಣತಿಯ ಬಗ್ಗೆ ಯಾವುದೇ ಗೊಂದಲ, ಆತಂಕ ಬೇಡ ಎಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಮಂಗಳವಾರ, ತಮ್ಮ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಿಎಎ ಹಾಗೂ ಎನ್‌ಆರ್‌ಸಿ ಬಗ್ಗೆ ಪ್ರತಿಭಟನೆ ನಡೆಯುತ್ತಿರುವುದರಿಂದ ಆರ್ಥಿಕ ಗಣತಿ ವೇಳೆ ಸಾರ್ವಜನಿಕರು ಮಾಹಿತಿ ನೀಡಲು ಸಹಕರಿಸುತ್ತಿಲ್ಲ. ಆದರೆ, ಆರ್ಥಿಕ ಗಣತಿಯು ಯಾವುದೇ ಜಾತಿ, ಧರ್ಮದವರ, ಎನ್‌ಆರ್‌ಸಿ ಅಥವಾ ಇನ್ಯಾವುದೇ ಕಾರ್ಯಕ್ಕೆ ಸಂಬಂಧ ಮಾಹಿತಿ ಸಂಗ್ರಹಿಸುತ್ತಿಲ್ಲ. ಹಾಗಾಗಿ ಈ ಕಾರ್ಯದ ಬಗ್ಗೆ ಜನರಿಗೆ ಕಿಂಚಿತ್ತೂ ಸಂಶಯ ಬೇಡ ಎಂದರು.

ಆರ್ಥಿಕ ಗಣತಿಯು ದೇಶದ ಭೌಗೋಳಿಕ ಗಡಿಯೊಳಗೆ ನೆಲೆಗೊಂಡು ಸ್ವಂತ ಉಪಯೋಗಕ್ಕಲ್ಲದ ಸರಕುಗಳ ಉತ್ಪಾದನೆ ಅಥವಾ ವಿತರಣೆ/ಮಾರಾಟ ಇಲ್ಲವೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿರುವ ಉದ್ಯಮಗಳ/ಘಟಕಗಳ ಪೂರ್ಣ ಎಣಿಕೆಯಾಗಿದೆ. ಈ ಗಣತಿಯಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯಗಳ ಎಲ್ಲಾ ಉದ್ಯಮಗಳ ಗಣತಿ ಮಾಡಲಾಗುವುದು ಎಂದು ಅವರು ಹೇಳಿದರು.

ಸರಕುಗಳ ಉತ್ಪಾದನೆ, ಅವುಗಳ ವಿತರಣೆ/ ಮಾರಾಟ ಅಥವಾ ಸೇವಾ ಚಟುವಟಿಕೆಯಿಂದ ರಾಷ್ಟ್ರೀಯ ಉತ್ಪನ್ನಕ್ಕೆ ಮೌಲ್ಯ ತಂದು ಕೊಡುತ್ತಿವೆಯೋ ಅಂತಹವುಗಳನ್ನು ಆರ್ಥಿಕ ಚಟುವಟಿಕೆ ಎಂಬುದಾಗಿ ಪರಿಗಣಿಸಲಾಗುವುದು. ಆರ್ಥಿಕ ಚಟುವಟಿಕೆಯು ದೇಶದ ಪ್ರಗತಿ, ರಾಷ್ಟ್ರೀಯ ತಲಾ ಆದಾಯ ಮತ್ತು ಜಿಡಿಪಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಅವರು ಸ್ಪಷ್ಟನೆ ನೀಡಿದರು.

1977ರಲ್ಲಿ ಮೊದಲನೇ ಆರ್ಥಿಕ ಗಣತಿ ನಡೆಸಲಾಗಿತ್ತು. ಆ ನಂತರ 1980, 1990, 1998, 2005 ಹಾಗೂ 2012-13ರಲ್ಲಿ 6ನೇ ಗಣತಿ ಕೈಗೊಳ್ಳಲಾಗಿದೆ. ಪ್ರಸ್ತುತ 7ನೇ ಆರ್ಥಿಕ ಗಣತಿ ಕಾರ್ಯಕ್ಕೆ ದೇಶಾದ್ಯಂತ ಡಿ.31ರಿಂದ ಆರಂಭವಾಗಲಿದ್ದು, ಈ ಕಾರ್ಯ ಬರುವ ಸೆಪ್ಟಂಬರ್‌ ಅಂತ್ಯದವರೆಗೆ ನಡೆಯಲಿದೆ. ಈವರೆಗೂ ಗಣತಿಯನ್ನು ಆರ್ಥಿಕ ಮತ್ತು ಸಾಂಖ್ಯೀಕ ನಿರ್ದೇಶನಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಭಾಗಿತ್ವ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ನಡೆಸಲಾಗಿದ್ದು, ಈ ಬಾರಿ ಗಣತಿಯನ್ನು ಮೊಬೈಲ್‌ ಆ್ಯಪ್‌ ಬಳಸಿ ಮಾಡುತ್ತಿರುವುದು ವಿಶೇಷ.

