ಸಮಾಜ ಸೇವೆಯಿಂದ ಜೀವನ ಸಾರ್ಥಕ

ಸಮಾನ ಮನಸ್ಕರ ಸೇವಾ ಸಮಿತಿ ಉದ್ಘಾಟನೆ ನಿಸ್ವಾರ್ಥ-ಬದ್ಧತೆ-ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ

Team Udayavani, Dec 9, 2019, 11:40 AM IST

December-3

ದಾವಣಗೆರೆ: ಸಮಾಜ ಸೇವೆ… ಎನ್ನುವುದು ಜೀವನದ ಸಾರ್ಥಕತೆಯ ಪ್ರತೀಕ ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಪ್ರತಿಪಾದಿಸಿದರು.

ಭಾನುವಾರ ಕುವೆಂಪು ಕನ್ನಡ ಭವನದಲ್ಲಿ ಸಮಾನ ಮನಸ್ಕರ ಸೇವಾ ಸಮಿತಿ ನೂತನ ಸಂಸ್ಥೆ ಉದ್ಘಾಟನೆ ಮತ್ತು ಕನ್ನಡ ನಿತ್ಯೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಯಾರೂ ಸಹ ಸಮಾಜದ ಸೇವೆ ಮಾಡದೆ ಸಾಯುವುದು ತರವಲ್ಲ. ಕೈಲಾದಷ್ಟು ಸೇವೆ ಮಾಡುವ ಮೂಲಕ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬರು ನಿಸ್ವಾರ್ಥತೆ, ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ದೇಶ, ಸಮಾಜ ಸೇವೆ ಮಾಡಬೇಕು. ಅಂತಹವರ ಹೆಸರು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಇರುತ್ತದೆ. ಬುದ್ಧ, ಬಸವಣ್ಣ,
ಗಾಂಧೀಜಿ, ಅಂಬೇಡ್ಕರ್‌ ಮುಂತಾದವರು ನಿಸ್ವಾರ್ಥವಾದ ದೇಶ, ಸಮಾಜ ಸೇವೆ ಮಾಡಿರುವ ಕಾರಣಕ್ಕಾಗಿಯೇ ಇಂದಿಗೂ ಅವರನ್ನು ಸ್ಮರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇಂದಿನ ಆಧುನಿಕ ವಾತಾವರಣದಲ್ಲಿ ಹಣ, ಅಧಿಕಾರ, ಅಂತಸ್ತು ಗಳಿಸುವುದೇ ಪ್ರಮುಖ ಗುರಿಯಾಗಿದೆ. ಅದರಿಂದಲೇ ತೃಪ್ತಿ ಎಂಬ ಮನೋಭಾವ ಇದೆ. ಹಣ, ಅಧಿಕಾರ, ಅಂತಸ್ತನಿಂದ ನೆಮ್ಮದಿ, ತೃಪ್ತಿ ದೊರೆಯುವುದಿಲ್ಲ, ಸಂಕಷ್ಟದಲ್ಲಿರುವರ ಒಂದಷ್ಟು ಸೇವೆ ಮಾಡುವುದರಿಂದ ಆತ್ಮತೃಪ್ತಿ ದೊರೆಯುತ್ತದೆ. ಇತರರ ಸೇವೆ ಮಾಡುವುದು ದೇವರಿಗೂ ಸಹ ತೃಪ್ತಿಯನ್ನು ನೀಡುತ್ತದೆ ಎಂದು ತಿಳಿಸಿದರು.

ಪ್ರಸ್ತುತ ವಾತಾವರಣದಲ್ಲಿ ಎಲ್ಲಾ ಕಡೆ ಸ್ವಾರ್ಥವೇ ಹೆಚ್ಚಾಗಿ ಕಂಡು ಬರುತ್ತಿದೆ. ಹೆತ್ತ ತಂದೆ-ತಾಯಿಯನ್ನ ಚೆನ್ನಾಗಿ ನೋಡಿಕೊಳ್ಳದ ನಿಕೃಷ್ಟ… ಪರಿಸ್ಥಿತಿ ಕಂಡು ಬರುತ್ತಿರುವುದು ಆತಂಕಕಾರಿ. ಬೆಂಗಳೂರಿನಂತಹ ವಾತಾವರಣ ಈಗ ದಾವಣಗೆರೆಯ ಪ್ರತಿಷ್ಠಿತ ಬಡಾವಣೆಯಲ್ಲೂ ಕಂಡು ಬರುತ್ತಿದೆ. ವಯಸ್ಸಾದ ತಂದೆ-ತಾಯಿಗಳನ್ನು ನೋಡಿಕೊಳ್ಳದೆ ವೃದ್ಧಾಶ್ರಮಗಳ ಪಾಲು ಮಾಡುತ್ತಿರುವುದು ನಿಜಕ್ಕೂ ದೊಡ್ಡ ದುರಂತ. ತಂದೆ-ತಾಯಿಗಳನ್ನ ನೋಡಿಕೊಳ್ಳುವುದು ಸಹ ಒಂದು ಸೇವೆಯೇ. ಹಾಗಾಗಿ ಎಲ್ಲರೂ ತಂದೆ-ತಾಯಿಗಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಮಾನವರಾಗಿ ಹುಟ್ಟಿರುವ ಪ್ರತಿಯೊಬ್ಬರು ಸಾಯಲೇಬೇಕು. ಸಾಯುವ ಮುನ್ನ ಪರರಿಗಾಗಿ ಬದುಕುವಂತಹ ಶ್ರೇಷ್ಠ ಗುಣವನ್ನು ನಮ್ಮದಾಗಿಸಿಕೊಳ್ಳಬೇಕು. ಪರರಿಗೆ ಕೈಲಾದಷ್ಟು ಸಹಾಯ, ನೆರವು, ಸೇವೆ ನೀಡುವ ಉದ್ದೇಶದಿಂದ ಪ್ರಾರಂಭವಾಗಿರುವ ಸಮಾನ ಮನಸ್ಕರ ಸೇವಾ ಸಮಿತಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುವ ಮೂಲಕ ಸಾರ್ಥಕತೆ ಪಡೆದುಕೊಳ್ಳಲಿ ಎಂದು ಆಶಿಸಿದರು.

