4 ಕಾರ್ಮಿಕ ಕೋಡ್‌ ಮಾಲೀಕರ ಪರ

ಮೋದಿ ಸರ್ಕಾರ ಮಸೂದೆ ಮೂಲಕ ಕಾರ್ಮಿಕ ಸೌಲಭ್ಯ ಕಬಳಿಸುತ್ತಿದೆ

Team Udayavani, Aug 3, 2019, 10:05 AM IST

3-Agust-4

ದಾವಣಗೆರೆ: ಜಯದೇವ ವೃತ್ತದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಪ್ರತಿಭಟನೆ.

ದಾವಣಗೆರೆ: ಕೇಂದ್ರ ಸರ್ಕಾರ ಕಾರ್ಮಿಕ ವಲಯ ವಿರೋಧಿ 4 ಕಾರ್ಮಿಕ ಕೋಡ್‌ 2019, ಮೋಟಾರ್‌ ವಾಹನ ಮಸೂದೆ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಶುಕ್ರವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ 44 ಕಾರ್ಮಿಕ ಕಾಯ್ದೆಗಳ ಬದಲಿಗೆ 4 ಕಾರ್ಮಿಕ ಕೋಡ್‌-2019 ಮಸೂದೆ ಮಂಡಿಸಿದೆ. 4 ಕಾರ್ಮಿಕ ಕೋಡ್‌ ಮಸೂದೆ ಅಕ್ಷರಶಃ ಕಾರ್ಮಿಕ ವಿರೋಧಿ. 4 ಕಾರ್ಮಿಕ ಕೋಡ್‌ ಮಾಲೀಕರ ಶೋಷಣೆ ಮತ್ತು ಲೂಟಿ ಪರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ವರ್ಗ ಅನೇಕ ವರ್ಷಗಳಿಂದ ನಡೆಸಿದ ಹೋರಾಟದ ಫಲವಾಗಿ 44 ಕಾರ್ಮಿಕ ಕಾಯ್ದೆಗಳು ಜಾರಿಗೆ ಬಂದ ಪರಿಣಾಮ ಕಾರ್ಮಿಕರಿಗೆ ಅಲ್ಪಸ್ವಲ್ಪ ಸೌಲಭ್ಯ ದೊರೆಯುತ್ತಿದ್ದವು. ಆದರೆ, ಕಾರ್ಮಿಕ ವಿರೋಧಿ ಮೋದಿ ಸರ್ಕಾರ ದೊರೆಯುತ್ತಿದ್ದ ಸೌಲಭ್ಯಗಳನ್ನೂ ಕಿತ್ತುಕೊಳ್ಳುವ ಪ್ರಯತ್ನ ನಡೆಸುತ್ತಲೇ ಇತ್ತು. ಈಗ ಮಸೂದೆಯ ಮೂಲಕ ಕಾರ್ಮಿಕ ಸೌಲಭ್ಯ ಕಬಳಿಸುತ್ತಿದೆ ಎಂದು ದೂರಿದರು.

ಭಾರತದ 5ನೇ ಕಾರ್ಮಿಕ ಸಮ್ಮೇಳನದ ತೀರ್ಮಾನದಂತೆ ಮಾಸಿಕ ವೇತನ 18 ಸಾವಿರ ಎಂದು ನಿರ್ಧರಿಸಲಾಗಿತ್ತು. ಕೇಂದ್ರದ ಮಸೂದೆ ಪ್ರಕಾರ ವೇತನ 4,628 ರೂ. ಮಾತ್ರ ಎಂದಿರುವುದು ಅತ್ಯಂತ ಖಂಡನೀಯ.

ಕೆಲಸ ಮಾಡುವ ಸ್ಥಳದಲ್ಲಿ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷೆ ಇತ್ಯಾದಿಗಳು ಹಿಂದಿನ ಕಾಯ್ದೆಯಲ್ಲಿ ಇದ್ದವು. ಹೊಸ ಮಸೂದೆ ಆ ಎಲ್ಲವನ್ನೂ ಹಿಂದಕ್ಕೆ ಪಡೆಯುವ ಹುನ್ನಾರ ಹೊಂದಿದೆ. ಕೆಲಸದ ವೇಳೆಯಲ್ಲಿನ ಯಾವುದೇ ರೀತಿಯ ಅವಘಡ, ಅನಾರೋಗ್ಯಕ್ಕೆ ಕಾರ್ಮಿಕರೇ ಹೊಣೆಗಾರರು. ಮಾಲೀಕರಲ್ಲ ಎಂಬುದು ಕಾರ್ಮಿಕ, ಜೀವ ವಿರೋಧಿ ನೀತಿ ಎಂದು ದೂರಿದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೋಟಾರ್‌ ವಾಹನ ಮಸೂದೆ ಅತ್ಯಂತ ಅಪಾಯಕಾರಿ. ಅಪಘಾತ ಸಂಖ್ಯೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಮಸೂದೆ ಸಾರ್ವಜನಿಕರಿಗೆ, ವಾಹನ ಮಾಲೀಕರು, ಚಾಲಕರಿಗೆ ಸಾಕಷ್ಟು ಕಿರುಕುಳಕ್ಕೆ ಕಾರಣವಾಗುತ್ತದೆ. ಕೂಡಲೇ ಎರಡೂ ಮಸೂದೆಗಳನ್ನ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಖಂಡರಾದ ಎಚ್.ಕೆ. ರಾಮಚಂದ್ರಪ್ಪ, ಆನಂದರಾಜ್‌, ಆವರಗೆರೆ ಎಚ್.ಜಿ. ಉಮೇಶ್‌, ಕೆ.ಎಲ್. ಭಟ್, ಮಂಜುನಾಥ್‌ ಕುಕ್ಕುವಾಡ, ಕೆ.ಎಚ್. ಆನಂದರಾಜ್‌, ಆವರಗೆರೆ ವಾಸು, ಆವರಗೆರೆ ಚಂದ್ರು, ಎನ್‌.ಟಿ. ಬಸವರಾಜ್‌, ಐರಣಿ ಚಂದ್ರು, ಸರೋಜಾ, ಎಂ.ಬಿ. ಶಾರದಮ್ಮ, ವಿಶಾಲಾಕ್ಷಿ, ಎಸ್‌.ಎಸ್‌. ಮಲ್ಲಮ್ಮ, ಲೋಕಿಕೆರೆ ಆಂಜಿನಪ್ಪ, ದಾದಾಪೀರ್‌, ಕೆ. ಶ್ರೀನಿವಾಸಮೂರ್ತಿ, ಉಮಾಪತಿ, ಲೋಕೇಶ್‌, ಶಿವಾಜಿರಾವ್‌, ಲಕ್ಷ್ಮಣ್‌, ಶಿವಕುಮಾರ್‌, ಜಯಂತಿ, ಮಂಜುನಾಥ್‌ ಕೈದಾಳೆ, ಹಾಲೇಶನಾಯ್ಕ ಇತರರು ಇದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.