7ನೇ ಆರ್ಥಿಕ ಗಣತಿಯು ಸಿಎಸ್‌ಸಿ (ಕಾಮನ್‌ ಸರ್ವೀಸ್‌ ಸೆಂಟರ್‌), ಇ-ಗವರೆ°ನ್ಸ್‌ ಸರ್ವೀಸ್‌ ಇಂಡಿಯಾ ಲಿಮಿಟೆಡ್‌ ಮತ್ತು ನ್ಯಾಷನ್‌ಲ್‌  ಪಲ್‌ ಸರ್ವೇ ಆರ್ಗನೈಜೇಷನ್‌ ರವರ ಸಂಪೂರ್ಣ ಜವಾಬ್ದಾರಿ ಹಾಗೂ ನೇತೃತ್ವದಲ್ಲಿ ನಡೆಯಲಿದೆ. ಬ್ಲಾಕ್‌ಗಳ ರಚನೆ, ಗಣತಿದಾರರು, ಮೇಲ್ವಿಚಾರಕ ನೇಮಕಾತಿ, ಕ್ಷೇತ್ರ ಕಾರ್ಯಾಚರಣೆ, ಪ್ರಗತಿ ವರದಿ, ಇತ್ಯಾದಿ ಕಾರ್ಯಗಳ ಉಸ್ತುವಾರಿ, ಹೊಣೆ ಸಿಎಸ್‌ಸಿ ಮತ್ತು ಎನ್‌ಎಸ್‌ಎಸ್‌ಒ ಇವರದ್ದಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೃಷಿ ಚಟುವಟಿಕೆ ಹೊರತಾಗಿ ಬೇರೆರೀತಿ ಆದಾಯ ಗಳಿಕೆಯಲ್ಲಿ ಕುಟುಂಬದ ಸದಸ್ಯರು ತೊಡಗಿಕೊಂಡಿದ್ದಾರೆಂಬ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ಆರ್ಥಿಕ ಗಣತಿ ಕಾರ್ಯ ನಡೆಯಲಿದೆ.
ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿಗಳ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು ತಮ್ಮ ತಮ್ಮ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಆರ್ಥಿಕ ಗಣತಿ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕಿದೆ.

ವಿವಿಧ ಇಲಾಖೆಗಳು ತಮ್ಮಲ್ಲಿ ನೋಂದಣಿಯಾದ ಎಲ್ಲಾ ಉದ್ಯಮ ಘಟಕಗಳ ಪಟ್ಟಿಯನ್ನು ತಾಲೂಕುವಾರು ಸಿದ್ದಪಡಿಸಿ, ಸಿಎಸ್‌ಸಿ ಜಿಲ್ಲಾ ವ್ಯವಸ್ಥಾಪಕರು, ತಹಶೀಲ್ದಾರ್‌ಗಳು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳಿಗೆ ಸಲ್ಲಿಸಬೇಕಿದೆ. ಗ್ರಾಮಗಳಲ್ಲಿ ಪಿಡಿಓ ಹಾಗೂ ಬಿಲ್‌ ಕಲೆಕ್ಟರ್‌ ನೆರವಿನಿಂದ ಗಣತಿ ಕಾರ್ಯ ನಡೆಯಲಿದೆ. ಗಣತಿ ವೇಳೆ ಆಕಸ್ಮಿಕ ಸಂದರ್ಭದಲ್ಲಿ ಪೊಲೀಸರು ರಕ್ಷಣೆ ನೀಡಲಿದ್ದಾರೆ. ಜನರು ಗಣತಿ ಸಂದರ್ಭದಲ್ಲಿ ತಮ್ಮ ಹೆಸರು, ಮನೆಯಲ್ಲಿ ಇತರೆ ಸದಸ್ಯರ ಕೈಗೊಂಡಿರುವ ಆರ್ಥಿಕ ಚಟುವಟಿಕೆ ವಿವರ, ಕುಟುಂಬದ ವಾರ್ಷಿಕ ವರಮಾನ, ಪಾನ್‌ಕಾರ್ಡ್‌ ನಂಬರ್‌ ಹಾಗೂ ಮೊಬೈಲ್‌ ನಂಬರ್‌ ಗಳನ್ನು ಗಣತಿದಾರರಿಗೆ ನೀಡಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಗಣತಿದಾರರಿಗೆ ಕ್ಯಾಪ್‌ ವಿತರಿಸಿ, ಆರ್ಥಿಕ ಗಣತಿ ಕಾರ್ಯ ಕೈಗೊಳ್ಳುವ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವ ವಿಧಾನದ ಬಗ್ಗೆ ಕೆಲವು ಸಲಹೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಜ್ಮಾ ಜಿ., ಜಿಲ್ಲಾ ಸಾಂಖ್ಯೀಕ ಅಧಿಕಾರಿ ಜಿ.ಬಿ.ಹರಮಗಟ್ಟಿ ಇದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.