ಸಮಾನ ಮನಸ್ಕರ ಸೇವಾ ಸಮಿತಿ ಸಂಸ್ಥೆ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಎಚ್‌.ಎಸ್‌. ಮಂಜುನಾಥ್‌ ಕುರ್ಕಿ, ಜಾಗತೀಕರಣವನ್ನು ಅಪ್ಪಿ, ಒಪ್ಪಿಕೊಂಡು, ಸ್ವಾರ್ಥತೆಯ ಜೀವನ ನಡೆಸುತ್ತಿರುವ ಕಾಲಘಟ್ಟದಲ್ಲಿ ಸಮಾನ ಮನಸ್ಕರು ದೊರೆಯುವರೇ ಎಂಬ ಪ್ರಶ್ನೆ ಮತ್ತು ಸವಾಲು ಎಲ್ಲರ ಮುಂದಿದೆ. ಎಲ್ಲರೂ ಅವಕಾಶ, ಪರಿಸ್ಥಿತಿ, ತಮಗೆ ಬೇಕಾದ ಅನುಕೂಲಕ್ಕಾಗಿ ಅಸಹಜ ಬದುಕು ನಡೆಸುತ್ತಿದ್ದಾರೆ. ಸಂಬಂಧಗಳು ಯೂಸ್‌ ಆ್ಯಂಡ್‌ ಥ್ರೋ… ಎನ್ನುವಂತಾಗುತ್ತಿವೆ. ಅಂತದ್ದರ ನಡುವೆಯೂ ಕೆಲವರು ನಿಸ್ವಾರ್ಥತೆಯಿಂದ ಸಮಾಜ ಸೇವೆ ಮಾಡುತ್ತಿದ್ದಾರೆ. ಒಳ್ಳೆಯ ಉದ್ದೇಶದೊಂದಿಗೆ ಪ್ರಾರಂಭವಾಗಿರುವ ಸಮಾನ ಮನಸ್ಕರ ಸೇವಾ ಸಮಿತಿ ಸಮಾಜಕ್ಕೆ ಒಳ್ಳೆಯ ಕೆಲಸ ಮಾಡಲಿ ಎಂದು ತಿಳಿಸಿದರು.

ಸಮಾನ ಮನಸ್ಕರ ಸೇವಾ ಸಮಿತಿ ಅಧ್ಯಕ್ಷ ಬಂಕಾಪುರದ ಚನ್ನಬಸಪ್ಪ ಪ್ರಾಸ್ತಾವಿಕ ಮಾತುಗಳಾಡಿದರು. ಸಮಿತಿ ಅಧ್ಯಕ್ಷ ಜಿ.ಅಬ್ದುಲ್‌ ಸತ್ತಾರ್‌ಸಾಬ್‌ ಅಧ್ಯಕ್ಷತೆ ವಹಿಸಿದ್ದರು. ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ಕೆ.ಎಚ್‌. ಮಂಜುನಾಥ್‌, ಉಪಾಧ್ಯಕ್ಷ ಬಕ್ಕೇಶ್‌ ನಾಗನೂರು ಇತರರು ಇದ್ದರು. ಸಂಗೀತಾ ಮತ್ತು ವೀಣಾ ಪ್ರಸಾದ್‌ ಪ್ರಾರ್ಥಿಸಿದರು. ಟಿ. ಅಜ್ಜೇಶಿ ಸ್ವಾಗತಿಸಿದರು. ಸಾಲಿಗ್ರಾಮ ಗಣೇಶ ಶೆಣೈ ನಿರೂಪಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.